ನವದೆಹಲಿ, ಮಾರ್ಚ್ 21: ಈ ವಾರ ಮತ್ತೊಮ್ಮೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಾರ್ಚ್ 27ರಿಂದ ಸಾಲು ಸಾಲು ರಜೆಗಳಿವೆ. ಹೀಗಾಗಿ ಮಾರ್ಚ್ 27 ಏಪ್ರಿಲ್ 4 ರ ಅವಧಿಯಲ್ಲಿ ಬ್ಯಾಂಕ್ ವ್ಯವಹಾರ ಕಷ್ಟ. ಈ ಅವಧಿಯಲ್ಲಿ ಕೇವಲ 2 ದಿನಗಳು ಮಾತ್ರ ಬ್ಯಾಂಕ್ ಕಾರ್ಯ ನಿರ್ವಹಿಸಲಿದೆ.
ಎಲ್ಲಾ ಭಾನುವಾರ, 2 ಮತ್ತು 4ನೇ ಶನಿವಾರ ಸರ್ಕಾರಿ ರಜೆ ಇರುತ್ತದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಬ್ಯಾಂಕ್ ರಜಾದಿನವಿರಲಿದೆ. ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟವು ಮಾರ್ಚ್ 15ರಿಂದ ಎರಡು ದಿನ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಈಗಾಗಲೇ ಆ ವಾರದಲ್ಲಿ ನಾಲ್ಕು ದಿನ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗಿದೆ.

ಮಾರ್ಚ್ ಕೊನೆವಾರದಲ್ಲಿಸಾಲು ಸಾಲು ರಜೆ:
ಬಿಹಾರದಲ್ಲಿ ಬಿಹಾರ ರಾಜ್ಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಾರ್ಚ್ 30ರಂದು ಬ್ಯಾಂಕುಗಳಿಗೆ ರಜೆ ಇರಲಿದೆ. ಮಾರ್ಚ್ 27 ನಾಲ್ಕನೇ ಶನಿವಾರ ಎಂದು ರಜೆ ಇರಲಿದೆ. ಮಾರ್ಚ್ 28 ಭಾನುವಾರದ ರಜೆ, ಮಾರ್ಚ್ 29, 30 ರಂದು ಹೋಳಿ ಹಬ್ಬದ ಅಂಗವಾಗಿ ದೇಶದೆಲ್ಲೆಡೆ ರಜೆ ಸಿಗಲಿದೆ. ಮಾರ್ಚ್ 31 ಆರ್ಥಿಕ ವರ್ಷದ ಕೊನೆ ದಿನದಂದು ಬ್ಯಾಂಕ್ ಜೊತೆಗೆ ಗ್ರಾಹಕರು ವ್ಯವಹರಿಸಲು ಆಸ್ಪದವಿರುವುದಿಲ್ಲ. ಏಪ್ರಿಲ್ 1 ರಂದು ಬ್ಯಾಂಕ್ ಅಕೌಂಟಿಂಗ್ ಕಾರ್ಯ ನಡೆಯಲಿದೆ, ಏಪ್ರಿಲ್ 2ರಂದು ಗುಡ್ ಫ್ರೈಡೇ ಅಂಗವಾಗಿ ರಜೆ ಘೋಷಿಸಲಾಗಿದೆ. ಏಪ್ರಿಲ್ 3ರಂದು ಬ್ಯಾಂಕ್ ಓಪನ್ ಇರಲಿದೆ. ಏಪ್ರಿಲ್ 4 ರಂದು ಭಾನುವಾರದ ರಜೆ ಸಿಗಲಿದೆ.
ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications