ಕೊರೊನಾವೈರಸ್ ಭೀತಿ ಹಾಗೂ ಕಚ್ಛಾ ತೈಲ ದರದ ಸಂಘರ್ಷದ ನಡುವೆ ಜಾಗತಿಕವಾಗಿ ಪೆಟ್ರೋಲ್-ಡೀಸೆಲ್ ದರ ದಿನೇ ದಿನೇ ಕುಸಿಯತೊಡಗಿದೆ. ಇದನ್ನೇ ಸಂಪನ್ಮೂಲ ಕ್ರೂಢೀಕರಣಕ್ಕೆ ಬಂಡವಾ ಮಾಡಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಸದ್ಯದಲ್ಲೇ ಪೆಟ್ರೋಲ್-ಡೀಸೆಲ್ ದರವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಶೀಘ್ರವಾಗಿ ಕುಸಿಯುತ್ತಿರುವ ಮಧ್ಯೆ ಸರ್ಕಾರ ಕಾನೂನಿನಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಿದೆ. ತೈಲಗಳ ಮೇಲಿನ ಅಬಕಾರಿ ಸುಂಕವನ್ನು ವಿಶೇಷ ಪರಿಸ್ಥಿತಿ ಆಧಾರದ ಮೇಲೆ ಹೆಚ್ಚಳಕ್ಕೆ ಮುಂದಾಗಿದೆ.
ಪೆಟ್ರೋಲ್ -ಡೀಸೆಲ್ ದರ ಎಷ್ಟು ಹೆಚ್ಚಾಗಬಹುದು
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 8 ರೂಪಾಯಿ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಇದರ ನಂತರ, ಸರ್ಕಾರವು ಮುಂದಿನ ದಿನಗಳಲ್ಲಿ ಯಾವುದೇ ಸಮಯದಲ್ಲಿ ಎಂಟು ರೂಪಾಯಿ ವ್ಯಾಪ್ತಿಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಬಹುದು.
2020ರ ಹಣಕಾಸು ಮಸೂದೆಗೆ ತಿದ್ದುಪಡಿ
ಇಂಧನಗಳ ಮೇಲಿನ ವಿಶೇಷ ಅಬಕಾರಿ ಸುಂಕದ ದರವನ್ನು ಭವಿಷ್ಯದಲ್ಲಿ ಹೆಚ್ಚಿಸುವ ಪ್ರಸ್ತಾಪವನ್ನು ಒಳಗೊಂಡಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2020 ರ ಹಣಕಾಸು ಮಸೂದೆಗೆ ತಿದ್ದುಪಡಿ ತಂದರು. ಸದನವು ಚರ್ಚೆಯಿಲ್ಲದೆ ಮಸೂದೆಯನ್ನು ಅಂಗೀಕರಿಸಿತು. ಈ ತಿದ್ದುಪಡಿಯ ನಂತರ ಸರ್ಕಾರವು ಪೆಟ್ರೋಲ್ಗೆ ಹೆಚ್ಚುವರಿ ವಿಶೇಷ ಅಬಕಾರಿ ಸುಂಕವನ್ನು ಲೀಟರ್ಗೆ 10 ರುಪಾಯಿಗಳಿಂದ 18 ರುಪಾಯಿಗೆ ಮತ್ತು ಡೀಸೆಲ್ ಮೇಲಿನ ದರ ಲೀಟರ್ಗೆ 4 ರಿಂದ 12 ರುಪಾಯಿಗೆ ಹೆಚ್ಚಿಸಬಹುದು.
ಮಾರ್ಚ್ನಲ್ಲಿ ಈಗಾಗಲೇ 3 ರುಪಾಯಿ ಹೆಚ್ಚಿಸಿತ್ತು
ಇದೇ ತಿಂಗಳಿನಲ್ಲಿ ಅಬಕಾರಿ ಸುಂಕವನ್ನು ಮೂರು ರುಪಾಯಿ ಹೆಚ್ಚಿಸಲಾಗಿತ್ತು. ಮಾರ್ಚ್ 14ರಂದು ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳದಿಂದಾಗಿ ಸರ್ಕಾರವು ವಾರ್ಷಿಕವಾಗಿ 39,000 ಕೋಟಿ ಹೆಚ್ಚು ಪಡೆಯಲಿದೆ. ವಿಶೇಷ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರುಪಾಯಿ ಮತ್ತು ರಸ್ತೆ ಹಾಗೂ ಸೌಕರ್ಯ ಸೆಸ್ನಲ್ಲಿ ಸರ್ಕಾರವು ಪ್ರತಿ ಲೀಟರ್ಗೆ ಒಂದು ರುಪಾಯಿ ಹೆಚ್ಚಿಸಿದೆ. ಈ ಮೂಲಕ ಒಟ್ಟಾರೆ ಮೂರು ರುಪಾಯಿ ಹೆಚ್ಚಿಸಲಾಗಿತ್ತು.
ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ಗೆ 71.97 ರುಪಾಯಿ
ಸದ್ಯ ಪೆಟ್ರೋಲ್ -ಡೀಸೆಲ್ ದರವು ಅಷ್ಟು ದೊಡ್ಡ ಪ್ರಮಾಣದ ಹೊರೆಯಾಗಿಲ್ಲ. ಮಾರ್ಚ್ 24ರಂದು ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಲೀಟರ್ಗೆ 71,97 ರುಪಾಯಿಯಷ್ಟಿದೆ. ಡೀಸೆಲ್ ದರವು ಲೀಟರ್ಗೆ 64.41 ರುಪಾಯಿಯಷ್ಟಿದೆ. ಒಂದು ವೇಳೆ ಪೆಟ್ರೋಲ್ ದರವು 8 ರುಪಾಯಿ ಹೆಚ್ಚಾದರೆ ಲೀಟರ್ಗೆ 79 ರುಪಾಯಿವರೆಗೆ, ಡೀಸೆಲ್ ಲೀಟರ್ಗೆ 73 ರುಪಾಯಿಗೂ ತಲುಪುತ್ತದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ವಾರಾಂತ್ಯದಲ್ಲೂ ಚಿನ್ನದ ಬೆಲೆ ಭರ್ಜರಿ ಇಳಿಕೆ! ದಿಢೀರ್ 10,300 ರೂ. ಕುಸಿತ



Click it and Unblock the Notifications