ಕಲ್ಲಿದ್ದಲು ಗಣಿಗಾರಿಕೆ ಕಾನೂನುಗಳ ಸರಳೀಕರಣ: ಕೇಂದ್ರ ಒಪ್ಪಿಗೆ

ಕಲ್ಲಿದ್ದಲು ಗಣಿಗಾರಿಕೆಯಲ್ಲಿ ವಿದೇಶಿ ನೇರ ಹೂಡಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಗಣಿಗಾರಿಕೆಗೆ ಸಂಬಂಧಿಸಿದಂತೆ ಇರುವ ಕಾನೂನುಗಳನ್ನು ಸರಳಗೊಳಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ. ಈ ಉದ್ದೇಶಕ್ಕಾಗಿ ಕಾನೂನಿನ ತಿದ್ದುಪಡಿ ತರುವ ಸುಗ್ರಿವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

'' ಕಲ್ಲಿದ್ದಲು ವಲಯದಲ್ಲಿ ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುವ ಪ್ರಯತ್ನ ಇದಾಗಿದೆ. ಇಂಧನ ಆಮದು ಮಾಡಿಕೊಳ್ಳುವ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ'' ಎಂದು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಸಂಪುಟ ಸಭೆಯ ಬಳಿಕ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಕಲ್ಲಿದ್ದಲು ಗಣಿಗಾರಿಕೆ ಕಾನೂನುಗಳ ಸರಳೀಕರಣ: ಕೇಂದ್ರ ಒಪ್ಪಿಗೆ

ಕಾನೂನಿನ ತಿದ್ದುಪಡಿ ಸುಗ್ರಿವಾಜ್ಞೆಯಿಂದಾಗಿ ಸದ್ಯ ಕಾರ್ಯನಿರ್ವಹಿಸುತ್ತಿರುವ 46 ಕಬ್ಬಿಣ ಅದಿರು ಮತ್ತು ಇತರ ಗಣಿಗಳ ಹರಾಜು ಇದೇ ವರ್ಷ ಮಾರ್ಚ್ 31ರ ಒಳಗೆ ನಡೆಸಲು ಅವಕಾಶ ದೊರೆಯಲಿದೆ . ಇದೇ ಮೊದಲ ಬಾರಿಗೆ ಕಲ್ಲಿದ್ದಲು ಗಣಿಗಳ ಬ್ಲಾಕ್‌ಗಳನ್ನು ಜಾಗತಿಕ ಟೆಂಡರ್ ಮೂಲಕ ಹರಾಜು ಮಾಡಲಾಗುವುದು. ಇದರಿಂದ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್‌ನ (ಸಿಐಎಲ್) ಏಕಸ್ವಾಮ್ಯ ಕೊನೆಗೊಳ್ಳಲಿದ್ದು ಸ್ಪರ್ಧೆ ಹೆಚ್ಚಲಿದೆ ಎಂದಿದ್ದಾರೆ.

ಈಗಿರುವ ಗಣಿಯನ್ನು ಇತರ ಕಂಪನಿಯಿಂದ ಖರೀದಿಸಿದರೆ ಹೊಸದಾಗಿ ಗಣಿಗಾರಿಕೆ ಆರಂಭಿಸಲು ಖರೀದಿದಾರರು ಮತ್ತೆ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮೋದನೆ ಪಡೆಯಬೇಕಾಗಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+