ಜೂನ್ ನಿಂದ ಆಗಸ್ಟ್ 2020ರ ತನಕ ಮೂರು ತಿಂಗಳ ಕಾಲ ಉದ್ಯೋಗಿಗಳು, ಉದ್ಯೋಗದಾತರ 12+12 ಸೇರಿ, 24 ಪರ್ಸೆಂಟ್ ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಅನ್ನು ಕೇಂದ್ರ ಸರ್ಕಾರವೇ ಪಾವತಿ ಮಾಡಲಿದೆ. ಆದರೆ ಇದು ಎಲ್ಲ ಸಂಸ್ಥೆ ಹಾಗೂ ಉದ್ಯೋಗಿಗಳಿಗೆ ಅನ್ವಯ ಆಗುವುದಿಲ್ಲ.
ಯಾವ ಸಂಸ್ಥೆಯಲ್ಲಿ ನೂರರೊಳಗೆ ಸಿಬ್ಬಂದಿ ಇದ್ದು, ಆ ಪೈಕಿ ಶೇಕಡಾ 90ರಷ್ಟು ಸಿಬ್ಬಂದಿಯ ವೇತನವು ತಿಂಗಳಿಗೆ 15 ಸಾವಿರ ರುಪಾಯಿಗಿಂತ ಕಡಿಮೆ ಇರುತ್ತದೋ ಅಂಥ ಸಿಬ್ಬಂದಿ ಹಾಗೂ ಸಂಸ್ಥೆ ಪರವಾಗಿ ಇಪಿಎಫ್ ಪಾವತಿಯನ್ನು ಸರ್ಕಾರವೇ ಮಾಡುತ್ತದೆ. ಜೂನ್- ಜುಲೈ ಹಾಗೂ ಆಗಸ್ಟ್ ತಿಂಗಳ ಮೊತ್ತವನ್ನು ಪಾವತಿ ಮಾಡಲಾಗುತ್ತದೆ.
ಈ ಹಿಂದೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳ ಇಪಿಎಫ್ (ಉದ್ಯೋಗದಾತರು ಹಾಗೂ ಉದ್ಯೋಗಿಗಳು) ಸರ್ಕಾರದಿಂದ ಪಾವತಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಇದೀಗ ಅವಧಿ ವಿಸ್ತರಣೆ ಮಾಡಿರುವುದರಿಂದ ಮಾರ್ಚ್ ನಿಂದ ಆಗಸ್ಟ್ ತನಕ ಒಟ್ಟು ಆರು ತಿಂಗಳ ಕಾಲ ಸರ್ಕಾರವೇ ಉದ್ಯೋಗದಾತರು- ಉದ್ಯೋಗಿಗಳ ಇಪಿಎಫ್ ಕೊಡುಗೆಯನ್ನು ನೀಡಿದಂತಾಗುತ್ತದೆ.

ಉದ್ಯೋಗಿಗಳ ಮೂಲವೇತನ (ಬೇಸಿಕ್ ಸ್ಯಾಲರಿ) 12 ಪರ್ಸೆಂಟ್ ನಂತೆ ಉದ್ಯೋಗಿ ಹಾಗೂ ಉದ್ಯೋಗದಾತರು ಹಣ ತುಂಬುತ್ತಾರೆ. ಉದ್ಯೋಗಿಯ ಪಿಎಫ್ ಖಾತೆಯಲ್ಲಿ ಆ ಹಣ ಪ್ರತಿ ತಿಂಗಳೂ ಜಮೆ ಆಗುತ್ತಾ ಹೋಗುತ್ತದೆ. ಅದಕ್ಕೆ ಬಡ್ಡಿ ಕೂಡ ಸೇರುತ್ತದೆ. ಇನ್ನು ಉದ್ಯೋಗಿ ಪಿಂಚಣಿ ಯೋಜನೆ (ಇಪಿಎಸ್) ಅಡಿಯಲ್ಲಿ ಉದ್ಯೋಗದಾತರು 8.33% ಹಣ ತುಂಬುತ್ತಾರೆ.
ಕೊರೊನಾದಿಂದ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ ಸಂಸ್ಥೆಗಳಿಗೆ ನೆರವು ನೀಡುವುದಕ್ಕೆ ಆತ್ಮನಿರ್ಭರ್ ಭಾರತ್ ಅಡಿಯಲ್ಲಿ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನಾದಲ್ಲಿ ಸರ್ಕಾರ ಈ ಪರಿಹಾರ ಘೋಷಣೆ ಮಾಡಿದೆ. 3.67 ಲಕ್ಷ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ 72.22 ಲಕ್ಷ ಕಾರ್ಮಿಕರಿಗೆ ಈ ಘೋಷಣೆಯಿಂದ ಅನುಕೂಲ ಆಗಲಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications