ಬೆಂಗಳೂರು, ಜೂನ್ 17: ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಅಡಿ ಕೃಷಿ ಭೂಮಿ ಖರೀದಿಸುವ ಕೈಗಾರಿಕೋದ್ಯಮಿಗಳಿಗೆ ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊಸ ಕಾಯ್ದೆಯ ಅನುಸಾರ ಕೈಗಾರಿಕಾ ಉದ್ದೇಶಕ್ಕೆ ಕೃಷಿ ಭೂಮಿ ಖರೀದಿಸಲು ಕೈಗಾರಿಕೋದ್ಯಮಗಳಿಗೆ ಅವಕಾಶ ಮಾಡಿ ಕೊಡಲಾಗಿದೆ. ಈ ಪ್ರಕಾರ ಆಸಕ್ತರು ಕರ್ನಾಟಕ ಉದ್ಯೋಗ ಮಿತ್ರ ಪೋರ್ಟ್ಲ್ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಕೈಗಾರಿಕೋದ್ಯಮಿಗಳು ಖರೀದಿಸಬೇಕಿರುವ ಜಮೀನಿನ ಸೂಕ್ತ ದಾಖಲೆಗಳೊಂದಿದೆ ಕರ್ನಾಟಕ ಉದ್ಯೋಗ ಮಿತ್ರ ಪೋರ್ಟ್ಲ್ನಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ವೇಳೆ ಅರ್ಜಿದಾರರು ಜಮೀನಿನ ವಾಸ್ತಾವಾಂಶದ ವರದಿ ಹಾಗೂ ಭೂ ಪರಿವರ್ತನಾ ಶುಲ್ಕ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳು 15 ದಿನಗಳ ಒಳಗೆ ವರದಿ ತಯಾರು ಮಾಡಬೇಕು.
ಲ್ಯಾಂಡ್ ಅಡಿಟ್ ಕಮಿಟಿ
ಜಿಲ್ಲಾಧಿಕಾರಿಯಿಂದ ವರದಿ ಬಂದ ನಂತರ ಅಥವಾ ನಿಗದಿತ ಅವಧಿಯೊಳಗೆ ವರದಿ ಬರದಿದ್ದಲ್ಲಿ ಅರ್ಜಿದಾರರು ಉದ್ಯೋಗ ಮಿತ್ರ ಪೋರ್ಟ್ಲ್ನಲ್ಲಿರುವ ಮಾಹಿತಿಯೊಂದಿಗೆ ಪ್ರಸ್ತಾವನೆಯನ್ನು ಲ್ಯಾಂಡ್ ಅಡಿಟ್ ಕಮಿಟಿ ಮುಂದೆ ಸಲ್ಲಿಸಬೇಕು.
ಉಪ ನೋಂದಣಾಧಿಕಾರಿ ನೋಂದಣಿ ಮಾಡತಕ್ಕದ್ದು
ಲ್ಯಾಂಡ್ ಅಡಿಟ್ ಕಮಿಟಿ ಅನುಮೋದಿಸಿದ ಪ್ರಸ್ತಾವನೆಯನ್ನು ಕರ್ನಾಟಕ ಉದ್ಯೋಗ ಮಿತ್ರವು ಸಿಂಗಲ್ ವಿಂಡೋ ಒಪ್ಪಿಗೆ ಸಮಿತಿ ಮತ್ತು ರಾಜ್ಯ ಮಟ್ಟದ ಒಪ್ಪಿಗೆ ಸಮಿತಿ ಮುಂದೆ ಮಂಡಿಸಬೇಕು. ಈ ಎರಡು ಸಮಿತಿಗಳು ಅನುಮೋದಿಸಿದ ನಂತರವೇ ಉಪ ನೋಂದಣಾಧಿಕಾರಿ ನೋಂದಣಿ ಮಾಡತಕ್ಕದ್ದು. ಇದಕ್ಕೆ ಕಾವೇರಿ ಪೋರ್ಟಲ್ ಉಪಯೋಗ ಪಡೆದುಕೊಳ್ಳಬೇಕು.
ಆನ್ಲೈನ್ ಮೂಲಕ ಹಕ್ಕು ಬದಲಾವಣೆ ಮಾಡಬೇಕು
ಅನುಮೋದನೆಗೊಂಡ ನಂತರ ಜಮೀನುಗಳನ್ನು ಕೈಗಾರಿಕೋದ್ಯಮಿಗಳು ಭೂಮಿ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಹಕ್ಕು ಬದಲಾವಣೆ ಮಾಡಬೇಕು. ಆನ್ಲೈನ್ನಲ್ಲಿ ಭೂ ಪರಿವರ್ತನಾ ಶುಲ್ಕ ಕಟ್ಟಿದ ನಂತರ ಭೂ ಪರಿವರ್ತನೆ ಆದೇಶವನ್ನು ಭೂಮಿ ವೆಬ್ಸೈಟ್ ಮುಖಾಂತರ ಹೊರಡಿಸಬೇಕು.
ಕಾಯ್ದೆಗೆ ವಿರೋಧ
ಕರ್ನಾಟಕ ಸರ್ಕಾರ ಹೆಚ್ಚು ಆದಾಯ ಇರುವವರಿಗೂ ಹಾಗು ಕೈಗಾರಿಕೋದ್ಯಮಗಳಿಗೆ ಕೃಷಿ ಜಮೀನು ಖರೀದಿ ಮಾಡಲು ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿದೆ. ಇದರಿಂದ ರೈತರ ಜಮೀನಿಗೆ ಹೆಚ್ಚು ಮೌಲ್ಯ ಬರುತ್ತದೆ ಎಂದು ಸರ್ಕಾರದ ವಾದವಾದರೆ, ಕೃಷಿಕರಿಗೆ ಈ ಕಾಯ್ದೆ ಮಾರಕವಾಗುತ್ತದೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ.
More From GoodReturns

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ



Click it and Unblock the Notifications