ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮಧ್ಯಮ ಮಳೆಯಾಗುತ್ತಿದೆ (Rain Alert). ಅದರಲ್ಲೂ ಬೆಂಗಳೂರಿನಲ್ಲಿ ನವೆಂಬರ್ 5, 6 ರಂದು ರಾತ್ರಿ ಆದ್ರೆ ಸಾಕು ಮಧ್ಯಮದಲ್ಲಿ ವರುಣನ ಆಗಮನವಾಗುತ್ತದೆ. ಇದೀಗ ಇಂದೂ (ನ.07) ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗಿದ್ರೆ ಯಾವೆಲ್ಲಾ ಜಿಲ್ಲೆಗಳಿಗೆ ಇಂದು ಅಲರ್ಟ್ ಘೋಷಣೆಯಾಗಿದೆ ಅನ್ನೋದನ್ನ ಈ ಲೇಖನದಲ್ಲಿ ನೋಡೋಣ.

ಈ ವಾರವಿಡೀ ಭಾರತದಲ್ಲಿ ಮಿಶ್ರ ವಾತಾವರಣ ಕಂಡುಬಂದಿದೆ. ಅದರಲ್ಲೂ ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಳೆ ಮುಂದುವರೆಯಲಿದೆ ಮತ್ತು ಇತರ ರಾಜ್ಯಗಳಲ್ಲಿ ಮಳೆ ಸ್ವಲ್ಪ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಐಎಂಡಿ ಸೂಚನೆ ಪ್ರಕಾರ, ದಕ್ಷಿಣದ ಮೂರು ರಾಜ್ಯಗಳ ಜೊತೆಗೆ ಕರ್ನಾಟಕದ ಹಲವು ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆ, ಬಿರುಗಾಳಿ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರಲ್ಲೂ ರಾಜ್ಯದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆ ಜೊತೆಗೆ ಗುಡುಗು ಸಹ ಇರಲಿದೆ ಎಂದು ಹೇಳಲಾಗಿದೆ.
ಅಲ್ಲದೇ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮೈಸೂರು, ಶಿವಮೊಗ್ಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆ ಬೀಳಬಹುದು ಎನ್ನಲಾಗಿದೆ. ಅಲ್ಲದೇ ಈ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ದೇಶದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆ ಜೊತೆಗೆ ಹಿಮಪಾತದ ಎಚ್ಚರಿಕೆ ನೀಡಲಾಗಿದೆ. ಅದರಲ್ಲೂ ಉತ್ತರ ಭಾರತದ ಬಯಲು ಪ್ರದೇಶಗಳಲ್ಲಿ ಹಿಮಪಾತದ ಜೊತೆಗೆ ಚಳಿ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೇಶಾದ್ಯಂತ ಈಗಾಗಲೇ ಚಳಿ ಶುರುವಾಗಿದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದರೆ, ಇನ್ನು ಕೆಲವು ಕಡೆ ಹಿಮಪಾತದ ಎಚ್ಚರಿಕೆ ನೀಡಲಾಗಿದೆ.
ಅಲ್ಲದೇ ಇಂದು ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ, ದೆಹಲಿ-ಎನ್ಸಿಆರ್, ಬಿಹಾರ, ಪಂಜಾಬ್ ಮತ್ತು ಮಧ್ಯಪ್ರದೇಶದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಕಡೆ ಗುಡುಗು ಸಹಿತ ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಂತಹ ಪರ್ವತ ರಾಜ್ಯಗಳಲ್ಲಿ ಹಿಮಪಾತ ಮತ್ತು ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಭಾರತ ಮತ್ತು ಈಶಾನ್ಯದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಆದ್ದರಿಂದ ಎಲ್ಲಾದರೂ ಹೋಗುವ ಮುನ್ನ ಹವಾಮಾನ ಪರಿಸ್ಥಿತಿಯನ್ನು ಸರಿಯಾಗಿ ನೋಡಿಕೊಂಡು ಪ್ಲಾನ್ ಮಾಡಿದರೆ ಉತ್ತಮ. ಕೆಲವು ರಾಜ್ಯಗಳಲ್ಲಿ ಈಗಾಗಲೇ ಹಿಮಪಾತದ ಎಚ್ಚರಿಕೆಯನ್ನೂ ನೀಡಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Rain-Summer: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



Click it and Unblock the Notifications