ಎಚ್ಡಿಎಫ್ಸಿ ಬ್ಯಾಂಕ್ನೊಂದಿಗೆ ಎಚ್ಡಿಎಫ್ಸಿಯ ವಿಲೀನಕ್ಕೆ ಅನುಮೋದನೆ ಪಡೆಯಲು ಷೇರುದಾರರ ಸಭೆಯನ್ನು ನಡೆಸಲು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್ಸಿಎಲ್ಟಿ) ತನ್ನ ಒಪ್ಪಿಗೆ ನೀಡಿದೆ.
ಈ ವಿಲೀನವನ್ನು ಒಪ್ಪುವ ಮತ್ತು ಅನುಮೋದಿಸುವ ಉದ್ದೇಶಕ್ಕಾಗಿ ಷೇರುದಾರರ ಸಭೆಯನ್ನು ನವೆಂಬರ್ 25, 2022 ರಂದು ಕರೆಯಲಾಗುವುದು ಎಂದು ಎಚ್ಡಿಎಫ್ಸಿ ಶುಕ್ರವಾರ ಫೈಲಿಂಗ್ನಲ್ಲಿ ತಿಳಿಸಿದೆ.
ಎಚ್ಡಿಎಫ್ಸಿ ಲಿಮಿಟೆಡ್ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಎಚ್ಡಿಎಫ್ಸಿ ಪ್ರಾಪರ್ಟಿ ವೆಂಚರ್ಸ್ ಲಿಮಿಟೆಡ್ (ಎಚ್ಪಿವಿಎಲ್) ಅನ್ನು ಎಚ್ಡಿಎಫ್ಸಿ ಬ್ಯಾಂಕ್ಗೆ ವರ್ಗಾಯಿಸಲು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅನುಮೋದನೆಯನ್ನು ಸಹ ಪಡೆದುಕೊಂಡಿದೆ.

ಭಾರತದ ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ವಹಿವಾಟು ಹೊಂದಿರುವ ಎಚ್ಡಿಎಫ್ಸಿ ಬ್ಯಾಂಕ್ ಏಪ್ರಿಲ್ 4 ರಂದು ಸುಮಾರು ಯುಎಸ್ಡಿ 40 ಶತಕೋಟಿ ಮೌಲ್ಯದ ಅತಿದೊಡ್ಡ ದೇಶೀಯ ಡೀಲ್ ಅನ್ನು ಸ್ವಾಧೀನಪಡಿಸಿಕೊಳ್ಳಲು ಒಪ್ಪಿಕೊಂಡಿತು.
ಯಾವೆಲ್ಲ ಸಂಸ್ಥೆಗಳಿಂದ ಒಪ್ಪಿಗೆ ಲಭಿಸಿದೆ?
ಈ ಒಪ್ಪಂದಕ್ಕೆ ಷೇರು ವಿನಿಮಯ ಕೇಂದ್ರಗಳು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ), ಸೆಬಿ, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್ಆರ್ಡಿಎ) ಮತ್ತು ಸಿಸಿಐಯಿಂದ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಪ್ರಸ್ತಾವಿತ ಘಟಕವು ಸುಮಾರು 18 ಲಕ್ಷ ಕೋಟಿ ರೂ.ಗಳ ಒಟ್ಟು ಆಸ್ತಿಯನ್ನು ಹೊಂದಿರುತ್ತದೆ. ಈ ಎಲ್ಲ ಒಪ್ಪಿಗೆ ಪ್ರಕ್ರಿಯೆ ಪೂರ್ಣವಾದರೆ ಹಣಕಾಸು ವರ್ಷ 2024ರಲ್ಲಿ ಎರಡನೇ ಅಥವಾ ಮೂರನೇ ತ್ರೈಮಾಸಿಕದಲ್ಲಿ ವಿಲೀನವು ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಒಪ್ಪಂದ ಪೂರ್ಣವಾದ ಬಳಿಕ ಏನು ಬದಲಾವಣೆ?
ಈ ಒಪ್ಪಂದದ ಬಳಿಕ ಎಚ್ಡಿಎಫ್ಸಿ ಬ್ಯಾಂಕ್ ಶೇಕಡ 100ರಷ್ಟು ಸಾರ್ವಜನಿಕ ಷೇರುದಾರರ ಒಡೆತನದಲ್ಲಿ ಇರುತ್ತದೆ. ಎಚ್ಡಿಎಫ್ಸಿಯ ಅಸ್ತಿತ್ವದಲ್ಲಿರುವ ಷೇರುದಾರರು ಬ್ಯಾಂಕ್ನ ಶೇಕಡಾ 41 ರಷ್ಟು ಒಡೆತನವನ್ನು ಹೊಂದಿರುತ್ತಾರೆ. ಪ್ರತಿ ಎಚ್ಡಿಎಫ್ಸಿ ಷೇರುದಾರರು ಪ್ರತಿ 25 ಷೇರುಗಳಿಗೆ ಎಚ್ಡಿಎಫ್ಸಿ ಬ್ಯಾಂಕ್ನ 42 ಷೇರುಗಳನ್ನು ಪಡೆಯುತ್ತಾರೆ.
ಎಚ್ಡಿಎಫ್ಸಿ, ಎಚ್ಡಿಎಫ್ಸಿ ಬ್ಯಾಂಕ್ ವಿಲೀನದಿಂದಾಗಿ ಅತೀ ದೊಡ್ಡ ಸ್ಟಾಕ್ ಆಗುವ ಸಾಧ್ಯತೆ ಇದೆ. ಈ ವಿಲೀನದ ಮೂಲಕ ಎಚ್ಡಿಎಫ್ಸಿ ಬ್ಯಾಂಕ್ಗೆ ಕೃಷಿ ಸೇರಿದಂತೆ ಆದ್ಯತೆಯ ವಲಯಕ್ಕೆ ಹೆಚ್ಚಿನ ಪ್ರಮಾಣದ ಸಾಲವನ್ನು ಸುಗಮವಾಗಿ ಹಾಗೂ ಶೀಘ್ರವಾಗಿ ನೀಡಲು ಸಾಧ್ಯವಾಗುತ್ತದೆ ಎಂದು ಎಚ್ಡಿಎಫ್ಸಿ ಹೇಳಿದೆ. ಎಚ್ಡಿಎಫ್ಸಿ ಹಾಗೂ ಎಚ್ಡಿಎಫ್ಸಿ ಬ್ಯಾಂಕ್ ಅನ್ನು ವಿಲೀನ ಮಾಡುವುದರಿಂದ ಎಚ್ಡಿಎಫ್ಸಿ ಬ್ಯಾಂಕ್ನ ಅಸುರಕ್ಷಿತ ಸಾಲಗಳ ಪ್ರಮಾಣ ಕಡಿಮೆ ಆಗಲಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications