ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಪರಿಷ್ಕೃತ ಮಾರ್ಗಸೂಚಿ ದರ ಸರಾಸರಿ ಶೇ.25 ರಿಂದ ಶೇ.30 ರಷ್ಟು ಹೆಚ್ಚಳ ಕಾಣಲಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 1 ರಿಂದ ಹೊಸ ಆಸ್ತಿ ನೋಂದಣಿಗೆ ಹೊಸ ಮಾರ್ಗಸೂಚಿ ದರ ಜಾರಿ ಆಗುತ್ತದೆ. ಇದು ಜಾರಿ ಆದ್ದಲ್ಲಿ ರಿಯಲ್ ಎಸ್ಟೇಟ್ ವಲಯದಲ್ಲೂ ಬದಲಾವಣೆ ಸಾಧ್ಯತೆಯಿದೆ.
ನಾವು ಪ್ರಸ್ತುತ ಬೆಂಗಳೂರಿನಲ್ಲಿ ಭೂಮಿಯ ಬೆಲೆಯನ್ನು ಪರಿಶೀಲನೆ ಮಾಡಿದಾಗ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭೂಮಿ ಬೆಲೆಯು ದುಬಾರಿಯಾಗಿಯೇ ಉಳಿದಿದೆ. ಬೇರೆ ಬೇರೆ ಪ್ರದೇಶಗಳಲ್ಲಿ ದರವು ಬೇರೆ ಬೇರೆ ರೀತಿಯಾಗಿದೆ. ಈಗಾಗಲೆ ಬೆಂಗಳೂರಿನಲ್ಲಿ ಆಸ್ತಿ ಖರೀದಿ ಅತೀ ಕಷ್ಟವಾಗಿದೆ. ಈ ನಡುವೆ ಈಗ ಆಸ್ತಿ ಮೌಲ್ಯ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಇನ್ನುಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಕಂದಾಯ ಇಲಾಖೆಯಡಿ ಬರುವ ನೋಂದಣಿ ಹಾಗೂ ಮುದ್ರಾಂಕ ಇಲಾಖೆ ಹೊಸ ಮಾರ್ಗಸೂಚಿ ದರವನ್ನು ಜಾರಿ ಮಾಡಲಿದೆ. ಇದರಿಂದಾಗಿ ಸಾಮಾನ್ಯವಾಗಿಯೇ ಆಸ್ತಿ ಬೆಲೆಯು ಕೂಡಾ ಹೆಚ್ಚಳವಾಗಿದೆ. ಇದು ರಿಯಲ್ ಎಸ್ಟೇಟ್ ವಲಯದ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ.
ಬೆಂಗಳೂರಿನಲ್ಲಿ ಕನಿಷ್ಠ ಶೇಕಡ 10 ರಷ್ಟು ದರ ಏರಿಕೆ ಮಾಡಲಾಗುತ್ತಿದೆ. ಆದರೆ ಉಳಿದ ಭಾಗಗಳಲ್ಲಿ ಈ ದರ ಬೇರೆ ಬೇರೆ ರೀತಿ ಹೆಚ್ಚಳವಾಗಲಿದೆ. ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ ಪರಿಷ್ಕೃತ ದರವು ಶೇಕಡ 20 ರಿಂದ ಶೇಕಡ 25 ರಷ್ಟು ಹೆಚ್ಚಾಗಲಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾರುಕಟ್ಟೆ ದರ ಮಾರ್ಗಸೂಚಿ ದರಕ್ಕಿಂತ 500 ಪಟ್ಟು ಅಧಿಕವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ಇದ್ದರೆ, ಮಾರುಕಟ್ಟೆ ದರ 10 ಕೋಟಿಗೂ ಹೆಚ್ಚಾಗಿದೆ. ಇಂತಹ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿಯಿಂದಾಗಿ ದರವು ಶೇಕಡ 50 ರಷ್ಟು ಏರಿಕೆಯಾಗಲಿದೆ.
ಇನ್ನು ಬೆಂಗಳೂರು ಹೊರತುಪಡಿಸಿ ಮಂಗಳೂರು, ಕಲಬುರಗಿ, ಮೈಸೂರು, ಬಳ್ಳಾರಿ, ತುಮಕೂರು, ಶಿವಮೊಗ್ಗ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ಪ್ರಮುಖ ನಗರಗಳಲ್ಲೂ ಹೊಸ ಮಾರ್ಗಸೂಚಿ ದರ ಜಾರಿಯಾಗಲಿದೆ. ಇಲ್ಲಿಯೂ ಈ ವರ್ಷದಲ್ಲೇ ಮಾರ್ಗಸೂಚಿ ಜಾರಿಗೆ ಬರಲಿದೆ.
More From GoodReturns

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ



Click it and Unblock the Notifications