ಜಿಎಸ್ ಟಿ ಪರಿಹಾರ ಸೆಸ್ ಅನ್ನು 2022ರ ನಂತರವೂ ವಿಸ್ತರಣೆ ಮಾಡುವುದಕ್ಕೆ ಜಿಎಸ್ ಟಿ ಸಮಿತಿ ಸಭೆಯು ಸೋಮವಾರ (ಅಕ್ಟೋಬರ್ 5, 2020) ನಿರ್ಧಾರ ಮಾಡಿತು. ಈ ಬಗ್ಗೆ ಮೂಲಗಳನ್ನು ಆಧರಿಸಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಇನ್ನೂ ಅಧಿಕೃತವಾಗಿ ಹೇಳಿಕೆ ಬಂದಿಲ್ಲ. ಈ ಸೆಸ್ 2024ರ ತನಕ ವಿಸ್ತರಣೆ ಮಾಡುವ ಪ್ರಸ್ತಾವ ಇತ್ತು. ಆದರೆ ಈ ಬಗ್ಗೆ ಪರಿಶೀಲನೆ ನಡೆಸಿ, ಆಯಾ ಕಾಲಕ್ಕೆ ಬದಲಾವಣೆ ಮಾಡಲಾಗುವುದು ಎಂದು ವರದಿ ಆಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ. ಜಿಎಸ್ ಟಿ ಪರಿಹಾರದಲ್ಲಿ ಗಣನೀಯ ಕುಸಿತ ಕಂಡುಬಂದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವದ್ದಾಗಿದೆ. ಆರ್ ಬಿಐನಿಂದ ವಿಶೇಷ ಸಾಲ ಪಡೆಯುವುದು ಹಾಗೂ ಮಾರ್ಕೆಟ್ ನಲ್ಲಿ ಬಾಂಡ್ ವಿತರಣೆ ಮೂಲಕ ಹಣ ಸಂಗ್ರಹಿಸುವುದು, ಈ ಮೂಲಕ ಆದಾಯ ಕೊರತೆಯನ್ನು ತುಂಬಿಕೊಳ್ಳುವ ಪ್ರಸ್ತಾವವನ್ನು ರಾಜ್ಯಗಳ ಮುಂದೆ ಕೇಂದ್ರ ಇಟ್ಟಿತ್ತು.

ಆದರೆ, ಇದು ಕಾನೂನುಬದ್ಧ ಜವಾಬ್ದಾರಿ. ರಾಜ್ಯಗಳಿಗೆ ಆಗಿರುವ ನಷ್ಟವನ್ನು ಕೇಂದ್ರದಿಂದ ತುಂಬಿಕೊಡಬೇಕು. ಕೇಂದ್ರ ಸರ್ಕಾರವೇ ಸಾಲ ಮಾಡಬೇಕು ಎಂದು ಬಿಜೆಪಿಯೇತರ ರಾಜ್ಯಗಳ ಒತ್ತಾಯ ಆಗಿದೆ. "ಇಂದಿನ ಜಿಎಸ್ ಟಿ ಸಮಿತಿ ಸಭೆಯ ಫಲಿತಾಂಶವು ಸರ್ಕಾರದ ಕಾನೂನುಬದ್ಧತೆಗೆ ಹಾಗೂ ಅದು ಕೊಟ್ಟ ಮಾತಿಗೆ ಪರೀಕ್ಷೆ ಇದ್ದಂತೆ," ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
More From GoodReturns

Central Govt: ಇನ್ಮೇಲೆ ವಾಹನ ವರ್ಗಾಯಿಸುವುದು ಮತ್ತಷ್ಟು ಸುಲಭ? ಕೇಂದ್ರದಿಂದ ಮಹತ್ವದ ಕ್ರಮ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications