2020-21ರ ಹಣಕಾಸಿನ ವರ್ಷದಲ್ಲಿ ದೇಶದ 9 ದೊಡ್ಡ ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡಬೇಕಾದ ಜಿಎಸ್ಟಿ ಪರಿಹಾರ ಮೊತ್ತವು 70 ಸಾವಿರ ಕೋಟಿ ರುಪಾಯಿ ತಲುಪಲಿದೆ ಎಂದು ರೇಟಿಂಗ್ ಸಂಸ್ಥೆ ICRA ಅಂದಾಜಿಸಿದೆ.
ಆರ್ಥಿಕತೆ ಮಂದಗತಿಯನ್ನು ಚುರುಕುಗೊಳಿಸಲು ಕೇಂದ್ರ ಸರ್ಕಾರ ಕಾರ್ಫೋರೇಟ್ ತೆರಿಗೆ ದರ ಕಡಿತಗೊಳಿಸಿತ್ತು. ಈಗಾಗಲೇ ಆದಾಯದ ಕೊರತೆಯ ಒತ್ತಡದಲ್ಲಿರುವ ಕೇಂದ್ರ ಸರ್ಕಾರಕ್ಕೆ ಮುಂಬರುವ ವರ್ಷದಲ್ಲಿ ಈ ಪರಿಹಾರ ಮೊತ್ತವನ್ನು ಇನ್ನಷ್ಟು ಒತ್ತಡವನ್ನು ಬೀರಲಿದೆ.

ಜುಲೈ 2019ರ ಬಜೆಟ್ ಅಂದಾಜು ಮೊತ್ತ 24.6 ಲಕ್ಷ ಕೋಟಿ ರುಪಾಯಿಗೆ ಹೋಲಿಸಿದರೆ ಹಣಕಾಸು ವರ್ಷದಲ್ಲಿ ನಿರೀಕ್ಷೆಗಿಂತ ಕಡಿಮೆ ಜಿಎಸ್ಟಿ ಸಂಗ್ರಹವಾಗಿದ್ದು, 3.5 ಲಕ್ಷ ಕೋಟಿಗಳಷ್ಟು ಕಡಿಮೆಯಾಗಿದೆ ಎಂದು ICRA ಅಂದಾಜಿಸಿದೆ. 2020ರ ಹಣಕಾಸು ವರ್ಷದಲ್ಲಿ ಎಲ್ಲಾ ರಾಜ್ಯಗಳ ಒಟ್ಟು ಕೊರತೆ 2.2 ಲಕ್ಷ ಕೋಟಿ ರುಪಾಯಿಗೆ ತಲುಪಲಿದೆ.
ಕೇಂದ್ರ ಸರ್ಕಾರವು 2016-17 ಮೂಲ ವರ್ಷದಲ್ಲಿ ಪರಿಹಾರ ಮೊತ್ತವನ್ನು ಆದಾಯದ ಮೇಲೆ ಶೇಕಡಾ 14ಕ್ಕೆ ನಿಗದಿ ಪಡಿಸಿತ್ತು. ಬಾಕಿ ಉಳಿಸಿಕೊಂಡಿದ್ದ ಜಿಎಸ್ಟಿ ಪರಿಹಾರವನ್ನು ಇತ್ತೀಚೆಗಷ್ಟೇ ಬಿಡುಗಡೆಗೊಳಿಸಿದ್ದು, ಆದಾಯ ನಷ್ಟವನ್ನು ಸರಿದೂಗಿಸಲು ಒಟ್ಟಾರೆ 35,298 ಕೋಟಿ ರುಪಾಯಿಗಳನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications