ಜಿಎಸ್ಟಿ ಪರಿಹಾರ ಮೊತ್ತದಲ್ಲಿ ಉಂಟಾದ ಕೊರತೆಯನ್ನು ಸಾಲದ ರೂಪದಲ್ಲಿ ಪಡೆಯಲು ರಾಜ್ಯಗಳು ಒಪ್ಪಿದ್ದು, ಕೇಂದ್ರ ಮತ್ತು ರಾಜ್ಯಗಳ ವಿವಾದ ಅಂತ್ಯಗೊಂಡಿದೆ. ಜಾರ್ಖಂಡ್ ಕೊನೆಯ ರಾಜ್ಯವಾಗಿ ಸೇರ್ಪಡೆಗೊಂಡಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಸ್ಪೆಷಲ್ ವಿಂಡೋ ಮೂಲಕ 1.1 ಲಕ್ಷ ಕೋಟಿ ರೂಪಾಯಿ ಸಾಲ ಪಡೆಯುವ ಯೋಜನೆಗೆ ಎಲ್ಲಾ ರಾಜ್ಯಗಳು ಒಪ್ಪಿಕೊಂಡಿವೆ ಎಂದು ಎಂದು ಹಣಕಾಸು ಸಚಿವಾಲಯ ಶನಿವಾರ ಹೇಳಿದೆ.

ಜಾರ್ಖಂಡ್ಗೆ ಸ್ಪೆಷಲ್ ವಿಂಡೋ ಮೂಲಕ 1,689 ಕೋಟಿ ರೂ. ಮತ್ತು ಹೆಚ್ಚುವರಿ ರಾಜ್ಯದ ಒಟ್ಟು ದೇಶೀಯ ಉತ್ಪನ್ನದ ಶೇ. 0.5ರವರೆಗೆ ಸಾಲಗಳ ಮೂಲಕ ಅಂದರೆ 1,765 ಕೋಟಿ ರೂ. ಸಾಲ ಪಡೆಯಲು ಅವಕಾಶವಿದೆ.
ಕೇಂದ್ರವು ಎಲ್ಲಾ ರಾಜ್ಯಗಳಿಗೆ 97,000 ಕೋಟಿ ರೂ. ಮತ್ತು 2.35 ಲಕ್ಷ ಕೋಟಿ ರೂ. ಎರಡು ಆಯ್ಕೆಯನ್ನು ಮುಂದಿಟ್ಟಿತ್ತು. ಎರಡೂ ಆಯ್ಕೆಗಳು ಬೇರೆ ಬೇರೆ ಷರತ್ತುಗಳನ್ನು ಹೊಂದಿದ್ದವು. ನಂತರ ಮೊದಲ ಆಯ್ಕೆಯನ್ನು 97,000 ಕೋಟಿ ರೂ.ನಿಂದ 1.1 ಲಕ್ಷ ಕೋಟಿ ರೂಪಾಯಿಗೆ ಏರಿಸಲಾಯಿತು. ಜೊತೆಗೆ ರಾಜ್ಯಗಳ ಪರವಾಗಿ ಸಾಲ ಪಡೆದುಕೊಳ್ಳಲೂ ಕೇಂದ್ರ ಒಪ್ಪಿಗೆ ನೀಡಿತು.
ಈಗಾಗಲೇ ರಾಜ್ಯಗಳ ಪರವಾಗಿ ಕೇಂದ್ರ ಸರಕಾರ ಐದು ಕಂತುಗಳಲ್ಲಿ 30,000 ಕೋಟಿ ರೂಪಾಯಿ ಸಾಲ ಪಡೆದುಕೊಂಡಿದ್ದು, ಅವುಗಳನ್ನು ರಾಜ್ಯಗಳಿಗೆ ಹಸ್ತಾಂತರಿಸಿದೆ. ಡಿಸೆಂಬರ್ 7ರಂದು ಪಡೆದುಕೊಳ್ಳಲಿರುವ ಮುಂದಿನ ಕಂತಿನಲ್ಲಿ ಜಾರ್ಖಂಡ್ಗೆ ಹಣ ಸಿಗಲಿದೆ.
ಆರಂಭದಲ್ಲಿ ಜಾರ್ಖಂಡ್, ಛತ್ತೀಸ್ಗಡ, ಪಶ್ಚಿಮ ಬಂಗಾಳ, ಕೇರಳ ರಾಜ್ಯಗಳು ಜಿಎಸ್ಟಿ ಪರಿಹಾರವಾಗಿ ಸಾಲ ಪಡೆಯಲು ವಿರೋಧಿಸಿದ್ದವು. ಆದರೆ ಈಗ ಎಲ್ಲಾ ರಾಜ್ಯಗಳು ಒಪ್ಪಿಗೆ ಸೂಚಿಸಿದ್ದು, ರಾಜ್ಯಗಳಿಗೆ ಒಟ್ಟಾರೆ 1,06,830 ಕೋಟಿ ಹೆಚ್ಚುವರಿ ಸಾಲ ಪಡೆಯಲು ಕೇಂದ್ರ ಅನುಮತಿ ಕೊಟ್ಟಿದೆ.
More From GoodReturns

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications