ನವದೆಹಲಿ, ಜುಲೈ 4: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ತನ್ನ ನಾಲ್ಕನೇ ವರ್ಷದಲ್ಲಿ ಪ್ರಮುಖ ಸುಧಾರಣೆಗಳನ್ನು ಕಾಣುವ ನಿರೀಕ್ಷೆಯಿದೆ ಎಂದು ವರದಿಗಳು ಬಂದಿವೆ.
ರಾಜಕೀಯ ಪರಿಗಣನೆಗಳಿಗಿಂತ ವಿವೇಕದ ಆಧಾರದ ಮೇಲೆ ತೆರಿಗೆ ದರಗಳ ನಿರ್ಧಾರಗೊಳಿಸುವ ಮತ್ತು ಅನುಸರಣೆಯನ್ನು ಸರಾಗಗೊಳಿಸುವಿಕೆ ಮೇಲೆ ಪುನಃ ಸುಧಾರಣೆಗಳನ್ನು ಕಾಣುವ ನಿರೀಕ್ಷೆ ಇದೆ ಎನ್ನಲಾಗಿದೆ.
ಹೊಸ ಸುಧಾರಣೆ ಪ್ರಕಾರ ನಾಲ್ಕರ ಸ್ಲಾಬ್ ಬದಲು ಮೂರು ಸ್ಲಾಬ್ ಜಿಎಸ್ಟಿ ದರಗಳನ್ನು ಪರಿಗಣಿಸಬಹುದು ಎನ್ನಲಾಗಿದೆ.
ನಾಲ್ಕರ ಬದಲು ಮೂರು
ಪ್ರಸ್ತುತ 5%, 12%, 18% ಮತ್ತು 28% ಸ್ಲಾಬ್ ಬದಲಿಗೆ 8%, 18% ಮತ್ತು 28% ಸ್ಲಾಬ್ ಅಳವಡಿಸಲು ಜಿಎಎಸ್ಟಿ ಕೌನ್ಸಿಲ್ ಚಿಂತನೆ ಮಾಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ತೆರಿಗೆ ದರಗಳಲ್ಲಿ ಹೆಚ್ಚಳ ಮತ್ತು ಇಳಿಕೆಗೆ ಕಾರಣವಾಗುತ್ತದೆ
"ತೆರಿಗೆ ಸ್ಲಾಬ್ಗಳಲ್ಲಿನ ಕಡಿತ ಮತ್ತು ತಲೆಕೆಳಗಾದ ಸುಂಕದ ರಚನೆಯ ತಿದ್ದುಪಡಿ ಎರಡೂ ಕೆಲವು ವಸ್ತುಗಳ ತೆರಿಗೆ ದರಗಳಲ್ಲಿ ಹೆಚ್ಚಳ ಮತ್ತು ಇಳಿಕೆಗೆ ಕಾರಣವಾಗುತ್ತದೆ. ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕತೆಯು ಇನ್ನೂ ಚೇತರಿಸಿಕೊಳ್ಳುತ್ತಿರುವುದರಿಂದ, ವ್ಯವಹಾರಸ್ಥರು ಮತ್ತು ಗ್ರಾಹಕರು ಎರಡಕ್ಕೂ ಪ್ರತಿಕೂಲ ಪರಿಣಾಮ ಬೀರದಂತೆ ಜಿಎಸ್ಟಿ ಕೌನ್ಸಿಲ್ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಜಿಎಸ್ಟಿಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.
2017 ರಲ್ಲಿ ಪ್ರಾರಂಭಿಸಲಾಯಿತು
ಭಾರತದ ಅತಿದೊಡ್ಡ ತೆರಿಗೆ ಸುಧಾರಣೆಯಾಗಿ ಜಿಎಸ್ಟಿಯನ್ನು 2017 ರಲ್ಲಿ ಪ್ರಾರಂಭಿಸಲಾಯಿತು. ಜಿಎಸ್ಟಿ ಜಾರಿಗೆ ಬಂದ ಮೂರು ವರ್ಷಗಳ ನಂತರವೂ ತೆರಿಗೆದಾರರಿಗೆ ಜಟಿಲವಾಗಿದೆ ಎಂದು ತಜ್ಞರು, ವ್ಯವಹಾರಗಳು ಮತ್ತು ಕೆಲವು ಕೌನ್ಸಿಲ್ ಸದಸ್ಯರು ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವರ ನೇತೃತ್ವ
ಕೇಂದ್ರ ಹಣಕಾಸು ಸಚಿವರ ನೇತೃತ್ವದ ಜಿಎಸ್ಟಿ ಕೌನ್ಸಿಲ್, ಪರೋಕ್ಷ ತೆರಿಗೆಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ನಿರ್ಧರಿಸುವ ಒಂದು ಉನ್ನತ ಕೇಂದ್ರ ಸಂಸ್ಥೆಯಾಗಿದೆ. ರಾಜ್ಯ ಹಣಕಾಸು ಮಂತ್ರಿಗಳು ಪರಿಷತ್ತಿನ ಸದಸ್ಯರಾಗಿದ್ದಾರೆ ಮತ್ತು ಅದರ ನಿರ್ಧಾರಗಳು ಸಾಂಪ್ರದಾಯಿಕವಾಗಿ ಸರ್ವಾನುಮತದಿಂದ ಕೂಡಿವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications