ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಲೈಫ್ ಇನ್ಷೂರೆನ್ಸ್ ಆಫ್ ಇಂಡಿಯಾವು ಯೆಸ್ ಬ್ಯಾಂಕ್ ನ ಶೇಕಡಾ 49ರಷ್ಟು ಷೇರುಗಳನ್ನು ಖರೀದಿಸಬಹುದು. ಪ್ರಿಫರೆನ್ಷಿಯಲ್ ಷೇರುಗಳನ್ನು ತಲಾ 2 ರುಪಾಯಿಗಳಂತೆ 490 ಕೋಟಿ ರುಪಾಯಿಗೆ ಖರೀದಿ ಮಾಡಬಹುದು ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
ಓಪನ್ ಆಫರ್ ನಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೆಬಿ ವಿನಾಯಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಸರ್ಕಾರಿ ಸಂಸ್ಥೆಗಳಿಗೆ ಯೆಸ್ ಬ್ಯಾಂಕ್ ಖರೀದಿ ಮಾಡುವುದಕ್ಕೆ ಕೇಂದ್ರದಿಂದ ಅನುಮತಿ ಸಿಕ್ಕಿದೆ. ಸದ್ಯಕ್ಕೆ ಯೆಸ್ ಬ್ಯಾಂಕ್ ಬ್ಯಾಡ್ ಲೋನ್ ಗಳ ಸುಳಿಯಲ್ಲಿ ಸಿಲುಕಿದ್ದು, ಬಂಡವಾಳ ಸಂಗ್ರಹ ಹೊಸದಾಗಿ ಮಾಡುವುದಕ್ಕೆ ಅನಿಶ್ಚಿತತೆ ಎದುರಿಸುತ್ತಿದೆ.
ಈಗಿನ ಸಮಸ್ಯೆಯ ಕಾರಣಕ್ಕೆ 2019 ಡಿಸೆಂಬರ್ ತ್ರೈ ಮಾಸಿಕದ ಫಲಿತಾಂಶವನ್ನು ಈ ತನಕ ಯೆಸ್ ಬ್ಯಾಂಕ್ ಘೋಷಣೆ ಮಾಡಿಲ್ಲ. ಇನ್ನು ಈಗಿನ ಬೆಳವಣಿಗೆಗಳ ಬಗ್ಗೆ ಸೆಬಿ ನಿಯಮಾವಳಿ ಅನ್ವಯವೇ ಪ್ರತಿಕ್ರಿಯೆ ನೀಡುವುದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಯೆಸ್ ಬ್ಯಾಂಕ್ ತಿಳಿಸಿವೆ.

ಯೆಸ್ ಬ್ಯಾಂಕ್ ನ ಪ್ರವರ್ತಕರಾದ ಮಧು ಕಪೂರ್, ಯೆಸ್ ಕ್ಯಾಪಿಟಲ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ಅಂಡ್ ಮ್ಯಾಗ್ಸ್ ಫಿನ್ವೆಸ್ಟ್ ಬಳಿ 8.33 ಪರ್ಸೆಂಟ್ ಷೇರಿದೆ ಎಂದು ಸ್ಟಾಕ್ ಎಕ್ಸ್ ಚೇಂಜ್ ನ ಮಾಹಿಗಳು ತಿಳಿಸುತ್ತಿವೆ. ಬ್ಯಾಂಕ್ ನ ಸಹ ಸ್ಥಾಪಕ ರಾಣಾ ಕಪೂರ್ ಅವರು ಬ್ಯಾಂಕ್ ನಲ್ಲಿನ ತಮ್ಮ ಷೇರಿನ ಪಾಲನ್ನು ಸಂಪೂರ್ಣವಾಗಿ ಮಾರಾಟ ಮಾಡಿದ್ದಾರೆ.
ವಿದೇಶಿ ಹೂಡಿಕೆದಾರರು 15.17 ಪರ್ಸೆಂಟ್, ಎಲ್ ಐಸಿ 8.06 ಮತ್ತು ಮ್ಯೂಚುವಲ್ ಫಂಡ್ ಗಳು 5.09 ಪರ್ಸೆಂಟ್ ನಷ್ಟು ಷೇರು ಹೊಂದಿವೆ.
ಠೇವಣಿ ಮೊತ್ತವನ್ನು ಐವತ್ತು ಸಾವಿರಕ್ಕಿಂತ ಹೆಚ್ಚಿಗೆ ವಿಥ್ ಡ್ರಾ ಮಾಡಲು ಅವಕಾಶ ನೀಡದಂತೆ ಯೆಸ್ ಬ್ಯಾಂಕ್ ಗೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications