ಕೊರೊನಾವೈರಸ್ ಹಾವಳಿಯಿಂದ ಕೇವಲ ಕೇಂದ್ರ ಸರ್ಕಾರವಷ್ಟೇ ಅಲ್ಲದೇ ರಾಜ್ಯ ಸರ್ಕಾರಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.
ಎದುರಾದ ಆರ್ಥಿಕ ಕುಸಿತವನ್ನು ತಡೆಯಲು ರಾಜ್ಯ ಸರ್ಕಾರಗಳಿಗೆ ಸಾಲವೇ ಪ್ರಮುಖ ಆಸರೆಯಾಗಿದೆ. ದೇಶದ ಎಲ್ಲ ರಾಜ್ಯಗಳು ಕೊರೊನಾದಿಂದ ಎದುರಾದ ಸಂಕಷ್ಟ ನಿಭಾಯಿಸಲು ಈ ಕೊರೊನಾ ಅವಧಿಯಲ್ಲಿ ಬರೋಬ್ಬರಿ 1.93 ಲಕ್ಷ ಕೋಟಿ ರುಪಾಯಿಯ ಸಾಲವನ್ನು ವಿವಿಧ ಮೂಲಗಳಿಂದ ಎತ್ತಿವೆ.
ಇದು ಕಳೆದ ವರ್ಷ ಇದೇ ಅವಧಿಯಲ್ಲಿ ಪಡೆದುಕೊಂಡಿದ್ದ ಸಾಲಕ್ಕಿಂತ ಶೇ 76 ರಷ್ಟು ಹೆಚ್ಚು ಎಂದು ಕೇರ್ ರೇಟಿಂಗ್ ಏಜೆನ್ಸಿ ಬಿಡುಗಡೆ ಮಾಡಿದ ವರದಿಗಳು ಹೇಳಿವೆ.
52.6 ಲಕ್ಷ ಕೋಟಿ ರುಪಾಯಿ ಸಾಲವನ್ನು ಎತ್ತಿವೆ
ರಾಜ್ಯಗಳು ಒಟ್ಟಾರೆಯಗಾಗಿ ಈ ವರ್ಷ 52.6 ಲಕ್ಷ ಕೋಟಿ ರುಪಾಯಿ ಸಾಲವನ್ನು ಎತ್ತಿವೆ. ಇದರಲ್ಲಿ ಶೇ 72 ರಷ್ಟು ಪಾಲು ದೊಡ್ಡ ಹತ್ತು ರಾಜ್ಯಗಳಿಗೆ ಸೇರುತ್ತದೆ. ಈ ಪೈಕಿ 6 ಲಕ್ಷ ಕೋಟಿ ರುಪಾಯಿ ಸಾಲ ಎತ್ತುವ ಮೂಲಕ ಉತ್ತರ ಪ್ರದೇಶ ಮೊದಲನೇ ಸ್ಥಾನದಲ್ಲಿದೆ. ನಂತರ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ಕರ್ನಾಟಕ ಸೇರಿವೆ.
ಸಾಲದ ಮಿತಿಯೊಳಗೆ ಸಾಲ
ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಹಾಗೂ ಕರ್ನಾಟಕ 14 ನೇ ಹಣಕಾಸು ಆಯೋಗ ಸೂಚಿಸಿದ್ದ ಸಾಲದ ಮಿತಿಯೊಳಗೆ ಸಾಲ ಮಾಡಿವೆ. ಅಂದರೆ ಜಿಡಿಪಿಯ ಶೇ 25 ರಷ್ಟು ಕಡಿಮೆ ಸಾಲ ಹೊಂದಿವೆ.
ವಿತ್ತೀಯ ಕೊರತೆ ಪ್ರಮಾಣವನ್ನು ಶೇ 3 ರಿಂದ ಶೇ 5 ಕ್ಕೆ ಏರಿಕೆ
ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಸಂಪನ್ಮೂಲ ಸಂಗ್ರಹಕ್ಕೆ ಅನುಕೂಲ ಆಗಲು ವಿತ್ತೀಯ ಕೊರತೆ ಪ್ರಮಾಣವನ್ನು ಶೇ 3 ರಿಂದ ಶೇ 5 ಕ್ಕೆ ಏರಿಕೆ ಮಾಡಿದೆ. ಜೊತೆಗೆ ಸಾಲ ಪಡೆಯಲು ಕೆಲ ನಿಯಮಗಳನ್ನು ಸಡಿಲಿಕೆ ಮಾಡಿತ್ತು. ಹೀಗಾಗಿ ಕೊರೊನಾ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಾಗಿದೆ.
ವಿತ್ತೀಯ ಕೊರತೆ ಶೇ 7.6 ರಷ್ಟು ಏರಿಕೆಯಾಗಲಿದೆ
2020-21 ನೇ ಅವಧಿಯಲ್ಲಿ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ 7.6 ರಷ್ಟು ಏರಿಕೆಯಾಗಲಿದೆ. ಇದು ಬಜೆಟ್ ಅಂದಾಜಿಗಿಂತ ಎರಡು ಪಟ್ಟು ಹೆಚ್ಚು ಎಂದು ರೇಟಿಂಗ್ ಏಜೆನ್ಸಿ ಹೇಳಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications