ಹೊಸೂರು ವಿಮಾನ ನಿಲ್ದಾಣದ ನಿರೀಕ್ಷೆಯಲ್ಲಿದ್ದೋರಿಗೆ ದೊಡ್ಡ ಕಹಿ ಸುದ್ದಿ ಸಿಕ್ಕಿದೆ...ತಮಿಳುನಾಡಿನ ಪ್ರಮುಖ ಕೈಗಾರಿಕಾ ನಗರವಾದ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸುವ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಕೈಗಾರಿಕೆಗಳು, ಐಟಿ ಕಂಪನಿಗಳು ಹಾಗೂ ವ್ಯಾಪಾರ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸೂರಿಗೆ ವಿಮಾನ ನಿಲ್ದಾಣ ಅಗತ್ಯವೆಂಬ ಅಭಿಪ್ರಾಯವನ್ನು ರಾಜ್ಯ ಸರ್ಕಾರವೂ ಹಲವಾರು ಬಾರಿ ವ್ಯಕ್ತಪಡಿಸಿದೆ. ಆದರೆ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ತಿರಸ್ಕರಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಡಿಎಂಕೆ ಸಂಸದ ಪಿ. ವಿಲ್ಸನ್ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಭಾನುವಾರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ, ಈ ತೀರ್ಮಾನವನ್ನು ತಕ್ಷಣವೇ ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಹೊಸೂರು ವಿಮಾನ ನಿಲ್ದಾಣಕ್ಕೆ ಸಂಪೂರ್ಣ ಅರ್ಹತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ವಿಲ್ಸನ್, ತಮಿಳುನಾಡಿನ ವಿರುದ್ಧ ತಾರತಮ್ಯ ಮಾಡಬಾರದು ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಿಂದ 150 ಕಿಲೋಮೀಟರ್ ಒಳಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸಲು ಅವಕಾಶ ಇಲ್ಲ ಎಂಬ ಕಾರಣವನ್ನು ಮುಂದಿಟ್ಟು ಹೊಸೂರು ಯೋಜನೆಯನ್ನು ತಿರಸ್ಕರಿಸಿರುವುದು ಯಾವುದೇ ನೈಜ ಆಧಾರದ ಮೇಲೆ ಇಲ್ಲ ಎಂದು ಅವರು ಹೇಳಿದ್ದಾರೆ.
ತಮ್ಮ ವಾದಕ್ಕೆ ಉದಾಹರಣೆ ನೀಡಿದ ವಿಲ್ಸನ್, ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 90 ಕಿಲೋಮೀಟರ್ ದೂರದಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದ್ದಾರೆ. ಇದೇ ರೀತಿ ಲಂಡನ್ ನಗರದಲ್ಲಿ ಹೀತ್ರೋ, ಗ್ಯಾಟ್ವಿಕ್, ಲುಟನ್ ಸೇರಿದಂತೆ ಆರು ವಿಮಾನ ನಿಲ್ದಾಣಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ನ್ಯೂಯಾರ್ಕ್ ನಗರವೂ ಜೆಎಫ್ಕೆ, ನ್ಯೂವಾರ್ಕ್ ಹಾಗೂ ಲಾಗಾರ್ಡಿಯಾ ಎಂಬ ಹಲವು ವಿಮಾನ ನಿಲ್ದಾಣಗಳೊಂದಿಗೆ ಅಭಿವೃದ್ಧಿ ಕಂಡಿದೆ ಎಂದು ಅವರು ನೆನಪಿಸಿದರು.
ಜಾಗತಿಕ ಮಟ್ಟದಲ್ಲಿ ನೋಡಿದರೆ, ದೊಡ್ಡ ನಗರಗಳ ಸುತ್ತಲೂ ಒಂದಕ್ಕಿಂತ ಹೆಚ್ಚು ವಿಮಾನ ನಿಲ್ದಾಣಗಳನ್ನು ಅಪಾಯ ಎಂದು ನೋಡಲಾಗುವುದಿಲ್ಲ. ಅವುಗಳನ್ನು ಅಗತ್ಯ ಮೂಲಸೌಕರ್ಯವೆಂದು ಪರಿಗಣಿಸಲಾಗುತ್ತದೆ ಎಂದು ವಿಲ್ಸನ್ ಅಭಿಪ್ರಾಯಪಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ಹೊಸೂರು ವಿಮಾನ ನಿಲ್ದಾಣವನ್ನು ನಿರಾಕರಿಸುವುದು ನೀತಿ ವಿಚಾರವಲ್ಲ, ಬದಲಾಗಿ ಪೂರ್ವಾಗ್ರಹ ಮತ್ತು ಅಭಿವೃದ್ಧಿ ಆದ್ಯತೆಗಳಲ್ಲಿನ ಅಸಮತೋಲನವನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.
ವಿಮಾನಯಾನ ಕ್ಷೇತ್ರದಲ್ಲಿ ತಮಿಳುನಾಡನ್ನು ನಿರಂತರವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂಬ ಅಸಮಾಧಾನವನ್ನು ವ್ಯಕ್ತಪಡಿಸಿದ ಪಿ. ವಿಲ್ಸನ್, ಕೇಂದ್ರ ಸರ್ಕಾರ ಈ ನಿಲುವನ್ನು ಬದಲಾಯಿಸಿ ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಹೊಸೂರು ವಿಮಾನ ನಿಲ್ದಾಣ ಯೋಜನೆಗೆ ಅನುಮೋದನೆ ನೀಡುವುದು ದಕ್ಷಿಣ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.
More From GoodReturns

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Rapido Ownly: ರ್ಯಾಪಿಡೋದಿಂದ ಹೊಸ ಫುಡ್ ಡೆಲಿವರಿ ಆಪ್ ಲಾಂಚ್! ಏನಿದರ ವಿಶೇಷತೆ?

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Hebbal Tunnel Project: ಹೆಬ್ಬಾಳ 6 ಪಥದ ಸುರಂಗ ರಸ್ತೆಗೆ ಟೆಂಡರ್... 4 ಪ್ರಮುಖ ಕಂಪನಿಗಳಲ್ಲಿ ಬಿಡ್ಡಿಂಗ್ ಸ್ಪರ್ಧೆ!

Bengaluru Airport: ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಭೀತಿ! ಹಲವು ವಿಮಾನ ಹಾರಾಟ ರದ್ದು

Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Suburban Railway: ಬೆಂಗಳೂರು ಉಪನಗರ ರೈಲು 40,000 ಬಸ್ಗಳಿಗೆ ಸಮ…ದಿನಕ್ಕೆ 19 ಲಕ್ಷ ಪ್ರಯಾಣಿಕರಿಗೆ ಸುಲಭ!



Click it and Unblock the Notifications