ಜಿಎಸ್ಟಿ ಜಾರಿಗೊಳಿಸಿರುವುದರಿಂದ ರಾಜ್ಯಗಳಿಗೆ ಆಗುತ್ತಿರುವ ವರಮಾನ ನಷ್ಟವನ್ನು ತುಂಬಿಕೊಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ನೀಡಲು ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ರೀತಿಯಾದ ಅನುಮಾನ ಬೇಡ. ಜಿಎಸ್ಟಿ ಜಾರಿಗೊಳಿಸುವುದರಿಂದ ರಾಜ್ಯಗಳಿಗಾಗುವ ವರಮಾನ ನಷ್ಟ ತುಂಬಿಕೊಡಲು ಕೇಂದ್ರ ಸರ್ಕಾರ ಮೊದಲ 5 ವರ್ಷಗಳಿಗೆ ಪರಿಹಾರ ನೀಡಲು ನಿರ್ಧರಿಸಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಜುಲೈ 1, 2017ರಿಂದ ರಾಜ್ಯಗಳು ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಗೆ ಸೇರಿಕೊಂಡ ಬಳಿಕ ಸರಕು ಮತ್ತು ಸೇವೆಗಳ ಮೇಲಿನ ತೆರಿಗೆಗಳನ್ನು ಸಂಗ್ರಹಿಸುವ ಅಧಿಕಾರಕ್ಕೆ ಶರಣಾದವು. ಹೀಗಾಗಿ ಮೊದಲ 5 ವರ್ಷದಲ್ಲಿ ಆಗಿರುವ ಯಾವುದೇ ಆದಾಯ ನಷ್ಟವನ್ನು ರಾಜ್ಯಗಳಿಗೆ ಭರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ. ಆದರೆ ಪರಿಹಾರ ಮೊತ್ತವು ಯಾವಾಗ ರಾಜ್ಯಗಳ ಕೈ ಸೇರಲಿದೆ ಎಂಬುದನ್ನು ತಿಳಿಸಿಲ್ಲ.
ಜಿಎಸ್ಟಿ ಜಾರಿಗೊಳಿಸಿರುವುದರಿಂದ ಮಾಸಿಕ ಪರಿಹಾರವನ್ನು 2 ತಿಂಗಳಲ್ಲಿ ಪಾವತಿಸಬೇಕಾಗಿತ್ತು. ಆದರೆ ಆಗಸ್ಟ್ 2019ರಿಂದ ರಾಜ್ಯಗಳು ಅಂತಹ ಯಾವುದೇ ಮೊತ್ತವನ್ನು ಸ್ವೀಕರಿಸಿಲ್ಲ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್ಟಿ ಸೆಸ್ನಿಂದ ಸಂಗ್ರಹಿಸಲಾಗಿರುವ 9,783 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications