ಐ- ಮಾನೆಟರಿ ಅಡ್ವೈಸರಿ (ಐಎಂಎ) ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಭಾನುವಾರ ಸಿಬಿಐನಿಂದ ಬಂಧಿಸಲಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ. ಭಾನುವಾರ ಬೆಳಗ್ಗೆ ಸಂಸ್ಥೆಯ ಕಚೇರಿಗೆ ರೋಷನ್ ಬೇಗ್ ಅವರನ್ನು ಕರೆಸಿಕೊಳ್ಳಲಾಗಿತ್ತು. "ಪುರಾವೆಗಳು ಆಧರಿಸಿ ಅವರನ್ನು ಬಂಧಿಸಲಾಗಿದೆ," ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿವಾಜಿನಗರದ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕ ಮೂಲದ ಐಎಂಎ ಹಾಗೂ ಅದರ ಸಮೂಹ ಸಂಸ್ಥೆಗಳ ಮೇಲ್ ಲಕ್ಷಾಂತರ ಮಂದಿಗೆ ವಂಚನೆ ಮಾಡಿದ ಆರೋಪ ಇದೆ.
ಐಎಂಎ ಜ್ಯುವೆಲ್ಲರಿ ಹಗರಣ 2019ರ ಜೂನ್ ನಲ್ಲಿ ಬಯಲಿಗೆ ಬಿತ್ತು. ಆ ಸಂದರ್ಭದಲ್ಲಿ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿತ್ತು. ಹೂಡಿಕೆದಾರರ ನೂರಾರು ಕೋಟಿ ರುಪಾಯಿ ವಂಚನೆಯಾದ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿ, ಐಎಂಎ ಜ್ಯುವೆಲ್ಲರಿ ಮಾಲೀಕ ಮೊಹ್ಮದ್ ಮನ್ಸೂರ್ ಖಾನ್ ನನ್ನು ಬಂಧಿಸಲಾಯಿತು. ಆತ ತನಗೆ ಕೆಲವು ರಾಜಕಾರಣಿಗಳು ಮತ್ತು ಅಧಿಕಾರಿಗಳು ವಂಚನೆ ಮಾಡಿದ್ದಾರೆ ಹಾಗೂ ಅವರಿಗೆ ಲಂಚ ನೀಡಿದ್ದಾಗಿ ಹೇಳಿದ್ದ.

ಕರ್ನಾಟಕ ಹೈಕೋರ್ಟ್ ಮನ್ಸೂರ್ ಅಲಿ ಖಾನ್ಗೆ ಬುಧವಾರ (ನವೆಂಬರ್ 18, 2020)ಷರತ್ತು ಬದ್ಧ ಜಾಮೀನು ನೀಡಿದೆ. ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಕ್ಕಿದ್ದು, ಬಿಡುಗಡೆ ಭಾಗ್ಯವಿಲ್ಲ.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?



Click it and Unblock the Notifications