ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ ಸೇರಿದಂತೆ ಮೂರು ಕೋ-ಆಪರೇಟಿವ್ ಬ್ಯಾಂಕ್ಗಳ ಹಗರಣ ಪ್ರಕರಣವನ್ನು ಕರ್ನಾಟಕ ರಾಜ್ಯ ಸರ್ಕಾರವು ಕೇಂದ್ರಿಯಾ ತನಿಖಾ ದಳಕ್ಕೆ (ಸಿಬಿಐ) ವರ್ಗಾವಣೆ ಮಾಡಲು ನಿರ್ಧಾರ ಮಾಡಿದೆ. ಇದು ಮೂರು ಕೋ-ಆಪರೇಟಿವ್ ಬ್ಯಾಂಕ್ಗಳು ಸೇರಿ ನಡೆಸಿರುವ ಸುಮಾರು 1800 ಕೋಟಿ ರೂಪಾಯಿಯ ವಂಚನೆ ಪ್ರಕರಣವಾಗಿದೆ.
ನಕಲಿ ದಾಖಲೆಯನ್ನು ಸೃಷ್ಟಿ ಮಾಡಿ, ಗ್ರಾಹಕರಿಗೆ ಹಾಗೂ ಠೇವಣಿದಾರರಿಗೆ ಈ ಮೂರು ಕೋ-ಆಪರೇಟಿವ್ ಬ್ಯಾಂಕುಗಳು ಮೋಸವನ್ನು ಮಾಡಿದೆ. ಗುರುರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ, ವಸಿಷ್ಠ ಕೋ-ಆಪರೇಟಿವ್ ಸೊಸೈಟಿ, ಗುರುರಾಘವೇಂದ್ರ ಸೌಹಾರ್ದ ಸೊಸೈಟಿಯ ಹಗರಣ ಇದಾಗಿದೆ. ಈ ಹಗರಣ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗುವುದು ಎಂದು ವಿಧಾನಸೌಧದಲ್ಲಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ನೇತ್ರತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಈ ಸೊಸೈಟಿಗಳಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ, ಸಾಲ ವಸೂಲಾತ ಬಗ್ಗೆ ಸ್ಥಳೀಯ ಶಾಸಕರು, ವಿಧಾನ ಸಭೆ ಪರಿಷತ್ ಸದಸ್ಯರಗಳ ಜೊತೆ ಮಂಗಳವಾರ ಸಭೆ ನಡೆಸಲಾಗಿದೆ. ಈ ಸಭೆ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಈ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ್ದಾರೆ.

"ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ ಮತ್ತು ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ಗಳಲ್ಲಿ ವಂಚನೆ ನಡೆದಿರುವ ಬಗ್ಗೆ ಮೂರು ವರ್ಷಗಳಿಂದ ತನಿಖೆ ನಡೆಯುತ್ತಿದೆ. ಆದರೂ ಇನ್ನೂ ಕೂಡಾ ಸಾಲ ವಸೂಲಾತಿ ಆಗಿಲ್ಲ. ಅದಕ್ಕಾಗಿ ಈಗ ಸಿಬಿಐಗೆ ವಹಿಸಲು ಸಂಪುಟ ನಿರ್ಧಾರ ಮಾಡಿದೆ," ಎಂದು ಎಸ್ ಟಿ ಸೋಮಶೇಖರ್ ಮಾಹಿತಿ ನೀಡಿದ್ದಾರೆ.
ಸಿಬಿಐ ತನಿಖೆಗೆ ಈ ಹಿಂದೆಯೇ ಒತ್ತಾಯ
ಈ ಹಿಂದೆ ಈ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಬೇಕು ಎಂದು ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಷೇರುದಾರರು ಹಾಗೂ ಠೇವಣಿದಾರರ ಹಿತರಕ್ಷಣಾ ವೇದಿಕೆಯು ಆಗ್ರಹ ಮಾಡಿತ್ತು. ಹಗರಣ ಬೆಳಕಿಗೆ ಬಂದು ಎರಡು ವರ್ಷವಾದರೂ ಇನ್ನೂ ಕೂಡಾ ಯಾವುದೇ ಬೆಳವಣಿಗೆಗಳು ಕಂಡು ಬಂದಿಲ್ಲ. ಹೂಡಿಕೆದಾರರ ಹಣ ಮರುವಸೂಲಿಯಾಗಿಲ್ಲ ಎಂದು ಕಳೆದ ವರ್ಷ ಹಿತರಕ್ಷಣಾ ವೇದಿಕೆಯು ಅಸಮಾಧಾನ ವ್ಯಕ್ತಪಡಿಸಿತ್ತು.
"ಗುರುಸಾರ್ವಭೌಮ ಸೊಸೈಟಿಯಲ್ಲಿ 270 ಕೋಟಿ ರೂ. ಹಗರಣ, ವಸಿಷ್ಠ ಸೌಹಾರ್ದ ಸೊಸೈಟಿಯಲ್ಲಿ ಸುಮಾರು 500 ಕೋಟಿ ರೂ. ಹಗರಣ, ಗುರು ರಾಘವೇಂದ್ರ ಕೋ - ಆಪರೇಟಿವ್ ಬ್ಯಾಂಕಿನಲ್ಲಿ 2,400 ಕೋಟಿ ರೂ. ಹಗರಣ, ಕಣ್ವ ಸೌಹಾರ್ದ ಸೊಸೈಟಿಯಲ್ಲಿ ನೂರು ಕೋಟಿ ರೂ. ಹಗರಣ, ನಾಗರತ್ನ ಸೌಹಾರ್ದ ಸೊಸೈಟಿಯಲ್ಲಿ 150 ಕೋಟಿ ರೂ. ಹಗರಣ ನಡೆದಿದೆ," ಎಂದು ಆರೋಪ ಮಾಡಿದ್ದ ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಷೇರುದಾರರು ಹಾಗೂ ಠೇವಣಿದಾರರ ಹಿತರಕ್ಷಣಾ ವೇದಿಕೆಯ ಮುಖ್ಯಸ್ಥರಾದ ಡಾ. ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಈ ಬಗ್ಗೆ ಸರ್ಕಾರ ಮಾತನಾಡುತ್ತಿಲ್ಲ ಎಂದಿದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications