ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಎಸ್ ಟಿ ಸಮಿತಿ ಸಭೆಯಲ್ಲಿ ರಾಜ್ಯಗಳಿಗೆ ಆದಾಯ ನಷ್ಟ ಪರಿಹಾರ ವಿಚಾರದಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಆದ್ದರಿಂದ ಸಭೆಯನ್ನು ಮುಂದಿನ ವಾರಕ್ಕೆ (ಅಕ್ಟೋಬರ್ 12, 2020) ಮುಂದೂಡಲಾಯಿತು.
ಈ ವರ್ಷದಲ್ಲಿ ಇಲ್ಲಿಯವರೆಗೆ ಸಂಗ್ರಹ ಆಗಿರುವ ಪರಿಹಾರದ ಸೆಸ್ 20,000 ಕೋಟಿ ರುಪಾಯಿಯನ್ನು ಇಂದು ರಾತ್ರಿ (ಅಕ್ಟೋಬರ್ 5) ಎಲ್ಲ ರಾಜ್ಯಗಳಿಗೆ ಬಿಡುಗಡೆ ಮಾಡಲಾಗುವುದು. ಇನ್ನು 20017- 18ನೇ ಸಾಲಿನ ಇಂಟಿಗ್ರೇಟೆಡ್ ಜಿಎಸ್ ಟಿ 25 ಸಾವಿರ ಕೋಟಿ ರುಪಾಯಿಯನ್ನು ಮುಮ್ದಿನ ವಾರದ ಕೊನೆ ಹೊತ್ತಿಗೆ ಬಿಡುಗಡೆ ಮಾಡಲಾಗುವುದು. ಈ ಹಿಂದೆ ಕಡಿಮೆ ಪಡೆದಂಥ ರಾಜ್ಯಗಳು ಅದನ್ನು ಪಡೆಯುತ್ತವೆ ಎಂದು ಅವರು ಹೇಳಿದರು.
ಐದು ವರ್ಷದ ಅವಧಿಗೆ, ಅಂದರೆ 2022ರ ಜೂನ್ ತನಕ ಹಾಕಬೇಕು ಎಂದಿಕೊಂಡಿದ್ದ ಜಿಎಸ್ ಟಿ ಪರಿಹಾರ ಸೆಸ್ ಅನ್ನು ಅದರ ಆಚೆಗೂ ವಿಸ್ತರಿಸುವ ಪ್ರಸ್ತಾವ ಬಂತು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಇನ್ನೂ ಲೆಕ್ಕಾಚಾರಗಳು ಆಗಬೇಕಿದೆ ಎಂದು ತಿಳಿಸಲಾಗಿದೆ.

"ಕೇಂದ್ರ ಸರ್ಕಾರದಿಂದ ಸಾಲ ಮಾಡಿ, ನಿಯಮಾನುಸಾರ ರಾಜ್ಯಗಳಿಗೆ ಪಾವತಿ ಮಾಡಬೇಕಾದ ಪರಿಹಾರ ಮೊತ್ತವನ್ನು ನೀಡಬೇಕು ಎಂದು ಹತ್ತು ರಾಜ್ಯಗಳು ಒತ್ತಾಯಿಸಿದವು," ಎಂದು ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪರ್ಯಾಯ ಮಾರ್ಗಗಳನ್ನು ಹುಡುಕುವುದಕ್ಕೆ ಅಂತಲೇ ಸಮಯ ವ್ಯರ್ಥ ಮಾಡದೆ ಅಗತ್ಯ ಇರುವ ಹಣಕಾಸು ಸಂಪನ್ಮೂಲವನ್ನು ವ್ಯವಸ್ಥೆ ಮಾಡುವುದಕ್ಕೆ ಕೇಂದ್ರ ಪ್ರಯತ್ನಿಸಬೇಕು ಎಂದು ಬಿಹಾರದ ಡಿಸಿಎಂ ಸುಶೀಲ್ ಮೋದಿ ಹೇಳಿದ್ದಾರೆ. ಇನ್ನು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳ ಮುಂದೆ ಇಟ್ಟಿದ್ದ ಎರಡು ಸಾಲ ಯೋಜನೆಗಳ ಪ್ರಸ್ತಾವವನ್ನೂ ಕೇರಳ ತಿರಸ್ಕರಿಸಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications