ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಭಾರಿ ಏರಿಕೆ ಆಗುತ್ತಿರುವ ಹಿನ್ನೆಲೆಯಿಂದಾಗಿ ಜನವರಿ 10 ರಿಂದ 12 ರವರೆಗೆ ಗುಜರಾತ್ನ ಗಾಂಧಿನಗರದಲ್ಲಿ ನಡೆಯಬೇಕಿದ್ದ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ (ವಿಜಿಜಿಎಸ್) ದ್ವೈವಾರ್ಷಿಕ ಹೂಡಿಕೆ ಕಾರ್ಯಕ್ರಮವನ್ನು ರದ್ದುಗೊಳಿಸಲು ಗುಜರಾತ್ ಸರ್ಕಾರ ಗುರುವಾರ ನಿರ್ಧರಿಸಿದೆ.
ಜನವರಿ 10 ರಿಂದ ಗಾಂಧಿನಗರದಲ್ಲಿ ನಡೆಯಲಿರುವ ವಿಜಿಜಿಎಸ್ ದ್ವೈವಾರ್ಷಿಕ ಕಾರ್ಯಕ್ರಮದ 10 ನೇ ಆವೃತ್ತಿಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಗುರುವಾರ ಘೋಷಣೆ ಮಾಡಿದ್ದಾರೆ. ಈ ಶೃಂಗಸಭೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದರು.
ಗುಜರಾತ್ ಸಿಎಂ ಬುಧವಾರ ಉನ್ನತ ಅಧಿಕಾರಿಗಳೊಂದಿಗೆ ಕೋವಿಡ್ -19 ರ ಪ್ರಸ್ತುತ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದರು. ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿಯೂ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿರುವುದರಿಂದ ವಿಜಿಜಿಎಸ್ ಅನ್ನು ಸದ್ಯಕ್ಕೆ ರದ್ದುಪಡಿಸಲು ಸಭೆ ನಿರ್ಧಾರ ಮಾಡಿದೆ.

ಪಟೇಲ್ ಅವರು 2003 ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭಿಸಿದ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ ಮಾರ್ಗದರ್ಶಕರಾಗಿದ್ದು, ಈ ಹಿನ್ನೆಲೆಯಿಂದಾಗಿ ಪ್ರಧಾನಿ ಮೋದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯ್ ಪಟೇಲ್ ಧನ್ಯವಾದ ಅರ್ಪಿಸಿದರು. ಹಾಗೆಯೇ ಈ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಾ ಬಂದಿರುವ ಎಲ್ಲರಿಗೂ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯ್ ಪಟೇಲ್ ಧನ್ಯವಾದ ಹೇಳಿದ್ದಾರೆ. ಇನ್ನು ಜಾಗತಿಕ ಸಾಂಕ್ರಾಮಿಕ ರೋಗದಿಂದಾಗಿ ಜನವರಿ 2021 ರಲ್ಲಿ ನಿಗದಿಯಾಗಿದ್ದ ಈ ಹಿಂದಿನ ಶೃಂಗಸಭೆಯನ್ನು ಕೂಡಾ ರದ್ದು ಮಾಡಲಾಗಿತ್ತು.
ಕೇವಲ ಹತ್ತು ದಿನಗಳ ಅವಧಿಯಲ್ಲಿ, ಗುಜರಾತ್ನಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿ ಈ ಹಿಂದೆ ನೂರು ಕೋವಿಡ್ ಪ್ರಕರಣಗಳು ದಾಖಲು ಆಗುತ್ತಿದ್ದವು, ಆದರೆ ಈಗ ಮೂರು ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲು ಆಗುತ್ತಿದೆ. ಬುಧವಾರ, ಗುಜರಾತ್ನಲ್ಲಿ ಕೊರೊನಾ ಸೋಂಕಿನ 3,350 ಪ್ರಕರಣಗಳು ದಾಖಲು ಆಗಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯು 8,40,643 ಕ್ಕೆ ತಲುಪಿದೆ. ರಾಜ್ಯದ ಆರ್ಥಿಕ ರಾಜಧಾನಿ ಅಹಮದಾಬಾದ್ನಲ್ಲಿ ಸುಮಾರು ಅರ್ಧದಷ್ಟು ಕೋವಿಡ್ ಪಾಸಿಟಿವ್ 1,660 ವರದಿ ಆಗಿದೆ. ಇನ್ನು ಗುಜರಾತ್ನಲ್ಲಿ ಓಮಿಕ್ರಾನ್ ಪ್ರಕರಣಗಳು ಕೂಡಾ ಏರಿಕೆ ಕಾಣುತ್ತಿದೆ. ಬುಧವಾರ 50 ಓಮಿಕ್ರಾನ್ ಪ್ರಕರಣಗಳು ದೇಶದಲ್ಲಿ ಕಾಣಿಸಿಕೊಂಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications