ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ವಿಡಿಯೋಕಾನ್ ಸಿಇಒ, ಚೇರ್ಮನ್ ವೇಣುಗೋಪಲ್ ದೂತ್ರನ್ನು ಕೇಂದ್ರಿಯಾ ತನಿಖಾ ದಳ (ಸಿಬಿಐ) ಬಂಧನ ಮಾಡಿದೆ. ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೋಚರ್ ಹಾಗೂ ಆಕೆಯ ಪತಿ ದೀಪಕ್ ಕೋಚರ್ರನ್ನು ಸಿಬಿಐ ಬಂಧನ ಮಾಡಿದ ಎರಡು ದಿನಗಳ ನಂತರ ಸಿಬಿಐ ಈಗ ವೇಣುಗೋಪಲ್ ದೂತ್ರನ್ನು ಬಂಧಿಸಿದೆ.
ಚಂದಾ ಕೋಚರ್ ಐಸಿಐಸಿಐ ಬ್ಯಾಂಕ್ನಲ್ಲಿ ಸಿಇಒ ಆಗಿದ್ದ ಸಂದರ್ಭದಲ್ಲಿ ಸುಮಾರು 3,000 ಕೋಟಿ ರೂಪಾಯಿಯ ಸಾಲ ವಂಚನೆ ಪ್ರಕರಣ ನಡೆದಿದೆ ಎಂಬ ಆರೋಪದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇದಕ್ಕೆ ಸಂಬಂಧಿಸಿ ಕೋಚರ್ ದಂಪತಿಯ ವಿಚಾರಣೆ ನಡೆಸಿ, ವಿಚಾರಣೆಗೆ ಸಹಕಾರ ನೀಡದ ಕಾರಣದಿಂದಾಗಿ ಬಂಧನ ಮಾಡಲಾಗಿದೆ.
ಚಂದಾ ಕೋಚರ್, ಆಕೆಯ ಪತಿ ದೀಪಕ್ ಕೋಚರ್ ಹಾಗೂ ವಿಡಿಯೋಕಾನ್ ಗ್ರೂಪ್ ಪ್ರೊಮೋಟರ್ ವೇಣುಗೋಪಲ್ ದೂತ್ ಭ್ರಷ್ಟಾಚಾರ ಮಾಡಿದ್ದಾರೆ ಹಾಗೂ ಕ್ರಿಮಿನಲ್ ಪಿತೂರಿ ಮಾಡಿದ್ದಾರೆ ಎಂಬ ಆರೋಪವಿದೆ. ಸಾಲ ವಂಚನೆ ಪ್ರಕರಣದ ಎಫ್ಐಆರ್ನಲ್ಲಿ ನುಪವರ್ ರಿನಿವೇಬಲ್ಸ್ (ಎನ್ಆರ್ಎಲ್), ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್ನ್ಯಾಷನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ಹೆಸರು ಕೂಡಾ ಉಲ್ಲೇಖವಾಗಿದೆ.

ದೀಪಕ್ ಕೋಚರ್ನ ನುಪವರ್ ರಿನಿವೇಬಲ್ಸ್ ಮೇಲೆ ವೇಣುಗೋಪಲ್ ದೂತ್ 64 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಸಿಬಿಐ ಹೇಳಿದೆ. ವಿಡಿಯೋಕಾನ್ ಗ್ರೂಪ್ ಪ್ರೊಮೋಟರ್ ವೇಣುಗೋಪಲ್ ದೂತ್ ಈ ಹೂಡಿಕೆಯನ್ನು ಸುಪ್ರೀಂ ಎನರ್ಜಿ ಪ್ರೈವೇಟ್ ಲಿಮಿಡೆಟ್ (ಎಸ್ಇಪಿಎಲ್) ಮೂಲಕ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ಪ್ರಕಾರ ಈ ಮೊತ್ತವನ್ನು ದೀಪಕ್ ಕೋಚರ್ ನಿರ್ವಹಣೆ ಮಾಡುವ ಪಿನ್ನಾಕಲ್ ಎನರ್ಜಿ ಟ್ರಸ್ಟ್ಗೆ ವರ್ಗಾವಣೆ ಮಾಡಲಾಗಿದೆ. 2010ರಿಂದ 2012ರ ನಡುವೆ ಈ ಹಣ ವರ್ಗಾವಣೆಗಳು ನಡೆದಿದೆ.
ಸಿಬಿಐ ಪ್ರಕಾರ ವಿಡಿಯೋಕಾನ್ ಗ್ರೂಪ್ ಸಂಸ್ಥೆಗೆ 3,250 ಕೋಟಿ ರೂಪಾಯಿ ಸಾಲ ಮಂಜೂರು ಆಗಿದೆ. ಆದರೆ ಈ ಸಾಲವನ್ನು ಮಂಜೂರು ಮಾಡುವಾಗ ಆರ್ಬಿಐ ನಿಯಮ ಹಾಗೂ ಐಸಿಐಸಿಐ ಬ್ಯಾಂಕ್ಸ್ ಕ್ರೆಡಿಟ್ ಪಾಲಿಸಿಯನ್ನು ಉಲ್ಲಂಘನೆ ಮಾಡಲಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications