ನವದೆಹಲಿ, ಜೂನ್ 29: ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯನ್ನು ಹರಾಜು ಹಾಕಲು ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ, ಕೊಳ್ಳುವವರು ಯಾರೂ ಮುಂದೆ ಬಾರದಿದ್ದರಿಂದ ಅನೇಕ ಸಲ ಹರಾಜು ಪ್ರಕ್ರಿಯೆಯನ್ನು ಮುಂದೆ ಹಾಕಲಾಗಿತ್ತು.
ಕಳೆದ ಒಂದು ತಿಂಗಳಿನಿಂದ ಕೋವಿಡ್ ಬಿಕ್ಕಟ್ಟಿನಿಂದಾಗಿಯೂ ಹರಾಜು ಪ್ರಕ್ರಿಯೆ ಸಂಪೂರ್ಣ ಸ್ಥಗೀತಗೊಂಡಿತ್ತು. ಇದೀಗ ಮತ್ತೆ ಕೇಂದ್ರ ಸರ್ಕಾರ ಹರಾಜು ಪ್ರಕ್ರಿಯೆ ಅವಧಿಯನ್ನು ವಿಸ್ತರಿಸಿದೆ. ಆಗಸ್ಟ್ 31 ರವರೆಗೆ ಬಿಡ್ ಮಾಡುವ ಪ್ರಕ್ರಿಯೆಯನ್ನು ವಿಸ್ತರಿಸಿ ಆದೇಶಿಸಲಾಗಿದೆ.
ಹರಾಜು ಪ್ರಕ್ರಿಯೆಗೆ ಗಡುವು ವಿಸ್ತರಿಸುವುದು ಇದು ಮೂರನೇ ಬಾರಿಯಾಗಿದೆ. ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆಯ ಖರೀದಿ ಪ್ರಕ್ರಿಯೆಗೆ ಮೇ 30ರ ವರೆಗೂ ಯಾವುದೇ ಬಿಡ್ ಬಂದಿರಲಿಲ್ಲ. ಈಗ ಕೋವಿಡ್ ಕಾರಣದಿಂದ ಮತ್ತೆ ಮುಂದೆ ಹೋದಂತಾಗಿದೆ.
ಜನವರಿ 27 ರಂದು ಪ್ರಾರಂಭ
ಈ ಮೊದಲು ಹರಾಜು ಪ್ರಕ್ರಿಯೆಯನ್ನು ಜನವರಿ 27 ರಂದು ಪ್ರಾರಂಭಿಸಲಾಯಿತು. ಕೋವಿಡ್ -19 ನಿಂದ ಉದ್ಭವಿಸುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆಸಕ್ತಿ ಬಿಡ್ದಾರರಿಂದ ವಿನಂತಿಯ ಮೇರೆಗೆ ಹರಾಜು ಪ್ರಕ್ರಿಯೆ ಮುಂದೂಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಮಾರ್ಚ್ 17 ಕೊನೆ ದಿನಾಂಕವಾಗಿತ್ತು
ಜನವರಿಯಲ್ಲಿ ಬಿಡ್ ಕೊನೆ ದಿನಾಂಕವನ್ನು ಮಾರ್ಚ್ 17 ಎಂದು ಹೇಳಲಾಗಿತ್ತು. ನಂತರ ಇದನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಯಿತು. ಮತ್ತೆ ಜೂನ್ 30 ರವರೆಗೆ ವಿಸ್ತರಿಸಲಾಯಿತು. ಈಗ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಬಿಡ್ ಸಲ್ಲಿಸಲು ಆಸಕ್ತಿ ತೋರಿಸಿಲ್ಲ
ಏರ್ ಇಂಡಿಯಾದಿಂದ ಸಾವಿರಾರು ಕೋಟಿ ನಷ್ಟವಾಗುತ್ತಿದ್ದು, ಸಂಸ್ಥೆ ಸಾಲದಲ್ಲಿದೆ. ಸರ್ಕಾರವು ಇದರ ಮೇಲಿನ ಶೇ 76 ರಷ್ಟು ಬಂಡವಾಳವನ್ನು ಹಿಂದಕ್ಕೆ ಪಡೆದುಕೊಳ್ಳಲು ಉದ್ದೇಶಿಸಿದೆ. ಸರ್ಕಾರವು ಷರತ್ತುಗಳನ್ನು ಬಹಿರಂಗಪಡಿಸಿದ ಬಳಿಕ ಯಾವ ಕಂಪೆನಿಯೂ ಬಿಡ್ ಸಲ್ಲಿಸಲು ಆಸಕ್ತಿ ತೋರಿಸಿಲ್ಲ. ಜೆಟ್ ಏರ್ವೇಸ್ ಮತ್ತು ಇಂಡಿಗೋ ಸಂಸ್ಥೆಗಳು ಈಗಾಗಲೇ ಕಣದಿಂದ ಹಿಂದಕ್ಕೆ ಸರಿದಿವೆ.
ಮಾರಾಟಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕುತೂಹಲವಿದೆ
ಬಿಡ್ಡಿಂಗ್ ಮೊತ್ತದ ಆಧಾರದ ಮೇಲೆ ಸಂಸ್ಥೆಯನ್ನು ಮಾರಾಟ ಮಾಡುವುದೋ ಅಥವಾ ಬಿಡುವುದೋ ಎಂಬುದನ್ನು ನಿರ್ಧರಿಸಲಾಗುವುದು ಎರಡು ಹಂತಗಳಲ್ಲಿ ಬಿಡ್ಡಿಂಗ್ ನಡೆಯಲಿದೆ. ಮೊದಲು ಬಿಡ್ಡಿಂಗ್ಗೆ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಬೇಕು. ಅದರಲ್ಲಿ ಯಶಸ್ವಿಯಾದವರಿಗೆ ಆರ್ಥಿಕ ಬಿಡ್ ಸಲ್ಲಿಸಲು ಹೇಳಲಾಗುತ್ತದೆ. ಮಾರಾಟಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕುತೂಹಲವಿದೆ. ಆದರೆ, ನಮಗೆ ಅಗತ್ಯವಿರುವಷ್ಟು ಹಣ ಬಾರದಿದ್ದರೆ, ಮಾರಾಟವನ್ನು ನಡೆಸಬೇಕೇ ಅಥವಾ ಬೇಡವೇ ಎಂಬುದನ್ನು ಬಳಿಕ ನಿರ್ಧರಿಸುತ್ತೇವೆ ಎಂದು ವಿಮಾನಯಾನ ಸಚಿವಾಲಯ ತಿಳಿಸಿದೆ.
More From GoodReturns

8th Pay Commission: ಕೇಂದ್ರ ಸರ್ಕಾರದ ನೌಕರರೇ…8ನೇ ವೇತನ ಆಯೋಗಕ್ಕೆ ಈ ದಿನಾಂಕದೊಳಗೆ ಅಭಿಪ್ರಾಯ ಸಲ್ಲಿಸಿ!

Central Govt: ಇನ್ಮೇಲೆ ವಾಹನ ವರ್ಗಾಯಿಸುವುದು ಮತ್ತಷ್ಟು ಸುಲಭ? ಕೇಂದ್ರದಿಂದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications