ಚೀನಾ ಸಹವಾಸ ಸಾಕಪ್ಪ! ಎಂದು ಹೊರಬರಲು ಸಿದ್ಧತೆ ನಡೆಸಿರುವ ಕಂಪನಿಗಳನ್ನು ಭಾರತದತ್ತ ಸೆಳೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಎಂದೇ ಮಾಸ್ಟರ್ ಪ್ಲಾನ್ವೊಂದನ್ನು ತಯಾರು ಮಾಡುತ್ತಿದ್ದು, ಭಾರೀ ವಿನಾಯಿತಿಗಳನ್ನು ನೀಡುವ ಯೋಜನೆ ರೂಪಿಸುತ್ತಿದೆ.
ಕೊರೊನಾವೈರಸ್ನಿಂದಾಗಿ ಇಡೀ ಜಗತ್ತಿನ ಆರ್ಥಿಕತೆ ತತ್ತರಿಸಿದೆ. ಇದಕ್ಕೆ ಪ್ರಮುಖ ಕಾರಣ ಚೀನಾ ಎಂದು ವಿಶ್ವವೇ ಡ್ರ್ಯಾಗನ್ ರಾಷ್ಟ್ರದ ಮೇಲೆ ಸಿಟ್ಟಾಗಿದೆ. ಹೀಗಾಗಿಯೇ ಅಮೆರಿಕಾ, ಜಪಾನ್, ದಕ್ಷಿಣ ಕೊರಿಯಾ, ಕೆನಡಾ ಸೇರಿದಂತೆ ಹಲವಾರು ದೇಶಗಳ ಕಂಪನಿಗಳನ್ನು ಭಾರತದತ್ತ ಕರೆತರಲು ಸಿದ್ಧತೆ ನಡೆಯುತ್ತಿದೆ.
10 ವರ್ಷ ತೆರಿಗೆ ವಿನಾಯಿತಿ ಚಿಂತನೆ
ಚೀನಾದಿಂದ ಮುನಿಸಿಕೊಂಡಿರುವ ರಾಷ್ಟ್ರಗಳ ಕಂಪನಿಗಳನ್ನು ತನ್ನತ್ತ ಸೆಳೆಯಲು ಭಾರತ ಕಾರ್ಯತಂತ್ರ ರೂಪಿಸಿದೆ. ದೇಶದಲ್ಲಿ ಮುಂದಿನ ಮೂರು ವರ್ಷಗಳ ಕಾಲ ಹೊಸದಾಗಿ 500 ಮಿಲಿಯನ್ ಡಾಲರ್ವರೆಗೂ ಹೂಡಿಕೆ ಮಾಡುವ ಕಂಪನಿಗಳಿಗೆ 10 ವರ್ಷದವರೆಗೆ ತೆರಿಗೆ ವಿನಾಯಿತಿ ನೀಡುವ ಚಿಂತನೆಯಲ್ಲಿ ವಿತ್ತ ಸಚಿವಾಲಯ ಇದೆ. ಈ ಬಗ್ಗೆ ಕೇಂದ್ರ ವಾಣಿಜ್ಯ ಸಚಿವಾಲಯ ನೀಲನಕ್ಷೆ ಸಿದ್ಧಪಡಿಸಿದ್ದು, ಸದ್ಯ ಹಣಕಾಸು ಇಲಾಖೆ ಬಳಿ ಈ ಪ್ರಸ್ತಾವನೆ ಇದೆ ಎಂಬುದಾಗಿ ಬ್ಲೂಮ್ಬರ್ಗ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇದನ್ನೇ ಅವಕಾಶವಾಗಿ ಬಳಸಿಕೊಳ್ಳಲು ಮುಂದಾಗಿರುವ ಕೇಂದ್ರ ಸರಕಾರವು, ಇಲ್ಲಿ ಹೂಡಿಕೆ ಮಾಡಬಯಸುವ ಕಂಪೆನಿಗಳಿಗೆ 10 ವರ್ಷ ಸಂಪೂರ್ಣ ತೆರಿಗೆ ವಿನಾಯಿತಿ ನೀಡಲು ಯೋಜನೆಯೊಂದನ್ನು ಸಿದ್ಧಪಡಿಸಿದೆ.
ಟ್ಯಾಕ್ಸ್ ಹಾಲಿಡೇ ಪಡೆಯಲು 3 ವರ್ಷದೊಳಗೆ ಭಾರತದಲ್ಲಿ ಹಣ ಹೂಡಬೇಕು
ಜೂನ್ 1ರಿಂದ ಆರಂಭವಾಗಿ ಮುಂದಿನ 3 ವರ್ಷಗಳ ಒಳಗೆ 500 ದಶಲಕ್ಷ ಡಾಲರ್ ಹೂಡಿಕೆ ಮಾಡುವ ಕಂಪೆನಿಗಳಿಗೆ 10 ವರ್ಷಗಳ ತೆರಿಗೆ ವಿನಾಯಿತಿ ನೀಡುವ ಅವಕಾಶ ಸಿಗುತ್ತದೆ. ಅದರಲ್ಲೂ ಈ ಹಣವನ್ನು ವೈದ್ಯಕೀಯ ಉಪಕರಣ, ಎಲೆಕ್ಟ್ರಾನಿಕ್ಸ್, ಟೆಲಿಕಾಂ ಉಪಕರಣ ಮತ್ತು ಕ್ಯಾಪಿಟಲ್ ಗೂಡ್ಸ್ ಮೇಲೆ ಹೂಡಿಕೆ ಮಾಡಬೇಕು.
ಅಲ್ಪಾವಧಿಯ ತೆರಿಗೆ ವಿನಾಯಿತಿಯು ಸಿಗುತ್ತದೆ
10 ವರ್ಷದ ತೆರಿಗೆ ವಿನಾಯಿತಿ ಜೊತೆಗೆ ಕಂಪನಿಗಳಿಗೆ ಅಲ್ಪಾವಧಿಯ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಹಣಕಾಸು ಸಚಿವಾಲಯ ಚಿಂತನೆ ನಡೆಸುತ್ತಿದೆ. 100 ದಶಲಕ್ಷ ಡಾಲರ್ ಹಣವನ್ನು ಹೂಡಿಕೆ ಮಾಡುವ ಕಂಪೆನಿಗಳು ಜವಳಿ, ಆಹಾರ ಸಂಸ್ಕರಣೆ, ಚರ್ಮ ಮತ್ತು ಪಾದರಕ್ಷೆ ಉದ್ಯಮದಲ್ಲಿ ಹಣ ಹೂಡಿಕೆ ಮಾಡಬೇಕಾಗುತ್ತದೆ. ಈ ಕಂಪನಿಗಳಿಗೆ 4 ವರ್ಷದವರೆಗೂ ತೆರಿಗೆ ವಿನಾಯಿತಿ ನೀಡುವ ಯೋಚನೆ ಹಣಕಾಸು ಇಲಾಖೆಗೆ ಮುಂದಿದೆ. ಜೊತೆಗೆ 6 ವರ್ಷಗಳಿಗೆ ಕೇವಲ 10 ಪರ್ಸೆಂಟ್ ಕಾರ್ಪೊರೇಟ್ ತೆರಿಗೆ ನಿಗದಿ ಮಾಡುವ ಬಗ್ಗೆಯೂ ಪ್ರಸ್ತಾವನೆ ಇದೆ.
ಕಂಪನಿಗಳಿಗೆ ಸುಲಭವಾಗಿ ಭೂಮಿ ದೊರೆಯುವಂತೆ ಮಾಡುವುದು
ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿರುವ ಭಾರತದಲ್ಲಿ ಹಣ ಹೂಡಿಕೆ ಮಾಡಲಿರುವ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ದೊರೆಯುವಂತೆ ಮಾಡುವುದು ಸಹ ಸರ್ಕಾರದ ಕಾರ್ಯತಂತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಚೀನಾದಿಂದ ಹೊರಬಂದಿರುವ, ಹಾಗೂ ಹೊರಬರಲು ಮನಸ್ಸು ಮಾಡಿರುವ ಕಂಪನಿಗಳನ್ನು ಆಕರ್ಷಿಸಲು ನಾನಾ ರೂಪುರೇಷೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications