ಜರ್ಮನ್ ತಂತ್ರಜ್ಞಾನ ಕಂಪೆನಿ SAP ಭಾರತದಲ್ಲಿನ ತನ್ನ ಉದ್ಯೋಗಿಗಳಿಗೆ ಫೆಬ್ರವರಿ 20ರಿಂದ 28ನೇ ತಾರೀಕು ಮನೆಗಳಿಂದಲೇ ಕಾರ್ಯ ನಿರ್ವಹಿಸುವಂತೆ ಸಲಹೆ ಮಾಡಿದೆ. ಉತ್ತರ ಬೆಂಗಳೂರಿನ ಎಕೋವರ್ಲ್ಡ್ ಕಚೇರಿಯಲ್ಲಿ H1N1 (ಹಂದಿಜ್ವರ) ಪ್ರಕರಣಗಳು ಕೆಲವು ಕಂಡುಬಂದಿದ್ದರಿಂದ ಈ ಸಲಹೆ ನೀಡಲಾಗಿದೆ.
"ನಮ್ಮ ಸಿಬ್ಬಂದಿಯ ಆರೋಗ್ಯ ನಮಗೆ ಆದ್ಯತೆ. ಇದು ತುಂಬ ಗಂಭೀರ ವಿಚಾರವಾದ್ದರಿಂದ H1N1 ವೈರಾಣು ಹರಡದಂತೆ ತಡೆಯಲು ಏನು ಮಾಡಬೇಕು ಎಂದು ಮಾಹಿತಿ ಒದಗಿಸುತ್ತಿದ್ದೇವೆ" ಎಂದು SAP ತನ್ನ ಸಿಬ್ಬಂದಿಗೆ ಕಳುಹಿಸಿರುವ ಆಂತರಿಕ ಮೇಲ್ ನಲ್ಲಿ ತಿಳಿಸಿದೆ. ಇನ್ನು ಮುಂದಿನ ಸೂಚನೆ ನೀಡುವ ತನಕ ಬೆಂಗಳೂರು, ಮುಂಬೈ ಹಾಗೂ ಗುರುಗ್ರಾಮದಲ್ಲಿ ಇರುವ ಕಂಪೆನಿಯ ಕಚೇರಿಗಳನ್ನು ಮುಂಜಾಗ್ರತಾ ಕ್ರಮವಾಗಿ ಮುಚ್ಚಲಾಗಿದೆ.
ಒಂದು ವೇಳೆ ನೀವು ಅಥವಾ ನಿಮ್ಮ ಕುಟುಂಬ ಸದಸ್ಯರಲ್ಲಿ ಯಾರಾದರೂ ಶೀತ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವ ಲಕ್ಷಣ ಕಂಡುಬರುತ್ತಿದ್ದಲ್ಲಿ ತಕ್ಷಣ ವೈದ್ಯಕೀಯ ಸಲಹೆ ಪಡೆಯಿರಿ" ಎಂದು ಕಂಪೆನಿ ಹೇಳಿದೆ.

ಅಂದ ಹಾಗೆ ಕೊರೊನಾ ವೈರಾಣು ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿರುವ ಈ ವೇಳೆಯಲ್ಲಿ ವ್ಯಾಪಾರ- ವ್ಯವಹಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಫೆಬ್ರವರಿ 24ರಿಂದ 28ರ ತನಕ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆಯಬೇಕಿದ್ದ ಜಾಗತಿಕ ಸಮಾವೇಶವನ್ನು ಈಚೆಗೆ ಐಬಿಎಂನಿಂದ ರದ್ದುಪಡಿಸಲಾಗಿದೆ.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ



Click it and Unblock the Notifications