ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಿಗೆ ಹೋದಾಗ ನಿಮಗೆ ಬೇಕಾದ ಅಧಿಕಾರಿಗಳ ಚೇರ್ ಖಾಲಿ ಇರುತ್ತದೆ. ಆ ಅಧಿಕಾರಿಯ ಬಗ್ಗೆ ವಿಚಾರಿಸಿದಾಗ ಅವರು ಧಮ್ ಹೊಡೆಯಲು ಹೋಗಿದ್ದಾರೆ, ಅವರು ಎಲೆ ಅಡಿಕೆ ತಿನ್ನಲು ಹೋಗಿದ್ದಾರೆ ಎಂಬ ಸಬೂಬು ಇನ್ನು ಮುಂದೆ ಕೇಳಿಸುವುದು ಕಷ್ಟ. ಇದಕ್ಕೆಲ್ಲಾ ಕಾರಣ ಸರ್ಕಾರ ಹೊರ ತಂದ ಆ ಒಂದು ಆದೇಶ. ನಿಜಕ್ಕೂ ಆ ಆದೇಶ ಕೆಲ ಸರ್ಕಾರಿ ಅಧಿಕಾರಿಗಳ ನಿದ್ದೆಯನ್ನು ಹಾಳು ಮಾಡಿದೆ. ಯಾವುದದು ಆದೇಶ ಇಲ್ಲಿದೆ ವರದಿ.
ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಈ ಆದೇಶದಿಂದ ಸರ್ಕಾರಿ ನೌಕರನು ಕಚೇರಿಗಳಲ್ಲಿ ಹಾಗೂ ಕಚೇರಿಯ ಪ್ರದೇಶದಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿರ್ಬಂಧಿಸಿ ಆದೇಶದ ಹೊರಡಿಸಿದೆ. ಇನ್ನು ಮುಂದೆ ಕಚೇರಿ ಆವರಣದಲ್ಲಿ ತಾಂಬುಕ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆದೇಶದಲ್ಲಿ ಏನಿದೆ?
ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳ ಹಿತದ ದೃಷ್ಟಿಯಿಂದ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಧೂಮಪಾನ ಹಾಗೂ ತಂಬಾಕಿನ ಇತರೆ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿಇಂತಹ ಉತ್ಪನ್ನಗಳ ಸೇವೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳ 2021ರ 31ರಲ್ಲಿ ತಿಳಿಸಿರುವಂತೆ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಆದೇಶಿಸಲಾಗಿದೆ.
ಈ ನಿಯಮ ಜಾರಿಗೆ ತಂದಿರುವುದರಿಂದ ಸಿಬ್ಬಂದಿಗಳ ಆರೋಗ್ಯದ ಹಿತವನ್ನು ಕಾಯುವುದು ಪ್ರಮುಖ ಕರ್ತವ್ಯ ಆಗಿದೆ. ಸಾರ್ವಜನಿಕರನ್ನು ಧೂಮಪಾನದಿಂದ ರಕ್ಷಿಸುವ ಉದ್ದೇಶದಿಂದ ಈ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೆ ಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆಯನ್ನು ಬ್ಯಾನ್ ಮಾಡಲಾಗಿದೆ. ಇಷ್ಟೇ ಅಲ್ಲದೆ ಈ ಸಂಬಂಧ ಕಚೇರಿಗಳಲ್ಲಿ ಫಲಕವನ್ನು ಅಳಡಿಸುವಂತೆ ಸೂಚಿಸಲಾಗಿದೆ.
ಕಾನೂನಾತ್ವಕ ಸೂಚನೆಗಳ ಹೊರತಾಗಿಯೂ, ಸಹ ಸರ್ಕಾರಿ ಕಚೇರಿಗಳ ಆವಾರಣದಲ್ಲಿ ಧೂಮಪಾನ, ತಂಬಾಕು, ಗುಟ್ಕಾ ಸೇವನೆ ಮಾಡುವುದು ಕಂಡು ಬಂದಲ್ಲಿ ಆ ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ. ಇದಕ್ಕೂ ಮೊದಲು ಸಾರ್ವಜನಿಕರ ಪ್ರದೇಶಗಳಲ್ಲಿ ಧೂಮಪಾನ ನಿಷೇಧಿಸಲಾಗಿತ್ತು. ಈಗ ಈ ಆದೇಶ ಸರ್ಕಾರಿ ಕಚೇರಿಗಳಿಗೂ ಪ್ರವೇಶಿಸಿದೆ.
ತೆಲಂಗಾಣದಲ್ಲೂ ಬ್ಯಾನ್
ಇತ್ತೀಚಿಗೆ ತೆಲಂಗಾಣ ಸರ್ಕಾರ ರಾಜ್ಯಾದ್ಯಂತ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಸಂಗ್ರಹಣೆ, ವಿತರಣೆ, ಸಾಗಣೆ, ಮಾರಾಟವನ್ನು ಒಂದು ವರ್ಷದ ಅವಧಿಗೆ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯ ಸ್ಥಾಪನೆ ಆದಾಗಿನಿಂದ ರಾಜ್ಯದಲ್ಲಿ ಗುಟ್ಕಾ ನಿಷೇಧಿಸಲಾಗಿದೆ. ಸರ್ಕಾರದ ಈ ಕ್ರಮವನ್ನು ತೆಲಂಗಾಣ ಹೈಕೋರ್ಟ್ 2021ರಲ್ಲಿ ಎತ್ತಿ ಹಿಡಿದಿತ್ತು. ಗುಟ್ಕಾ ತಯಾರಿಕ ಕಂಪನಿಗಳು ಸುಪ್ರೀಂ ಕೊರ್ಟ್ ಮೆಟ್ಟಿಲು ಏರಿದ್ದವು. ಈ ಬ್ಯಾನ್ ಅಧಿಸೂಚನೆಗೆ 2022ರ ಮಾರ್ಚ್ನಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications