ಭಾರತದ ಆರ್ಥಿಕತೆಯು ಗಂಭೀರ ಪರಿಸ್ಥಿತಿಯನ್ನು ತಲುಪಿದ್ದು, ಸರ್ಕಾರ ತುರ್ತಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್) ಸಲಹೆ ನೀಡಿದೆ.
ವೆಚ್ಚ ಮತ್ತು ಹೂಡಿಕೆ ಕುಸಿತ, ತೆರಿಗೆ ಆದಾಯದಲ್ಲಿ ಇಳಿಕೆ ಇತರೆ ಎಲ್ಲಾ ಅಂಶಗಳು ವಿಶ್ವದಲ್ಲಿ ವೇಗವಾಗಿ ಓಡುತ್ತಿರುವ ಭಾರತದ ಆರ್ಥಿಕತೆಯ ಓಟಕ್ಕೆ ತಡೆಯೊಡ್ಡಿವೆ ಎಂದು ಐಎಂಎಫ್ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತದ ಆರ್ಥಿಕ ನೀತಿಯಲ್ಲಿ ವ್ಯಾಪಕ ವಿಸ್ತರಣೆಯಾಗಿದ್ದು, ಇದು ಲಕ್ಷಾಂತರ ಜನರನ್ನು ಬಡತನದ ರೇಖೆಗಿಂತ ಮೇಲುತ್ತುವಲ್ಲಿ ಯಶಸ್ವಿಯಾಗಿದೆ. ಆದರೆ 2019ರ ಮೊದಲ ಆರು ತಿಂಗಳಲ್ಲಿ ವಿವಿಧ ಕಾರಣಗಳಿಂದ ಭಾರತದ ಆರ್ಥಿಕತೆ ಕುಸಿದಿದೆ ಎಂದು ವರದಿಯಲ್ಲಿ ತನ್ನ ಅಭಿಪ್ರಾಯ ಪ್ರಕಟಿಸಿದೆ.
''ಭಾರತದ ಅರ್ಥವ್ಯವಸ್ಥೆಯು ಹಿನ್ನಡೆ ಅನುಭವಿಸುತ್ತಿದ್ದು, ಆರ್ಥಿಕ ಕ್ಷೇತ್ರಗಳಲ್ಲಿನ ಸಮಸ್ಯೆಗಳು ಇದಕ್ಕೆ ಕಾರಣ. ಈಗಿರುವ ಆರ್ಥಿಕ ಹಿಂಜರಿತ ಹಿಮ್ಮೆಟಿಸಲು ಮತ್ತು ಭಾರತವನ್ನು ಆರ್ಥಿಕ ಅಭಿವೃದ್ಧಿಯತ್ತ ಕೊಂಡೊಯ್ಯಲು ತುರ್ತು ನೀತಿ, ಕ್ರಮಗಳು ಅಗತ್ಯವಿದೆ'' ಎಂದು ಐಎಂಎಫ್ನ ಏಷ್ಯಾ ಫೆಸಿಫಿಕ್ ವಿಭಾಗದ ರನಿಲ್ ಸಲ್ಗಾಡೊ ಹೇಳಿದ್ದಾರೆ.
ಆರ್ಥಿಕ ಬೆಳವಣಿಗೆ ಸಲುವಾಗಿ ಜನರ ಖರೀದಿ ಸಾಮರ್ಥ್ಯ ಹೆಚ್ಚಿಸುವಂತೆ ಮಾಡುವ ವಿಷಯದಲ್ಲೂ ಭಾರತ ಸರ್ಕಾರದ ಮುಂದೆ ಸೀಮಿತ ಆಯ್ಕೆಗಳಿವೆ ಎಂದು ಐಎಂಎಫ್ ಎಚ್ಚರಿಸಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications