ದೇಶದಲ್ಲಿನ ಮಂದಗತಿಯ ಆರ್ಥಿಕತೆಗೆ ಚುರುಕು ಮುಟ್ಟಿಸಲು 2020ರ ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ಕಡಿತಗೊಳಿಸುವ ಸಾಧ್ಯತೆ ಇದೆ. ಜನರಲ್ಲಿ ಬಳಕೆಯ ಪ್ರಮಾಣವನ್ನು ಹೆಚ್ಚಿಸಲು ಮತ್ತು ಬೆಳವಣಿಗೆ ದರವನ್ನು ಪುನರುಜ್ಜೀವನಗೊಳಿಸಲು ತೆರಿಗೆ ಕಡಿತಕ್ಕೆ ಕೇಂದ್ರ ಚಿಂತನೆ ನಡೆಸಿದೆ.
2020ರಲ್ಲಿ ಮಂಡಿಸಲಾಗುವ ಬಜೆಟ್ ಕುರಿತು ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ಧತೆ ನಡೆಸುತ್ತಿದ್ದಾರೆ. ಯಾವುದೇ ವಿನಾಯಿತಿಗಳಿಲ್ಲದ ಸಮರೀತಿಯ ತೆರಿಗೆ ದರ, ಹೆಚ್ಚಿನ ಆದಾಯ ಗಳಿಸುವವರಿಗೆ ಹೊಸ ರೀತಿಯ ತೆರಿಗೆ ಹಾಗೂ ಕಾರ್ಪೋರೇಟ್ ತೆರಿಗೆಗೆ ಅನುಗುಣವಾಗಿ ವೈಯಕ್ತಿಕ ಆದಾಯ ತೆರಿಗೆಯನ್ನು ಕಡಿತಗೊಳಿಸುವ ಪ್ರಸ್ತಾಪಗಳನ್ನು ಬಜೆಟ್ಗೆ ಮುಂಚಿತವಾಗಿ ಪರಿಶೀಲಿಸಲಾಗುತ್ತಿದೆ.

ಈ ವಿಚಾರವಾಗಿ ಉನ್ನತ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಪ್ರಸ್ತಾಪಗಳನ್ನು ಹಣಕಾಸು ಸಚಿವಾಲಯ ಪರವಾಗಿ ಮತ್ತು ವಿರುದ್ಧವಾಗಿ ವಾದಗಳನ್ನು ಮಂಡಿಸಲಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆಬ್ರವರಿಯಲ್ಲಿ ಬಜೆಟ್ ಮಂಡಿಸಲಾಗುತ್ತದೆ.
'' ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಲಾಗುತ್ತದೆ. ಅಂತಹ ಯಾವುದೇ ಕ್ರಮವನ್ನು ಲಾಭದ ಹಿನ್ನೆಲೆಯಲ್ಲಿ ಪರಿಶೀಲಿಸುವ ಅಗತ್ಯವಿರುತ್ತದೆ. ಅದು ಒಟ್ಟಾರೆ ಆರ್ಥಿಕತೆಗೆ ತರುವ ವೆಚ್ಚಕ್ಕೆ ತಗುಲುತ್ತದೆ'' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದಾಯ ತೆರಿಗೆ ಕಡಿತಕ್ಕೆ ಪರ್ಯಾಯವೆಂದರೆ ಪಿಎಂ-ಕಿಸಾನ್ನಂತಹ ಯೋಜನೆಗಳ ಮೂಲಕ ನೇರವಾಗಿ ಜನರ ಕೈನಲ್ಲಿ ಹೆಚ್ಚಿನ ಹಣವನ್ನು ಇಡುವುದು ಅಥವಾ ಮೂಲ ಸೌಕರ್ಯಗಳ ಮೇಲಿನ ವೆಚ್ಚವನ್ನು ಹೆಚ್ಚಿಸುವುದು. ಇದರಿಂದ ಆದಾಯ ತೆರಿಗೆ ಪಾವತಿಸುವ 30 ಮಿಲಿಯನ್ ವ್ಯಕ್ತಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications