ಮಂದಗತಿಯಲ್ಲಿರುವ ಆರ್ಥಿಕತೆಯ ಚೇತರಿಕೆಗೆ ಕೇಂದ್ರ ಹಣಕಾಸು ಸಚಿವಾಲಯ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ರಿಯಲ್ ಎಸ್ಟೇಟ್ ಚೇತರಿಕೆಗಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಭ ಸಮಾಚಾರ ನೀಡಿದ್ದಾರೆ.
ದೇಶದಲ್ಲಿ ಸ್ಥಗಿತಗೊಂಡಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ ಪೂರ್ಣಗೊಳಿಸಲು 25 ಸಾವಿರ ಕೋಟಿ ರುಪಾಯಿಗಳ ನಿಧಿಯನ್ನ ಸ್ಥಾಪಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ. ಪ್ರಸ್ತುತ 1600ಕ್ಕೂ ಹೆಚ್ಚು ವಸತಿ ಯೋಜನೆಗಳು ಸ್ಥಗಿತಗೊಂಡಿವೆ. ಈ ಯೋಜನೆಗಳನ್ನು ಪೂರ್ಣಗೊಳಿಸಲು ಹಣಕಾಸು ನೆರವು ನೀಡುವುದು ಈ ನಿಧಿಯ ಉದ್ದೇಶವಾಗಿದೆ.

ನವದೆಹಲಿಯ ಶಾಸ್ತ್ರಿ ಭವನದ ಪಿಐಬಿ ಕಾನ್ಫರೆನ್ಸ್ ಹಾಲ್ನಲ್ಲಿ ಮಾದ್ಯಮ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳನ್ನು ಮಾದ್ಯಮಗಳಿಗೆ ವಿವರಿಸಿದರು.
ಈ ಪರ್ಯಾಯ ಹೂಡಿಕೆ ನಿಧಿಯಲ್ಲಿ (ಎಐಎಫ್) ಕೇಂದ್ರ ಸರ್ಕಾರ 10 ಸಾವಿರ ಕೋಟಿ, ಎಸ್ಬಿಐ ಮತ್ತು ಎಲ್ಐಸಿ ಜೊತೆಯಾಗಿ 15 ಸಾವಿರ ಕೋಟಿ ತೊಡಗಿಸಲಿವೆ. 4.58 ಲಕ್ಷ ಮನೆಗಳನ್ನು ಒಳಗೊಂಡಿರುವ 1600 ಗೃಹ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸಲು ಈ ನಿಧಿಯನ್ನು ಬಳಸಲಾಗುತ್ತದೆ.
ಈ ಯೋಜನೆಯಿಂದಾಗಿ ಉದ್ಯೋಗ ಸೃಷ್ಠಿಯಾಗುವುದು. ಜೊತೆಗೆ ಕಬ್ಬಿಣ, ಉಕ್ಕು, ಸಿಮೆಂಟ್ ಬೇಡಿಕೆ ಹೆಚ್ಚಳಗೊಂಡು ಕಬ್ಬಿಣ ಮತ್ತು ಉಕ್ಕು ಕೈಗಾರಿಕೆಗಳ ಬೇಡಿಕೆಗಳು ಪುನರುಜ್ಜೀವನ ಆಗಲಿವೆ. ಇದು ಆರ್ಥಿಕತೆಯ ಪ್ರಮುಖ ಕ್ಷೇತ್ರಗಳಲ್ಲಿನ ಸದ್ಯದ ಒತ್ತಡವನ್ನು ನಿವಾರಿಸುವ ಗುರಿಯನ್ನು ಹೊಂದಿದೆ.
ಇಲ್ಲಿ ಸರ್ಕಾರ ಪ್ರಾಯೋಜಕರಾಗಿ ಕಾರ್ಯ ನಿರ್ವಹಿಸುತ್ತದೆ ಮತ್ತು 10 ಸಾವಿರ ಕೋಟಿ ರುಪಾಯಿ ನಿಧಿಯನ್ನು ಪರಿಹಾರವಾಗಿ ನೀಡುತ್ತದೆ. ಇದು ವಸತಿ ಕಟ್ಟಡ ಅಭಿವೃದ್ಧಿದಾರರಿಗೆ ಅನುಕೂಲ ಕಲ್ಪಿಸಲಿದ್ದು, ಮನೆ ಖರೀದಿದಾರರಿಗೆ ಮನೆಗಳ ವಿತರಣೆಯ ಖಚಿತತೆ ಸಿಗಲಿದೆ.
ಕೇಂದ್ರ ಸರ್ಕಾರದ ಈ ಯೋಜನೆಯಿಂದ ಮನೆ ಖರೀದಿದಾರರಿಗೆ ಭಾರೀ ಪ್ರಯೋಜನವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅಲ್ಲದೆ ಈ ಮಹತ್ವದ ಘೋಷಣೆಯಿಂದ ರಿಯಲ್ ಎಸ್ಟೇಟ್ ಉದ್ಯಮ ಕ್ಷೇತ್ರವು ಮತ್ತೆ ಚೇತರಿಸಿಕೊಳ್ಳುವ ಆಶಾವಾದ ವ್ಯಕ್ತವಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications