ಕಳೆದ ವರ್ಷ ಈರುಳ್ಳಿ ಬೆಲೆ ನಿಯಂತ್ರಣಕ್ಕಾಗಿ ಸರ್ಕಾರಿ ಸ್ವಾಮ್ಯದ ಎಂಎಂಟಿಸಿ ಆಮದು ಮಾಡಿಕೊಂಡ 35,857 ಟನ್ ಈರುಳ್ಳಿಯನ್ನು ವಿಲೇವಾರಿ ಮಾಡುವುದನ್ನು ಸರ್ಕಾರ ಪೂರ್ಣಗೊಳಿಸಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಈರುಳ್ಳಿ ತೀವ್ರ ಬೆಲೆ ಏರಿಕೆ ಸಂದರ್ಭದಲ್ಲಿ 2019 ರ ನವೆಂಬರ್ನಲ್ಲಿ ಎಂಎಂಟಿಸಿ ಮೂಲಕ 1.2 ಲಕ್ಷ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಅಂದಿನಿಂದ, 35,857 ಟನ್ ಈರುಳ್ಳಿಯನ್ನು ಸಾಗರೋತ್ತರ ಮಾರುಕಟ್ಟೆಯಿಂದ ಬೆಲೆ ಸ್ಥಿರೀಕರಣ ನಿಧಿ (ಪಿಎಸ್ಎಫ್) ಅಡಿಯಲ್ಲಿ ಖರೀದಿಸಿತು.

ಹೀಗೆ ಆಮದು ಮಾಡಿಕೊಂಡ ಈರುಳ್ಳಿ ವಿಲೇವಾರಿಯನ್ನು ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳಿಸಿದೆ ಎಂದು ಸಚಿವಾಲಯ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ಒಟ್ಟು 35,857 ಟನ್ ಆಮದು ಮಾಡಿಕೊಂಡ ಈರುಳ್ಳಿಯನ್ನು ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಚಂಡೀಗಡ, ಉತ್ತರ ಪ್ರದೇಶ, ಅಸ್ಸಾಂ, ಉತ್ತರಾಖಂಡ್, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಮತ್ತು ಗೋವಾ ಸೇರಿದಂತೆ ಮುಂತಾದ ರಾಜ್ಯಗಳಿಗೆ ರವಾನಿಸಲಾಗಿದೆ.
ಸ್ವಲ್ಪ ಪ್ರಮಾಣದ ಈರುಳ್ಳಿಯನ್ನು ಹರಾಜಿನ ಮೂಲಕ ಮಾರಾಟ ಮಾಡಲಾಯಿತು. ಮದರ್ ಡೈರಿ, ಕೇಂದ್ರೀಯ ಭಂಡಾರ್ ಮತ್ತು ನಾಫೆಡ್ ನಂತಹ ಏಜೆನ್ಸಿಗಳು ಆಮದು ಮಾಡಿದ ಈರುಳ್ಳಿಯನ್ನು ಬೆಲೆಗಳನ್ನು ತಣ್ಣಗಾಗಿಸಲು ಚಿಲ್ಲರೆ ಮಾರಾಟ ಮಾಡಲು ಸೂಚಿಸಲಾಗಿದೆ ಎಂದು ವರದಿ ತಿಳಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications