ಬೆಂಗಳೂರು, ಜೂನ್ 5: ಕೋವಿಡ್ ಲಾಕ್ಡೌನ್ ನ ಸತತ 75 ದಿನಗಳ ಬಳಿಕ ಕರ್ನಾಟಕದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಭಾಗವಹಿಸಿದ್ದ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ ಸಂಘ ಹಾಗು ಟ್ಯಾಕ್ಸಿ ಮಾಲಿಕರ ಸಂಘಗಳ ನಿಯೋಗವು ಸರ್ಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟರು
ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
More From GoodReturns

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications