ಬೆಂಗಳೂರು: ಪ್ರಸ್ತುತ ಎಚ್ಸಿಎಲ್ ಕಂಪನಿಯ ಅಧ್ಯಕ್ಷ ಶಿವ ನಡಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಜುಲೈ 17 ರಂದು ಅಂಗೀಕಾರಗೊಂಡಿದೆ.
ತೆರವಾದ ನೋಯ್ಡಾ ಮೂಲದ ಎಚ್ಸಿಎಲ್ ಕಂಪನಿಯ ಅಧ್ಯಕ್ಷ ಸ್ಥಾನವನ್ನು ಶಿವ ನಡಾರ್ ಅವರ ಮಗಳು ರೋಶಿನಿ ನಡಾರ್ ಮಲ್ಹೋತ್ರಾ ಅವರು ತುಂಬಲಿದ್ದಾರೆ. ಶಿವ ನಡಾರ್ ಅವರು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಮುಂದುವರೆಯಲಿದ್ದಾರೆ. ಎಚ್ಸಿಎಲ್ ಅಧ್ಯಕ್ಷರಾಗುವ ಮೂಲಕ ರೋಶಿನಿ ಅವರು ಇದೀಗ ಭಾರತದ ಶ್ರೀಮಂತ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.
ರೋಶಿನಿ ನಡಾರ್ ಮಲ್ಹೋತ್ರಾ ಅವರ ಪರಿಚಯ ಇಲ್ಲಿದೆ...
ಅಮೆರಿಕದ ಇಲಿನಾಯ್ಸ್ ವಿಶ್ವವಿದ್ಯಾಲಯದಿಂದ ಪದವಿ
ರೋಶಿನಿ ಅವರು ರಾಷ್ಟ್ರ ರಾಜಧಾನಿ ನವದೆಹಲಿಯ ವಸಂತ್ ವ್ಯಾಲಿ ಶಾಲೆಯಿಂದ ಶಾಲಾ ಶಿಕ್ಷಣವನ್ನು ಪಡೆದಿದ್ದಾರೆ ಮತ್ತು ನಂತರ ಅಮೆರಿಕದ ಇಲಿನಾಯ್ಸ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಕೆಲ್ಲಾಗ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ನಿಂದ ಮಾಸ್ಟರ್ಸ್ ಇನ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮಾಡಿದ್ದಾರೆ.
ಸಿಇಒ ಹುದ್ದೆ ಅಲಂಕರಿಸಿದ್ದಾರೆ
ರೋಶ್ನಿ ನಾಡರ್ ಮಲ್ಹೋತ್ರಾ ಅವರು ಎಚ್ಸಿಎಲ್ ಕಾರ್ಪೊರೇಶನ್ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ಹುದ್ದೆಗಳನ್ನು ಅಲಂಕರಿಸಿದ್ದಾರೆ, ಎಚ್ಸಿಎಲ್ ಟೆಕ್ನಾಲಜೀಸ್ ಮಂಡಳಿಯ ಉಪಾಧ್ಯಕ್ಷರಾಗಿದ್ದಾರೆ ಮತ್ತು ಶಿವ ನಾಡರ್ ಪ್ರತಿಷ್ಠಾನದ ಟ್ರಸ್ಟಿಯೂ ಆಗಿದ್ದಾರೆ. ಎಚ್ಸಿಎಲ್ ಕಾರ್ಪೊರೇಶನ್ನಲ್ಲಿ, ಸಂಸ್ಥೆಗೆ ಕಾರ್ಯತಂತ್ರದ ಸಲಹೆಗಳನ್ನು ನೀಡುವ ಕೆಲಸವನ್ನು ರೋಶಿನಿ ಹೊಂದಿದ್ದಾರೆ.
ಶೇ 7.3 ರ ಕುಸಿತ
ಜೂನ್ ತ್ರೈಮಾಸಿಕದಲ್ಲಿ ಎಚ್ಸಿಎಲ್ ಕಂಪನಿಯು ತನ್ನ ನಿವ್ವಳ ಲಾಭದಲ್ಲಿ ಶೇ 7.3 ರ ಕುಸಿತವನ್ನು ದಾಖಲಿಸಿತ್ತು. ಈ ವೇಳೆ ನಿವ್ವಳ ಲಾಭ 2925 ಕೋಟಿ ರುಪಾಯಿ ಆಗಿದ್ದರೆ, ಮಾರ್ಚ್ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ 3154 ಕೋಟಿ ರು ಆಗಿತ್ತು.
ಆದಾಯ ಶೇ 4 ರಷ್ಟು ಕುಸಿತವಾಗಿದೆ
ಕಳೆದ ತ್ರೈಮಾಸಿಕದಲ್ಲಿ ಎಚ್ಸಿಎಲ್ನ ಆದಾಯ ಶೇ 4 ರಷ್ಟು ಕುಸಿತವಾಗಿದೆ. ಶಿವ ನಡಾರ್ ಅವರು ಹುದ್ದೆ ತ್ಯಜೀಸುವ ಇಚ್ಚೆ ವ್ಯಕ್ತಪಡಿಸಿದ್ದರಿಂದ ರೋಶಿನಿ ನಡಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತಿದೆ ಎಂದು ಕಂಪನಿ ಪ್ರಕಟಣೆ ತಿಳಿಸಿದೆ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications