ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಬೆಲೆ ಏರಿಕೆ ಬಿಸಿ ಜನರನ್ನು ಕಾಡುತ್ತಲೇ ಇದೆ. ಅತ್ತ ಮೆಟ್ರೋ, ಬಸ್, ನೀರು, ವಿದ್ಯುತ್ ಹೀಗೆ ರಾಜ್ಯ ಸರ್ಕಾರ ದರ ಏರಿಕೆ ಶಾಕ್ (Price Hike Shock) ನೀಡುತ್ತಲೇ ಬಂದಿದೆ. ಅತ್ತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿ ಗುಡ್ ನ್ಯೂಸ್ ಕೊಟ್ಟರೆ, ಇತ್ತ ಪುರುಷರಿಗೆ ಕಳೆದ ವರ್ಷ ಬಸ್ ದರ ಏರಿಕೆ ಮಾಡಿ ಬಿಗ್ ಶಾಕ್ ಕೊಟ್ಟಿತ್ತು. ಆದ್ರೆ ಇದೀಗ ಬಸ್ ಪ್ರಯಾಣಿಕರಿಗೆ (Bus Passengers) ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಅದೇನು ಗೊತ್ತಾ? ಇಲ್ಲಿದೆ ಓದಿ.

2025 ರಂತೆ, 2026 ರಲ್ಲಿಯೂ ಬಸ್ ಟಿಕೆಟ್ ದರ ಏರಿಕೆಯಾಗಬಹುದು, ಮತ್ತೆ ಪುರಷರ ಜೇಬಿಗೆ ಕತ್ತರಿ ಬೀಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದ್ರೆ ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸದ್ಯಕ್ಕೆ ಬಸ್ ಟಿಕೆಟ್ ದರದಲ್ಲಿ ಯಾವುದೇ ಏರಿಕೆಯಾಗುವುದಿಲ್ಲ ಎಂದು ಘೋಷಣೆ ಮಾಡುವ ಮೂಲಕ ಪ್ರಯಾಣಿಕರಿಗೆ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.
2025ರಲ್ಲಿ ಏರಿಕೆ ಕಂಡಿದ್ದ ಬಸ್ ಟಿಕೆಟ್ ದರ!
ಕಳೆದ ವರ್ಷದ ಜನವರಿಯಲ್ಲಿ ರಾಜ್ಯದ ಬಸ್ ಟಿಕೆಟ್ ದರದಲ್ಲಿ ಶೇ.15% ರಷ್ಟು ಏರಿಕೆ ಕಂಡಿತ್ತು. ಆ ನಂತರ ಸರ್ಕಾರವು ಪ್ರತೀ ವರ್ಷ ದರ ಪರಿಷ್ಕರಣೆ ಮಾಡಲಾಗುತ್ತೆ ಎಂದು ಹೇಳಲಾಗಿತ್ತು. ಆದ್ರೆ ಇದೀಗ ಈ ವರ್ಷ ದರ ಏರಿಕೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
ಇನ್ನು ದರ ಏರಿಕೆ ಕುರಿತು ಮಾತನಾಡಿರುವ ಸಚಿವ ರಾಮಲಿಂಗಾರೆಡ್ಡಿ, "ಸದ್ಯಕ್ಕೆ ದರ ಏರಿಕೆ ಮಾಡುವುದಿಲ್ಲ. ಸಮಿತಿ ರಚನೆಯಾಗಿ ವರದಿ ಬಿಡುಗಡೆ ಮಾಡಿದ ನಂತರವೇ, ದರ ಏರಿಕೆ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ" ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇನ್ನು ಮುಂದಿನ 6 ತಿಂಗಳಲ್ಲಿ ಸಮಿತಿ ರಚನೆಯಾಗಲಿದೆ. ಆ ಬಳಿಕ ಬಸ್ ಟಿಕೆಟ್ ದರ ಪರಿಷ್ಕರಣೆಯಾಗಲಿದೆ. ಆದ್ದರಿಂದ ಮುಂದಿನ ವರ್ಷ 2027 ರಲ್ಲಿ ಬಸ್ ಟಿಕೆಟ್ ದರದಲ್ಲಿ ಪರಿಷ್ಕರಣೆಯಾಗಲಿದೆ ಎಂದು ಹೇಳಲಾಗಿದೆ.
ಸಚಿವರ ಈ ಹೇಳಿಕೆಯಿಂದ ರಾಜ್ಯದ ಪುರುಷರಿಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಂತಾಗಲಿದೆ. ಕಳೆದ ವರ್ಷದಲ್ಲಿ ಮೆಟ್ರೋ, ಬಸ್ ಟಿಕೆಟ್ ದರಗಳು ಒಂದೇ ಬಾರಿ ಒಮ್ಮೆಲೆ ಭಾರೀ ಏರಿಕೆ ಕಂಡಿತ್ತು. ಇದರಿಂದ ಪ್ರಯಾಣಿಕರು ಕೂಡಾ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ರೆ ಇದೀಗ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಬದಲಾವಣೆ ಮಾಡದಿರುವುದರಿಂದ ಹಿಂದಿನ ಬೆಲೆಯಲ್ಲೇ ಸ್ಥಿರವಾಗಿರುತ್ತದೆ ಎನ್ನಲಾಗಿದೆ.
ಸರ್ಕಾರದ ಈ ನಿರ್ಧಾರದಿಂದ ದಿನನಿತ್ಯ ಸಾರಿಗೆ ಬಸ್ಗಳಲ್ಲಿ ಸಂಚಾರ ಮಾಡುವ ಲಕ್ಷಾಂತರ ಪ್ರಯಾಣಿಕರಿಗೆ ಭಾರೀ ಅನುಕೂಲವಾಗಲಿದೆ. ಅಲ್ಲದೇ ಆರ್ಥಿಕವಾಗಿಯೂ ಭಾರೀ ಪ್ರಯೋಜನ ಸಿಗಲಿದೆ. ಕಳೆದ ವರ್ಷದ ಏರಿಕೆಯಿಂದಲೇ ಬಡವರ ಜೇಬಿಗೆ ಭಾರೀ ಹೊಡೆತ ಬಿದ್ದಿತ್ತು. ಆದ್ರೆ ಇದೀಗ ಅದೇ ಬೆಲೆಯಲ್ಲಿ ಮುಂದುವರೆಯುವುದಾಗಿ ಸರ್ಕಾರ ಭರವಸೆ ನೀಡಿದ್ದು, ಇದರಿಂದ ಜನಸಾಮಾನ್ಯರಿಗೆ ಭಾರೀ ಅನುಕೂಲವಾಗಲಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications