ಬೆಂಗಳೂರು, ಏಪ್ರಿಲ್ 25: ಭಾರತದ ಬ್ಯಾಂಕಿಂಗ್ ವಲಯ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತಿದೆ. ಹೀಗಾಗಿಯೇ ಜಾಗತಿಕ ಮಟ್ಟದಲ್ಲಿ ಕೂಡ ಭಾರತದ ಬ್ಯಾಂಕಿಂಗ್ ವಲಯಕ್ಕೆ ದೊಡ್ಡ ಹೆಸರು ಕೂಡ ಇದೆ. ಅದರಲ್ಲೂ ಭಾರತದ ಆರ್ಥಿಕ ಶಿಸ್ತು ಪಾಶ್ಚಿಮಾತ್ಯ ದೇಶಗಳಿಗೆ ಕೂಡ ಮಾದರಿ ಆಗುತ್ತಿದ್ದು, ಭಾರತದಲ್ಲಿ ಖಾಸಗಿ ವಲಯದ ಬ್ಯಾಂಕ್ಗಳು ದೊಡ್ಡ ಮಟ್ಟದಲ್ಲಿ ಲಾಭ ಮಾಡುತ್ತಿವೆ. ಈ ರೀತಿ ಆಕ್ಸಿಸ್ ಬ್ಯಾಂಕ್ ಕೂಡ ಭಾರಿ ಲಾಭ ಗಳಿಸಿದೆ.
ಖಾಸಗಿ ವಲಯದ ಪ್ರಮುಖ ಬ್ಯಾಂಕ್ಗಳ ಪೈಕಿ ಆಕ್ಸಿಸ್ ಬ್ಯಾಂಕ್ ಕೂಡ ಒಂದಾಗಿದೆ. ಹೀಗೆ ಭಾರತದ ಆರ್ಥಿಕ ವಲಯದಲ್ಲಿ ದೊಡ್ಡ ಪ್ರಮಾಣದ ಪಾಲನ್ನು ಖಾಸಗಿ ಬ್ಯಾಂಕ್ಗಳು ಈ ಮೂಲಕ ಪಡೆದಿವೆ. ಇದೀಗ ಆಕ್ಸಿಸ್ ಬ್ಯಾಂಕ್ 2023 & 24ನೇ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಭರ್ಜರಿಯಾಗಿ ಲಾಭ ಗಳಿಸಿದೆ. ಇದೀಗ ಒಟ್ಟು 7,129 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸುವ ಮೂಲಕ ದಾಖಲೆ ಬರೆದಿದೆ ಆಕ್ಸಿಸ್ ಬ್ಯಾಂಕ್. ಮತ್ತೊಂದು ವಿಶೇಷ ಸಂಗತಿ ಏನು ಎಂದರೆ, ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಒಟ್ಟು 5,728 ಕೋಟಿ ಲಾಭ ಗಳಿಸಿತ್ತು ಆಕ್ಸಿಸ್ ಬ್ಯಾಂಕ್. ಈ ಬಾರಿ ಲಾಭ ಹೆಚ್ಚಾಗಿದೆ.

ಲಾಭದ ಜೊತೆ ವರಮಾನ ಏರಿಕೆ!
ಆಕ್ಸಿಸ್ ಬ್ಯಾಂಕ್ ಲಾಭದಲ್ಲಿ ಮಾತ್ರವಲ್ಲ ಇದೀಗ ವರಮಾನ ಎಂದರೆ ಆದಾಯದಲ್ಲಿ ಕೂಡ ದೊಡ್ಡ ಪ್ರಮಾಣದ ಏರಿಕೆ ಕಂಡು ಬಂದಿದೆ. ಇದೀಗ ಆಕ್ಸಿಸ್ ಬ್ಯಾಂಕ್ ವರಮಾನ 28,758 ಕೋಟಿ ರೂಪಾಯಿಂದ 35,990 ಕೋಟಿ ರೂಪಾಯಿಗೆ ಏರಿಕೆ ಆಗಿದೆ. ಮತ್ತೊಂದು ಕಡೆಯಲ್ಲಿ ಆಕ್ಸಿಸ್ ಬ್ಯಾಂಕ್ ಬಡ್ಡಿ ವರಮಾನ ಶೇ. 11 ರಷ್ಟು ಹೆಚ್ಚಳ ಆಗಿ, 13,089 ಕೋಟಿ ರೂಪಾಯಿಗೆ ಮುಟ್ಟಿದೆ. 2023 & 24ನೇ ಪೂರ್ಣ ಆರ್ಥಿಕ ವರ್ಷದಲ್ಲಿ 24,861 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ ಆಕ್ಸಿಸ್ ಬ್ಯಾಂಕ್. ಹಿಂದಿನ ಅವಧಿಗೆ ಹೋಲಿಕೆ ಮಾಡಿದರೆ, ಲಾಭದಲ್ಲಿಯೂ ಶೇಕಡಾ 160 ರಷ್ಟು ಹೆಚ್ಚಳ ಆಗಿದೆ ಎಂದು ಮಾಹಿತಿ ನೀಡಲಾಗಿದೆ.
12.40 ಲಕ್ಷ ಕ್ರೆಡಿಟ್ ಕಾರ್ಡ್ ವಿತರಣೆ
ಇಷ್ಟೆಲ್ಲಾ ಬೆಳವಣಿಗೆ ನಡುವೆ, ಆಕ್ಸಿಸ್ ಬ್ಯಾಂಕ್ ವಸೂಲಾಗದ ಸಾಲದ ಪ್ರಮಾಣ ಎಂದರೆ, ಎನ್ಪಿಎ ಪ್ರಮಾಣ ಶೇಕಡಾ 2.02 ರಿಂದ ಶೇಕಡಾ 1.43ಕ್ಕೆ ಇಳಿಕೆ ಕಂಡಿದೆ ಎಂಬುದು ಈಗ ಗಮನಾರ್ಹ ವಿಚಾರವಾಗಿದೆ. ಹಾಗೆಯೇ ಮಾರ್ಚ್ ತ್ರೈಮಾಸಿಕದಲ್ಲಿ ಹೊಸದಾಗಿ 12.40 ಲಕ್ಷ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications