ನವದೆಹಲಿ, ಸೆಪ್ಟೆಂಬರ್ 10: ಪ್ರಸ್ತುತ ಸುಮಾರು 11 ಕೋಟಿ ಜನರು ಉದ್ಯೋಗ ಹೊಂದಿರುವ ಸೂಕ್ಮ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯದಲ್ಲಿ 5 ಕೋಟಿ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಸರ್ಕಾರ ಹೊಂದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮತ್ತು ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ನೀತಿ ಆಯೋಗ್ ಅವರಿಂದ ಆತ್ಮನಿರ್ಭರ್ ಭಾರತ್ ಅರೈಸ್ ಅಟಲ್ ನ್ಯೂ ಇಂಡಿಯಾ ಚಾಲೆಂಜ್ಗಳನ್ನು ಪ್ರಾರಂಭಿಸಲು ಆಯೋಜಿಸಲಾದ ವರ್ಚುವಲ್ ಮೀಟ್ನಲ್ಲಿ ಮಾತನಾಡಿದ ಗಡ್ಕರಿ ''ಜಿಡಿಪಿಗೆ ಎಂಎಸ್ಎಂಇ ಕೊಡುಗೆಯನ್ನು ಸುಮಾರು ಶೇಕಡಾ 30 ರಿಂದ 50 ಕ್ಕೆ ಹೆಚ್ಚಿಸಲು ಸರ್ಕಾರ ಉದ್ದೇಶಿಸಿದೆ. ಇದರ ಜೊತೆಗೆ ರಫ್ತುಗಳಲ್ಲಿ ಶೇಕಡಾ 49 ಪ್ರತಿಶತದಿಂದ 60 ಪ್ರತಿಶತದವರೆಗೆ ಏರಿಕೆಯ ಗುರಿ ಹೊಂದಿದೆ'' ಎಂದಿದ್ದಾರೆ.

ನೀತಿ ಆಯೋಗ್ನ ಆತ್ಮನಿರ್ಭರ ಭಾರತ್ ಅರೈಸ್ ಅಟಲ್ ನ್ಯೂ ಇಂಡಿಯಾ ಚಾಲೆಂಜ್ ಉಪಕ್ರಮವನ್ನು ಗಡ್ಕರಿ ಶ್ಲಾಘಿಸಿದರು ಮತ್ತು ಮೌಲ್ಯವರ್ಧನೆಯನ್ನು ಖಾತರಿಪಡಿಸುವ ವಿವಿಧ ಕ್ಷೇತ್ರಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಹೊಸ ತಂತ್ರಜ್ಞಾನವನ್ನು ಬಳಸುವುದನ್ನು ಉತ್ತೇಜಿಸುವಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದರು.
115 ಮಹತ್ವಾಕಾಂಕ್ಷೆಯ ಜಿಲ್ಲೆಗಳು ಸೇರಿದಂತೆ ಹಿಂದುಳಿದ ಮತ್ತು ಬುಡಕಟ್ಟು ಪ್ರದೇಶಗಳನ್ನು ಬೆಳವಣಿಗೆಯ ಪಥದಲ್ಲಿ ತಂದಾಗ ದೇಶದ ಬೆಳವಣಿಗೆ ಮತ್ತಷ್ಟು ವೇಗವಾಗಲಿದೆ ಎಂದು ಸಚಿವರು ಒತ್ತಿ ಹೇಳಿದರು. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಈ ಪ್ರದೇಶಗಳ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಪ್ರಧಾನಿ ಒತ್ತು ನೀಡಿದ್ದಾರೆ ಎಂದು ಅವರು ಗಮನಸೆಳೆದರು.
ಸಂಶೋಧನೆ, ನಾವೀನ್ಯತೆಗಳನ್ನು ವೇಗವರ್ಧಿಸಲು ಮತ್ತು ವಲಯದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಒದಗಿಸಲು ಸಚಿವಾಲಯಗಳು ಮತ್ತು ಅದಕ್ಕೆ ಸಂಬಂಧಿಸಿದ ಕೈಗಾರಿಕೆಗಳೊಂದಿಗೆ ಪೂರ್ವಭಾವಿಯಾಗಿ ಸಹಕರಿಸುವುದು ಆತ್ಮನಿರ್ಭರ್ ಭಾರತ್ ARISE ಅಟಲ್ ನ್ಯೂ ಇಂಡಿಯಾ ಚಾಲೆಂಜಸ್ ಕಾರ್ಯಕ್ರಮದ ಉದ್ದೇಶವಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications