ಕಳೆದ ಕೆಲವು ದಿನಗಳಿಂದ ಬಿಸಿ ಬಿಸಿ ಇದ್ದ ಕರ್ನಾಟಕ (Karnataka), ಸದ್ಯ ಚಳಿಯಿಂದ ಗಢ ಗಢ ನಡುಗುತ್ತಿದೆ. ಅದರಲ್ಲೂ ಕೆಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿಯಲ್ಲೇ ಜನ ಜೀವನ ನಡೆಸುತ್ತಿದ್ದಾರೆ. ಕೆಲವರಂತೂ ಯಪ್ಪಾ, ಯಾವಾಗ ಕಡಿಮೆಯಾಗುತ್ತೆ ಈ ಚಳಿ (Cold) ಎಂಬಂತಹ ದಿನಂಪ್ರತಿ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. ಇದಕ್ಕೆಲ್ಲಾ ಕಾರಣ ವಿಪರೀತ ಚಳಿ. ದಿನನಿತ್ಯ ಮಳೆ ಅಲರ್ಟ್ ನೀಡುತ್ತಿದ್ದ ಹವಾಮಾನ ಇಲಾಖೆ (IMD) ಕೂಡಾ ಬದಲಾಗಿದೆ. ಇದೀಗ ಚಳಿ ಅಲರ್ಟ್ ನೀಡುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಭಾರೀ ಇಳಿಕೆಯಾಗಲಿದೆ ಎಂದು ಸೂಚನೆ ಹೊರಡಿಸಿದೆ.

ಕರ್ನಾಟಕದಲ್ಲಿ ಕುಸಿತ ಕಂಡ ತಾಪಮಾನ!
ಹೌದು, ಇದೀಗ ಹವಾಮಾನ ಇಲಾಖೆಯ ಪ್ರಕಾರ, ಕರ್ನಾಟಕದಲ್ಲಿ ಇತ್ತೀಚೆಗೆ ತಾಪಮಾನ ಗಣನೀಯವಾಗಿ ಕುಸಿದಿದೆ. ಇತ್ತೀಚೆಗೆ ರಾಜ್ಯದಲ್ಲಿ ಉಂಟಾದ ಶೀತ ಅಲೆಯ ಪರಿಣಾಮ ಈ ಬದಲಾವಣೆಗೆ ಕಾರಣವಾಗಿದೆ. ಅಲ್ಲದೇ, ಮುಂದಿನ ಕೆಲವು ದಿನಗಳಲ್ಲಿ ಚಳಿ, ಮಂಜು, ಶೀತ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇದೀಗ ಇಂದೂ ಕೂಡಾ ತಾಪಮಾನ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ.
ಎಲ್ಲೆಲ್ಲಿ ತಾಪಮಾನ ಇಳಿಕೆ?
ರಾಜ್ಯದ ಕಲ್ಯಾಣ ಕರ್ನಾಟಕದ ಕೆಲವು ಕಡೆಗಳಲ್ಲಿ 7 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲ ಇನ್ನೆರಡು ದಿನವೂ ಇದೇ ರೀತಿಯ ಚಳಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ವಿಶೇಷವಾಗಿ ಬೀದರ್ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ. ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲೂ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ.
ಈ ಜಿಲ್ಲೆಗಳಿಗೆ ಅಲರ್ಟ್!
ಕಳೆದ ಭಾನುವಾರ (ಡಿ.21) ವಿಜಯಪುರದಲ್ಲಿ ಬರೀ 6.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಆದರೆ ಇದು ಕಳೆದ 20 ವರ್ಷಗಳಲ್ಲಿ ದಾಖಲಾದ ಅತಿ ಕಡಿಮೆ ಉಷ್ಣಾಂಶವಾಗಿದೆ. ಇನ್ನು ತಾಪಮಾನ ಕುಸಿತದ ಬಗ್ಗೆ ಡಿಸೆಂಬರ್ 22 ರಂದು 5 ಕಡೆ ಯೆಲ್ಲೋ ಅಲರ್ಟ್ ನೀಡಲಾಗಿತ್ತು. ಆದ್ರೆ ಇಂದು ಕಲಬುರ್ಗಿ ಮತ್ತು ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನ ಪರಿಸ್ಥಿತಿ ಹೇಗಿದೆ?
ಇನ್ನು ಬೆಂಗಳೂರಂತೂ ಬೆಳಿಗ್ಗೆ ಕಾಣೋದೆ ಇಲ್ಲಂಬಂತಾಗಿದೆ. ಅಕ್ಷರಶಃ ಮಂಜಿನಿಂದ ಆವೃತವಾಗಿರುತ್ತೆ. ಕೆಲವು ದಿನಗಳಿಂದ ಬೆಂಗಳೂರಿನ ಹವಾಮಾನದಲ್ಲೂ ಏರುಪೇರಾಗುತ್ತಿದೆ. ಚಳಿ ಹೆಚ್ಚಾಗುತ್ತಿದ್ದು, ತಾಪಮಾನದಲ್ಲೂ ಇಳಿಕೆ ಕಂಡುಬರುತ್ತಿದೆ. ಇದೀಗ ಇಂದೂ ಕೂಡಾ ಬೆಂಗಳೂರಿನ ಬಹುತೇಕ ನಗರಗಳು ಮಂಜಿನಿಂದ ಆವೃತವಾಗಿರುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನರು ಬೆಚ್ಚನೆಯ ಉಡುಪು, ಉತ್ತಮ ಆಹಾರ ಸೇವನೆಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ. ಇನ್ನು ಬೆಂಗಳೂರಿನ ತಾಪಮಾನ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಅಬ್ಬರ ಹೆಚ್ಚಾಗಲಿದ್ದು, ಈ ಪ್ರಭಾವದಿಂದ ಚಳಿಯೂ ಹೆಚ್ಚಾಗಲಿದೆ. ಆದ್ದರಿಂದ ಜನರೂ ಕೂಡಾ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
More From GoodReturns

Karnataka Rain: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್; ಜನರೇ ಎಚ್ಚರ!

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

KOMUL Milk Price: ಕೋಲಾರ ರೈತರಿಗೆ ಯುಗಾದಿ ಗಿಫ್ಟ್; ಕೋಮುಲ್ ಹಾಲು ದರ 39.85 ರೂ.ಗೆ ಏರಿಕೆ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು



Click it and Unblock the Notifications