ಕಳೆದ ಕೆಲವು ದಿನಗಳಿಂದ ಬಿಸಿ ಬಿಸಿ ಇದ್ದ ಕರ್ನಾಟಕ (Karnataka), ಸದ್ಯ ಚಳಿಯಿಂದ ಗಢ ಗಢ ನಡುಗುತ್ತಿದೆ. ಅದರಲ್ಲೂ ಕೆಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿಯಲ್ಲೇ ಜನ ಜೀವನ ನಡೆಸುತ್ತಿದ್ದಾರೆ. ಕೆಲವರಂತೂ ಯಪ್ಪಾ, ಯಾವಾಗ ಕಡಿಮೆಯಾಗುತ್ತೆ ಈ ಚಳಿ (Cold) ಎಂಬಂತಹ ದಿನಂಪ್ರತಿ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. ಇದಕ್ಕೆಲ್ಲಾ ಕಾರಣ ವಿಪರೀತ ಚಳಿ. ದಿನನಿತ್ಯ ಮಳೆ ಅಲರ್ಟ್ ನೀಡುತ್ತಿದ್ದ ಹವಾಮಾನ ಇಲಾಖೆ (IMD) ಕೂಡಾ ಬದಲಾಗಿದೆ. ಇದೀಗ ಚಳಿ ಅಲರ್ಟ್ ನೀಡುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಭಾರೀ ಇಳಿಕೆಯಾಗಲಿದೆ ಎಂದು ಸೂಚನೆ ಹೊರಡಿಸಿದೆ.

ಕರ್ನಾಟಕದಲ್ಲಿ ಕುಸಿತ ಕಂಡ ತಾಪಮಾನ!
ಹೌದು, ಇದೀಗ ಹವಾಮಾನ ಇಲಾಖೆಯ ಪ್ರಕಾರ, ಕರ್ನಾಟಕದಲ್ಲಿ ಇತ್ತೀಚೆಗೆ ತಾಪಮಾನ ಗಣನೀಯವಾಗಿ ಕುಸಿದಿದೆ. ಇತ್ತೀಚೆಗೆ ರಾಜ್ಯದಲ್ಲಿ ಉಂಟಾದ ಶೀತ ಅಲೆಯ ಪರಿಣಾಮ ಈ ಬದಲಾವಣೆಗೆ ಕಾರಣವಾಗಿದೆ. ಅಲ್ಲದೇ, ಮುಂದಿನ ಕೆಲವು ದಿನಗಳಲ್ಲಿ ಚಳಿ, ಮಂಜು, ಶೀತ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇದೀಗ ಇಂದೂ ಕೂಡಾ ತಾಪಮಾನ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ಹೊರಡಿಸಿದೆ.
ಎಲ್ಲೆಲ್ಲಿ ತಾಪಮಾನ ಇಳಿಕೆ?
ರಾಜ್ಯದ ಕಲ್ಯಾಣ ಕರ್ನಾಟಕದ ಕೆಲವು ಕಡೆಗಳಲ್ಲಿ 7 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲ ಇನ್ನೆರಡು ದಿನವೂ ಇದೇ ರೀತಿಯ ಚಳಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ವಿಶೇಷವಾಗಿ ಬೀದರ್ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ. ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲೂ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ.
ಈ ಜಿಲ್ಲೆಗಳಿಗೆ ಅಲರ್ಟ್!
ಕಳೆದ ಭಾನುವಾರ (ಡಿ.21) ವಿಜಯಪುರದಲ್ಲಿ ಬರೀ 6.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಆದರೆ ಇದು ಕಳೆದ 20 ವರ್ಷಗಳಲ್ಲಿ ದಾಖಲಾದ ಅತಿ ಕಡಿಮೆ ಉಷ್ಣಾಂಶವಾಗಿದೆ. ಇನ್ನು ತಾಪಮಾನ ಕುಸಿತದ ಬಗ್ಗೆ ಡಿಸೆಂಬರ್ 22 ರಂದು 5 ಕಡೆ ಯೆಲ್ಲೋ ಅಲರ್ಟ್ ನೀಡಲಾಗಿತ್ತು. ಆದ್ರೆ ಇಂದು ಕಲಬುರ್ಗಿ ಮತ್ತು ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನ ಪರಿಸ್ಥಿತಿ ಹೇಗಿದೆ?
ಇನ್ನು ಬೆಂಗಳೂರಂತೂ ಬೆಳಿಗ್ಗೆ ಕಾಣೋದೆ ಇಲ್ಲಂಬಂತಾಗಿದೆ. ಅಕ್ಷರಶಃ ಮಂಜಿನಿಂದ ಆವೃತವಾಗಿರುತ್ತೆ. ಕೆಲವು ದಿನಗಳಿಂದ ಬೆಂಗಳೂರಿನ ಹವಾಮಾನದಲ್ಲೂ ಏರುಪೇರಾಗುತ್ತಿದೆ. ಚಳಿ ಹೆಚ್ಚಾಗುತ್ತಿದ್ದು, ತಾಪಮಾನದಲ್ಲೂ ಇಳಿಕೆ ಕಂಡುಬರುತ್ತಿದೆ. ಇದೀಗ ಇಂದೂ ಕೂಡಾ ಬೆಂಗಳೂರಿನ ಬಹುತೇಕ ನಗರಗಳು ಮಂಜಿನಿಂದ ಆವೃತವಾಗಿರುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನರು ಬೆಚ್ಚನೆಯ ಉಡುಪು, ಉತ್ತಮ ಆಹಾರ ಸೇವನೆಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ. ಇನ್ನು ಬೆಂಗಳೂರಿನ ತಾಪಮಾನ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಅಬ್ಬರ ಹೆಚ್ಚಾಗಲಿದ್ದು, ಈ ಪ್ರಭಾವದಿಂದ ಚಳಿಯೂ ಹೆಚ್ಚಾಗಲಿದೆ. ಆದ್ದರಿಂದ ಜನರೂ ಕೂಡಾ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
More From GoodReturns

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications