ಉತ್ತರ ಭಾರತದ ಹಲವು ರಾಜ್ಯಗಳು ಕೊರೊನಾವೈರಸ್ ಕಾರಣದಿಂದಾಗಿ ಗುಟ್ಕಾ, ಪಾನ್ಮಸಾಲ ಉತ್ಪಾದನೆ ಹಾಗೂ ಮಾರಾಟವನ್ನು ನಿಷೇಧಿಸಿದೆ. ಇದು ಅಡಿಕೆ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದು, ರಾಜ್ಯದ ಅಡಿಕೆ ಬೆಳೆಗಾರರನ್ನು ಕಂಗಾಲಾಗುವಂತೆ ಮಾಡಿದೆ.
ಗುಟ್ಕಾ ಹಾಕಿಕೊಳ್ಳುವ ಜನರು ಎಲ್ಲೆಂದರಲ್ಲಿ ಉಗುಳುವ ಪರಿಣಾಮ ಕೊರೊನಾವೈರಸ್ ವೇಗವಾಗಿ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ತಾತ್ಕಾಲಿಕವಾಗಿ ಅಡಿಕೆ ಮಾರುಕಟ್ಟೆಯು ಸ್ಥಗಿತಗೊಂಡಿದೆ. 21 ದಿನಗಳ ಲಾಕ್ಡೌನ್ ಮುಗಿದ ಬಳಿಕ ಏಪ್ರಿಲ್ 14ರ ನಂತರ ಮತ್ತೆ ವ್ಯಾಪಾರ-ವಹಿವಾಟು ಆರಂಭಗೊಳ್ಳುವ ಸಾಧ್ಯತೆ ಇದೆ.

ರಾಜ್ಯದ ಅಡಿಕೆಗೆ ಉತ್ತರ ಭಾರತದ ರಾಜ್ಯಗಳೇ ಪ್ರಮುಖ ಮಾರುಕಟ್ಟೆಯಾಗಿದೆ. ದೇಶದಲ್ಲಿ 90 ಪರ್ಸೆಂಟ್ನಷ್ಟು ಗುಟ್ಕಾ, ಪಾನ್ ಮಸಾಲ ಕಾರ್ಖಾನೆಗಳು ಉತ್ತರ ಭಾರತದ ರಾಜ್ಯಗಳಲ್ಲಿವೆ. ಕೊರೊನಾ ಕಾರಣ ಉತ್ತರಪ್ರದೇಶ, ಹರಿಯಾಣ ಮೊದಲಾದ ರಾಜ್ಯಗಳು ದೀರ್ಘಾವಧಿಯವರೆಗೆ ನಿಷೇಧ ಹೇರಿವೆ.
ದೇಶದಲ್ಲಿ ಬೆಳೆಯುವ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ರಾಜ್ಯದ ಪ್ರಮಾಣ 60 ಪರ್ಸೆಂಟ್. ಕರ್ನಾಟದಲ್ಲಿ ಪ್ರತಿವರ್ಷ ಸುಮಾರು 4 ಲಕ್ಷದಿಂದ 5 ಲಕ್ಷ ಅಡಿಕೆ ಉತ್ಪಾದನೆ ಮಾಡಲಾಗುತ್ತದೆ. ರಾಜ್ಯದಲ್ಲಿ ಬೆಳೆಯುವ 70 ಪರ್ಸೆಂಟ್ ಅಡಿಕೆಯನ್ನು ದಾವಣಗೆರೆ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications