ಫೆಬ್ರವರಿ 1 ರಂದು ಹಣಕಾಸು ಸಚಿವರು ಮಂಡಿಸಲಿರುವ ಕೇಂದ್ರ ಬಜೆಟ್ನಲ್ಲಿ ಈಕ್ವಿಟಿ ವ್ಯಾಪಾರದ ಮೇಲಿನ ಸೆಕ್ಯುರಿಟೀಸ್ ಟ್ರ್ಯಾನ್ಸಾಕ್ಷನ್ ಟ್ಯಾಕ್ಸ್(STT)ನಿಂದ ವ್ಯಾಪಾರಿಗಳನ್ನು ಬಿಡುಗಡೆ ಮಾಡುವ ಬಗ್ಗೆ ಸರ್ಕಾರವು ಆಲೋಚನೆ ಮಾಡಬೇಕು ಎಂದು ಮಾರುಕಟ್ಟೆ ತಜ್ಞರು ಗುರುವಾರ ಹೇಳಿದ್ದಾರೆ. ಈ ಕ್ರಮವು ಬಂಡವಾಳ ಮಾರುಕಟ್ಟೆಗಳನ್ನು ಉತ್ತೇಜಿಸುವ ಮತ್ತು ಹೊಸ ಹೂಡಿಕೆದಾರರನ್ನು ಉತ್ತೇಜಿಸುವ ನಿರೀಕ್ಷೆಯಿದೆ.
ಸರ್ಕಾರವು 2004 ರಲ್ಲಿ ವಿವಿಧ ರೀತಿಯ ಸೆಕ್ಯುರಿಟಿಗಳಲ್ಲಿನ ವಹಿವಾಟುಗಳ ಮೇಲೆ ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್ (ಎಸ್ಟಿಟಿ) ಅನ್ನು ಪರಿಚಯಿಸಿತು. ಮಾರಾಟವಾಗಲಿ ಅಥವಾ ಖರೀದಿಯಾಗಲಿ ವ್ಯಾಪಾರದ ಭದ್ರತೆ ಮತ್ತು ವಹಿವಾಟಿನ ಪ್ರಕಾರವನ್ನು ಅವಲಂಬಿಸಿ ದರವು ಪ್ರಸ್ತುತ ಶೇಕಡಾ 0.025 ರಿಂದ ಶೇಕಡಾ 0.25 ರವರೆಗೆ ಬದಲಾಗುತ್ತದೆ.
"ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್ ಅನ್ನು ರದ್ದುಗೊಳಿಸಿದರೆ ಹೂಡಿಕೆ ಉದ್ಯಮವು ಪ್ರಯೋಜನವನ್ನು ಪಡೆಯುತ್ತದೆ. ದೀರ್ಘಾವಧಿಯ ಬಂಡವಾಳ ಲಾಭಗಳು (ಎಲ್ಟಿಸಿಜಿ) ಮತ್ತು ಅಲ್ಪಾವಧಿಯ ಬಂಡವಾಳ ಲಾಭಗಳು (ಎಸ್ಟಿಸಿಜಿ) ಇವೆ," ಎಂದು ಟ್ರೂ ಬೀಕನ್ ಮತ್ತು ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಹೇಳಿದರು. ಅದೇನೇ ಇದ್ದರೂ, ಸರ್ಕಾರವು ಎಸ್ಟಿಟಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದರೆ ದೀರ್ಘಾವಧಿಯ ಬಂಡವಾಳ ಲಾಭದ ಮೇಲಿನ ತೆರಿಗೆಯನ್ನು ತೆಗೆದುಹಾಕುವ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂದು ಕೂಡಾ ಹೇಳಿದ್ದಾರೆ.

ಅಪ್ಸ್ಟಾಕ್ಸ್ನ ನಿರ್ದೇಶಕ ಪುನೀತ್ ಮಹೇಶ್ವರಿ ಮಾತನಾಡಿ, "ಎಸ್ಟಿಟಿಯ ಹೊರೆಯಿಂದ ವ್ಯಾಪಾರಿಗಳನ್ನು ಬಿಡುಗಡೆ ಮಾಡಲು ಸರ್ಕಾರವು ಪರಿಗಣಿಸಬಹುದು. ಹಾಗೆ ಮಾಡುವುದರಿಂದ ಹೊಸ ಹೂಡಿಕೆದಾರರು ವಹಿವಾಟು ಆರಂಭಿಸಲು ಉತ್ತೇಜನ ನೀಡಲು ಸಾಧ್ಯವಾಗುತ್ತದೆ," ಎಂದು ಹೇಳಿದರು. "ಸೂಚ್ಯಂಕಗಳು ಅಥವಾ ವಿನಿಮಯ-ವಹಿವಾಟು ನಿಧಿಗಳಲ್ಲಿ ಹೆಚ್ಚಾಗಿ ಹೂಡಿಕೆ ಆಗುವ ಅಗತ್ಯವಿದೆ. ಈಕ್ವಿಟಿ-ಲಿಂಕ್ಡ್ ತೆರಿಗೆ ಉಳಿತಾಯ ಯೋಜನೆಗಳ ಸಾಲಿನಲ್ಲಿ ಲಾಕ್-ಇನ್ ಮತ್ತು ತೆರಿಗೆ ಪ್ರೋತ್ಸಾಹವನ್ನು ನೀಡುವ ಮೂಲಕ, ಸರ್ಕಾರವು ನಿಫ್ಟಿ ಅಥವಾ ಸೆನ್ಸೆಕ್ಸ್ನಲ್ಲಿ ದೀರ್ಘಾವಧಿಯ ಉಳಿತಾಯವನ್ನು ಉತ್ತೇಜಿಸಬಹುದು," ಎಂದು ಅಭಿಪ್ರಾಯಿಸಿದ್ದಾರೆ.
ಭಾರತದ ಕಂಪನಿಗಳಿಗೆ ಅವಕಾಶವಿರಲಿ
ಸರ್ಕಾರಿ ಸ್ವಾಮ್ಯದ ಭವಿಷ್ಯ ನಿಧಿಗಳು ಮತ್ತು ಪಿಂಚಣಿ ನಿಧಿಗಳಿಂದ ಈಕ್ವಿಟಿ ಮಾರುಕಟ್ಟೆಗಳಿಗೆ ಹೆಚ್ಚಿನ ಹೂಡಿಕೆ ಕೂಡಾ ಸಹಾಯ ಮಾಡಬಹುದು ಎಂದಿದ್ದಾರೆ. "ಕಂಪನಿಗಳು ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಬದಲಾವಣೆ ಮಾಡುವಂತೆ ಕೋರಿ ಸರ್ಕಾರವನ್ನು ತಲುಪುತ್ತಿರುವಾಗ, ಪಟ್ಟಿ ಮಾಡದ ಭಾರತೀಯ ಕಂಪನಿಗಳನ್ನು ವಿದೇಶದಲ್ಲಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊರುತ್ತದೆ. ಇದು ಮನೆಯಲ್ಲಿ ಕೆಲಸ ಮಾಡಲು ಸರಿಯಾದ ಸಮಯ ಎಂದು ನಾನು ನಂಬುತ್ತೇನೆ," ಎಂದು ಪರೋಕ್ಷವಾಗಿ ಭಾರತದಲ್ಲಿ ವ್ಯಾಪಾರ ನಡೆಸಲು ಭಾರತೀಯ ಕಂಪನಿಗಳಿಗೆ ಅವಕಾಶ ಮಾಡಿಕೊಡಿ ಎಂದು ತಿಳಿಸಿದ್ದಾರೆ.
ಅಪ್ಸ್ಟಾಕ್ಸ್ನ ನಿರ್ದೇಶಕ ಪುನೀತ್ ಮಹೇಶ್ವರಿ ಪ್ರಕಾರ ಕಂಪನಿಗಳನ್ನು ಪಟ್ಟಿ ಮಾಡಲು ಅಂದರೆ ಮಾನ್ಯತೆ ನೀಡಲು ಭಾರತದಲ್ಲಿ ಪ್ರವೇಶ ಅಡೆತಡೆಗಳು ಹೆಚ್ಚು. ಆದರೆ ಒಮ್ಮೆ ಮಾನ್ಯತೆ ಪಡೆದರೆ ಉಲ್ಲಂಘನೆಗಳಿಗೆ ದಂಡವು ಕಡಿಮೆಯಿರುತ್ತದೆ. ಇಲ್ಲವಾದರೆ ಹೂಡಿಕೆದಾರರು, ವಿಶೇಷವಾಗಿ ಚಿಲ್ಲರೆ ವ್ಯಾಪಾರವು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತದೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗಿದೆ. ಇದರ ಮಧ್ಯೆ ಜನವರಿ 31 ರಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಗಾಗಿ ಫೆಬ್ರವರಿ 1ರಂದು ಬೆಳಗ್ಗೆ 11 ಗಂಟೆಗೆ ಸಭೆ ಸೇರಲಾಗುತ್ತಿದ್ದು, ಫೆಬ್ರವರಿ 2 ರಿಂದ ಫೆಬ್ರವರಿ 11 ರವರೆಗೆ ಸಂಸತ್ ಅಧಿವೇಶನ ನಡೆಯಲಿದೆ. ಭಾರತದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2022 ರಂದು ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಅನ್ನು ಘೋಷಿಸಲಿದ್ದಾರೆ. 2022 ರ ಬಜೆಟ್ ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಕೃಷಿ, ಆರೋಗ್ಯ ಮತ್ತು ರಿಯಲ್ ಎಸ್ಟೇಟ್ ಅಥವಾ ಉದ್ಯಮಿಗಳು ಮತ್ತು ಸಂಬಳ ವೃತ್ತಿಪರರಂತಹ ವ್ಯಕ್ತಿಗಳಿಗೆ ಈ ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳು ಇದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications