"21ನೇ ಶತಮಾನದ ಅತಿ ದೊಡ್ಡ ಹುಚ್ಚುತನ"- ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಜಿಎಸ್ ಟಿಯನ್ನು ಬಣ್ಣಿಸಿರುವ ಬಗೆ ಇದು. 2030ರ ಹೊತ್ತಿಗೆ ಭಾರತ ಸೂಪರ್ ಪವರ್ ಆಗಬೇಕು ಅಂದರೆ 10 ಪರ್ಸೆಂಟ್ ದರದಲ್ಲಿ ಭಾರತ ಪ್ರಗತಿಯನ್ನು ಸಾಧಿಸಬೇಕು ಎಂದು ಅವರು ಬುಧವಾರ ಹೇಳಿದ್ದಾರೆ.
ಭಾರತದ ಆರ್ಥಿಕತೆಯಲ್ಲಿ ತಂದ ಸುಧಾರಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರಿಗೆ ಭಾರತ ರತ್ನ ಗೌರವ ನೀಡಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ. ದೇಶವು 8 ಪರ್ಸೆಂಟ್ ನಷ್ಟು ಪ್ರಗತಿಯನ್ನು ಆಗಿಂದಾಗ್ಗೆ ಸಾಧಿಸಿದರೂ ಕಾಂಗ್ರೆಸ್ ನಾಯಕರಿಂದ ಜಾರಿಗೆ ಬಂದ ಸುಧಾರಣೆಯಲ್ಲಿ ಚೇತರಿಕೆ ಆಗಿಲ್ಲ ಎಂದು ಅವರು ಹೇಳಿದ್ದಾರೆ.
ನಾವು ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಿದೆ. ಹೂಡಿಕೆ ಮಾಡುವವರಿಗೆ ತಕ್ಕ ಪ್ರತಿಫಲ ದೊರೆಯಬೇಕು. ಆದಾಯ ತೆರಿಗೆ ಮತ್ತು ಜಿಎಸ್ ಟಿ ಮೂಲಕ ಅವರನ್ನು ಭಯ ಪಡಿಸಬಾರದು. ಜಿಎಸ್ ಟಿ 21ನೇ ಶತಮಾನದ ಅತಿ ದೊಡ್ಡ ಹುಚ್ಚುತನ. ಈ ಜಿಎಸ್ ಟಿ ವಿಪರೀತ ಸಂಕೀರ್ಣವಾಗಿದೆ. ಯಾವ ಅರ್ಜಿ ತುಂಬಬೇಕು ಅಂತಲೇ ಯಾರಿಗೂ ಅರ್ಥವಾಗಲ್ಲ.

ಅವರು ಕಂಪ್ಯೂಟರ್ ನಲ್ಲಿ ಅಪ್ ಲೋಡ್ ಮಾಡಬೇಕು ಅಂತ ರಾಜಸ್ಥಾನ್, ಬರ್ಮರ್ ನಿಂದ ಬರುತ್ತಾರೆ. ನಮ್ಮಲ್ಲಿ ವಿದ್ಯುಚ್ಛಕ್ತಿ ಇಲ್ಲ. ಹೇಗೆ ಅಪ್ ಲೋಡ್ ಮಾಡಬೇಕು ಎಂದು ಕೇಳುತ್ತಾರೆ. ಅದಕ್ಕೆ ನಾನು ಹೇಳಿದೆ: ಇದನ್ನು ನಿಮ್ಮ ತಲೆಯಲ್ಲಿ ಅಪ್ ಲೋಡ್ ಮಾಡಿ ಮತ್ತು ಪ್ರಧಾನಮಂತ್ರಿ ಬಳಿ ಹೋಗಿ ತಿಳಿಸಿ ಎಂದಿದ್ದಾಗಿ ಹೇಳಿದ್ದಾರೆ.
10 ಪರ್ಸೆಂಟ್ ನಂತೆ ಭಾರತ ಬೆಳವಣಿಗೆ ಸಾಧಿಸಿದರೆ ಮುಂದಿನ 10 ವರ್ಷದಲ್ಲಿ ಸೂಪರ್ ಪವರ್ ಆಗಲಿದೆ. ಇದೇ ವೇಗ ಮುಂದುವರಿದಲ್ಲಿ ಚೀನಾವನ್ನೂ ದಾಟಿ, ಅಮೆರಿಕಾಗೆ ಸವಾಲು ಎಸೆಯುವಂತೆ ಮುಂದಿನ 50 ವರ್ಷದಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಲಿದೆ ಎಂದಿದ್ದಾರೆ.
ಇತರ ದೇಶಗಳಿಗೆ ಹೋಲಿಸಿದರೆ ಪ್ರತಿ ಎಕರೆ ಭೂಮಿಯಲ್ಲಿ ಬರುತ್ತಿರುವ ಕೃಷಿ ಇಳುವರಿ ಬಹಳ ಕಡಿಮೆ ಇದೆ. ಅದಕ್ಕೆ ನೀರಾವರಿ ವ್ಯವಸ್ಥೆಯ ಕೊರತೆ ಕೂಡ ಕಾರಣ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications