ಬೆಂಗಳೂರು, ಜನವರಿ 13: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಆರ್ಥಿಕ ವ್ಯವಹಾರಗಳ ಮೇಲೆ ನಿರ್ಬಂಧ ಹೇರಲಾದ ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಂದ ಗ್ರಾಹಕರ ಜತೆಗಿನ ಸಭೆಯು ಸೋಮವಾರ ನಡೆದಿದ್ದು, ಆ ಸಭೆಯಲ್ಲಿ ಬ್ಯಾಂಕ್ ನ ಪರವಾಗಿ ಮ್ಯಾನೇಜರ್ ಮುರಳೀಧರ್ ಆರಿಕಾಡಿ ಗ್ರಾಹಕರಿಗೆ ಹೇಳಿದ್ದೇನು ಎಂಬ ವಿವರಗಳು ಇಲ್ಲಿವೆ.
* ನಮ್ಮ ಬ್ಯಾಂಕ್ ಈಗ ಅಗ್ನಿ ಪರೀಕ್ಷೆ ಎದುರಿಸುತ್ತಿದೆ. ಸಹಕಾರ ಬ್ಯಾಂಕ್ ಗಳ ವ್ಯವಹಾರ ಸುಧಾರಣೆ ನಿಟ್ಟಿನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ.
* ಬ್ಯಾಂಕ್ ನಲ್ಲಿ ಜನರು ಹೂಡಿಕೆ ಮಾಡಿರುವ ಹಣದ ಪೈಕಿ ಶೇಕಡಾ ಐವತ್ತೆರಡು ಪರ್ಸೆಂಟ್ ನಷ್ಟು ಮೊತ್ತವನ್ನು ಸಾಲ ನೀಡಿದ್ದೇವೆ. ಉಳಿದ ನಲವತ್ತೆಂಟು ಪರ್ಸೆಂಟ್ ನಮ್ಮ ಬಳಿಯೇ ಇದೆ.
* ಈಗಿನ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ಹೂಡಿಕೆದಾರರ ಹಣವನ್ನು ಹಿಂತಿರುಗಿಸುವುದು ನಮ್ಮ ಉದ್ದೇಶ. ಯಾವುದೇ ಹಣಕ್ಕೆ ತೊಂದರೆಯಾಗುವುದಿಲ್ಲ.
* ಮಂದಗತಿಯ ಮಾರುಕಟ್ಟೆಯಿಂದಾಗಿ (ಮಾರ್ಕೆಟ್ ಸ್ಲೋಡೌನ್) ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡಿದ್ದೇವೆ. ಕೆಲವು ಗ್ರಾಹಕರಿಗೆ ಇಪ್ಪತ್ತು ವರ್ಷದ ಅವಧಿಗೆ ಸಾಲ ನೀಡಿದ್ದೇವೆ. ಅವರು ಸರಿಯಾದ ಸಮಯಕ್ಕೆ ಬಡ್ಡಿ ಕಟ್ಟುತ್ತಿದ್ದಾರೆ.

* ಸಾವಿರದ ಇನ್ನೂರಾ ಎಂಬತ್ತು ಕೋಟಿಯಷ್ಟು ಬ್ಯಾಂಕ್ ಸೆಕ್ಯೂರಿಟಿ ಇದೆ. ಸಾವಿರದ ಆರುನೂರಾ ಎಂಬತ್ತು ಕೋಟಿ ಸಾಲ ಇದೆ.
* ಯಾವುದೇ ಊಹಾಪೋಹಗಳಿಗೆ ತಲೆ ಕೆಡಿಸಿಕೊಳ್ಳಬೇಡಿ. ಕೊಟ್ಟ ಸಾಲಕ್ಕೆ ಪೂರ್ಣ ಭದ್ರತೆ ಇದೆ. ಯಾರೂ ಹೆದರಬೇಡಿ.
* ಆರ್ ಬಿಐ ನೋಟಿಸ್ ನೀಡಿದ್ದು ಶುಕ್ರವಾರ. ಆ ನಂತರ ಶನಿವಾರ- ಭಾನುವಾರ ರಜಾ ಇದ್ದುದರಿಂದ ಈ ಗೊಂದಲ ಆಗಿದೆ. ಒಂದೇ ದಿನದಲ್ಲಿ ಆರು ಕೋಟಿ ಕ್ಯಾಶ್ ವಿಥ್ ಡ್ರಾ ಮಾಡಿಕೊಟ್ಟಿದ್ದೇವೆ.
* ಕೊಟ್ಟ ಸಾಲಕ್ಕೆ ಸಂಪೂರ್ಣ ಭದ್ರತೆ ಇದೆ. ಯಾವುದೇ ಅವ್ಯವಹಾರ ಆಗಿಲ್ಲ. ಹೆದರುವ ಅಗತ್ಯ ಇಲ್ಲ.
* ಹಣವನ್ನು ಯಾರೂ ಹಿಂಪಡೆಯಲು ಹೋಗಬೇಡಿ, ನವೀಕರಿಸಿ.
* ಎಲ್ಲ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ನಲವತ್ತೆರಡು ದಿನಗಳ ಸಮಯ ನೀಡಲಾಗಿದೆ.
* ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದರಿಂದ ಸಭೆಗೆ ಬಾರದ ಬ್ಯಾಂಕ್ ಅಧ್ಯಕ್ಷ ರಾಮಕೃಷ್ಣ: ಬ್ಯಾಂಕ್ ಸಲಹೆಗಾರ ಮಯ್ಯ ಹೇಳಿಕೆ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications