ಸರ್ಕಾರದಿಂದ ವಿಮಾನ ನಿಲ್ದಾಣ ಹಾಗೂ ವಿಮಾನ ಯಾನ ಸಂಸ್ಥೆ ನಡೆಸಬಾರದು ಎಂದು ಕೇಂದ್ರ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಇನ್ನು 2020ರೊಳಗೇ ಏರ್ ಇಂಡಿಯಾದ ಖಾಸಗೀಕರಣ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಏರ್ ಇಂಡಿಯಾವು ಆಸ್ತಿ. ಅದಕ್ಕೆ ಉತ್ತಮ ದಾಖಲೆ ಇದೆ. ತರಬೇತಿ ಪಡೆದ ವೃತ್ತಿಪರರುದ್ದಾರೆ. ಆದರೆ ಸರ್ಕಾರದಿಂದ ವಿಮಾನಯಾನ ಸಂಸ್ಥೆ ಹಾಗೂ ವಿಮಾನ ನಿಲ್ದಾಣ ನಡೆಸಬಾರದು. ನಮ್ಮ ಸರ್ಕಾರದ ನಿಯಮವು ವಾಣಿಜ್ಯ ಸಂಸ್ಥೆಗಳಿಗೂ ಅನ್ವಯ ಆಗಬೇಕು ಎಂದು ಅವರು ತಿಳಿಸಿದ್ದಾರೆ.
ಸಮಸ್ಯೆ ಹೆಚ್ಚಾಗುತ್ತಿದೆ. ಬಿಡ್ಡರ್ ಗಳಿಗೆ ಆಕರ್ಷಕವಾಗಿ ಕಾಣುತ್ತಿದೆ. ಆದ್ದರಿಂದ ಇದನ್ನು ಖಾಸಗೀಕರಣ ಮಾಡಬೇಕು. ಈ ವರ್ಷದೊಳಗೆ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂಬ ನಂಬಿಕೆ ನನಗಿದೆ ಎಂದು ಅವರು ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರವು ಏರ್ ಇಂಡಿಯಾ ಖರೀದಿಗಾಗಿ ಆಸಕ್ತಿ ವ್ಯಕ್ತಪಡಿಸುವವರಿಗಾಗಿ ಎರಡು ತಿಂಗಳು ಅವಧಿ ವಿಸ್ತರಿಸಿತ್ತು. ಅಕ್ಟೋಬರ್ 30ರ ತನಕ ಅವಕಾಶ ನೀಡಿತ್ತು. ಕೊರೊನಾ ಕಾರಣಕ್ಕೆ ಈ ತೀರ್ಮಾನ ತೆಗೆದುಕೊಂಡಿತು.

ಇನ್ನು ವಿಮಾನ ನಿಲ್ದಾಣಗಳ ಖಾಸಗೀಕರಣ ನಿರ್ಧಾರವನ್ನೂ ಕೇಂದ್ರ ಸಚಿವರು ಸಮರ್ಥಿಸಿಕೊಂಡರು. ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಅವರು ದೆಹಲಿ, ಮುಂಬೈ ವಿಮಾನ ನಿಲ್ದಾಣವನ್ನು ಖಾಸಗೀಕರಣ ಮಾಡಿದರು ಎಂದು ಹೇಳಿದರು.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications