ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹ ಕಳೆದ ಎರಡು ತಿಂಗಳಿಂದ ಕುಗ್ಗುತ್ತಾ ಸಾಗಿತ್ತು. ಆದರೆ ನವೆಂಬರ್ ತಿಂಗಳಿನಲ್ಲಿ 1 ಲಕ್ಷ ಕೋಟಿ ದಾಟಿದೆ ಎಂದು ಭಾನುವಾರ ಅಧಿಕೃತ ದತ್ತಾಂಶಗಳು ತಿಳಿಸಿವೆ. ಪರೋಕ್ಷ ತೆರಿಗೆ ಸಂಗ್ರಹದಲ್ಲಿ ಚೇತರಿಕೆ ಕಂಡಿರುವುದು ಸರ್ಕಾರದ ಪಾಲಿಗೆ ಉತ್ತಮ ಬೆಳವಣಿಗೆಯಾಗಿದೆ. ವ್ಯವಸ್ಥೆಯೊಳಗೆ ನಗದು ಪೂರೈಕೆ ಹೆಚ್ಚು ಮಾಡುವ ಸರ್ಕಾರದ ಕ್ರಮಕ್ಕೆ ಇದು ಪೂರಕವಾಗಿದೆ.
ಆರ್ಥಿಕ ಹಿಂಜರಿತದ ಈಗಿನ ಸನ್ನಿವೇಶದಲ್ಲಿ ಇದರಿಂದ ಅನುಕೂಲವಾಗುತ್ತದೆ ಎಂದು ನಂಬಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನವೆಂಬರ್ ನಲ್ಲಿ 1.03 ಲಕ್ಷ ರುಪಾಯಿ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಸಂಗ್ರಹವಾದ ಮೊತ್ತಕ್ಕೆ ಹೋಲಿಸಿದರೆ 6% ಹೆಚ್ಚು ಮೊತ್ತ ಸಂಗ್ರಹವಾಗಿದೆ.
GST ಜಾರಿಯಾದ ಮೇಲೆ ಅತಿ ಹೆಚ್ಚು GST ಮೊತ್ತ ಸಂಗ್ರಹವಾದ ಮೂರನೇ ತಿಂಗಳು ಇದು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಆಯಾ ಅಂತರರಾಜ್ಯ ಮಾರಾಟದ ತೆರಿಗೆ ಸೆಟ್ಲ್ ಮಾಡಿದ ಮೇಲೆ ಕೇಂದ್ರ ಸರ್ಕಾರದ ಆದಾಯ 44,742 ಕೋಟಿ ಹಾಗೂ ರಾಜ್ಯ ಸರ್ಕಾರ 44,576 ಕೋಟಿ ರುಪಾಯಿಯನ್ನು ನವೆಂಬರ್ ನಲ್ಲಿ ಸಂಗ್ರಹವಾಗಿದೆ.

ನವೆಂಬರ್ ಕೊನೆಗೆ 78 ಲಕ್ಷಕ್ಕಿಂತ ಹೆಚ್ಚು ತೆರಿಗೆ ರಿಟರ್ನ್ಸ್ ಫೈಲ್ ಮಾಡಲಾಗಿದೆ. "ಎರಡು ತಿಂಗಳ ನಕಾರಾತ್ಮಕ ಬೆಳವಣಿಗೆ ನಂತರ GST ಆದಾಯದಲ್ಲಿ ಉತ್ತಮ ಬೆಳವಣಿಗೆ ಆಗಿದೆ. ನವೆಂಬರ್ 2018ಕ್ಕೆ ಹೋಲಿಸಿದರ್ 2019ರ ನವೆಂಬರ್ ನಲ್ಲಿ ಜಿಎಸ್ ಟಿ ಸಂಗ್ರಹದಲ್ಲಿ 6% ಏರಿಕೆಯಾಗಿದೆ. ದೇಶೀಯ ವ್ಯವಹಾರದ ಜಿಎಸ್ ಟಿ ಸಂಗ್ರಹದಲ್ಲಿ 12% ಏರಿಕೆ ಆಗಿದೆ. ಇದು ವರ್ಷದಲ್ಲೇ ಅತಿ ಹೆಚ್ಚು.
"ಆಮದಿನ ಮೇಲಿನ ಜಿಎಸ್ ಟಿ ಸಂಗ್ರಹ ನಕಾರಾತ್ಮಕ ಬೆಳವಣಿಗೆ 13% ಆಗಿದೆ. ಆದರೆ ಕಳೆದ ತಿಂಗಳು ನಕಾರಾತ್ಮಕ ಬೆಳವಣಿಗೆ 20% ಆಗಿತ್ತು" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಳೆದ ಎರಡು ತಿಂಗಳು GST ಸಂಗ್ರಹದಲ್ಲಿ ಇಳಿಕೆಯಾಗಿದ್ದ ಕಾರಣಕ್ಕೆ ಕೇಂದ್ರ- ರಾಜ್ಯ ಸರ್ಕಾರದ ಮಧ್ಯೆ ಸಂಬಂಧದಲ್ಲಿ ತಿಕ್ಕಾಟವಾಗಿತ್ತು. ಕೇಂದ್ರ ಸರ್ಕಾರದಿಂದ GST ಪರಿಹಾರ ಹಣ ಬರುವುದು ವಿಳಂಬವಾಗುತ್ತಿದೆ ಎಂದು ಸಾರ್ವಜನಿಕವಾಗಿಯೇ ರಾಜ್ಯ ಸರ್ಕಾರಗಳು ಆರೋಪ ಮಾಡಿವೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications