ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಜುಲೈ 26ರಂದು ಮತ್ತೆ ಜಾಗತಿಕ ಬೆಳವಣಿಗೆ ದರವನ್ನು ತಗ್ಗಿಸಿದೆ. ಹೆಚ್ಚು ಹಣದುಬ್ಬರ ಇರುವ ಕಾರಣದಿಂದಾಗಿ ಹಾಗೂ ಉಕ್ರೇನ್ ಯುದ್ಧದ ಮುಂದುವರಿದಿರುವ ಕಾರಣದಿಂದಾಗಿ ಜಾಗತಿಕ ಬೆಳವಣಿಗೆ ದರವನ್ನು ತಗ್ಗಿಸಲಾಗಿದೆ ಎಂದು ಐಎಂಎಫ್ ಹೇಳಿದೆ.
ಜಾಗತಿಕ ನೈಜ ಜಿಡಿಪಿ ಬೆಳವಣಿಗೆಯು ಏಪ್ರಿಲ್ನಲ್ಲಿ ನೀಡಲಾದ ಶೇಕಡ 3.6ರ ಮುನ್ಸೂಚನೆಯಿಂದ 2022ರಲ್ಲಿ ಶೇಕಡ 3.2ಕ್ಕೆ ತಗ್ಗಿದೆ ಎಂದು ಐಎಂಎಫ್ ವಿಶ್ವ ಆರ್ಥಿಕ ದೃಷ್ಟಿಕೋನದ ಅಪ್ಡೇಟ್ ಸಂದರ್ಭದಲ್ಲಿ ತಿಳಿಸಿದೆ. ಚೀನಾ ಮತ್ತು ರಷ್ಯಾದಲ್ಲಿನ ಆರ್ಥಿಕ ಕುಸಿತದ ಕಾರಣದಿಂದಾಗಿ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಕುಸಿದಿದೆ ಎಂದು ಸೇರ್ಪಡೆ ಮಾಡಿದೆ.
ಇನ್ನು ವಿತ್ತೀಯ ನೀತಿಯ ಪರಿಣಾಮವನ್ನು ಕೂಡಾ ಐಎಂಎಫ್ ಉಲ್ಲೇಖ ಮಾಡಿದೆ. 2023 ರ ಬೆಳವಣಿಗೆಯ ಮುನ್ಸೂಚನೆಯನ್ನು ಏಪ್ರಿಲ್ ಅಂದಾಜು ಶೇಕಡ 3.6ರಿಂದ ಶೇಕಡ 2.9ಕ್ಕೆ ಕಡಿತಗೊಳಿಸಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ 2020 ರಲ್ಲಿ ಶೇಕಡ 3.1ಕ್ಕೆ ಇಳಿದಿದ್ದ ಜಾಗತಿಕ ಉತ್ಪಾದನಾ ದರವು ಬಳಿಕ 2021 ರಲ್ಲಿ ಶೇಕಡ 6.1ಕ್ಕೆ ಏರಿತ್ತು.

"ಏಪ್ರಿಲ್ನಿಂದ ಬೆಳವಣಿಗೆಯು ಕತ್ತಲೆಯಲ್ಲಿ ಆವರಿಸಿದೆ. ಕಳೆದ ಎರಡು ವರ್ಷಗಳ ನಂತರ ಜಗತ್ತು ಶೀಘ್ರದಲ್ಲೇ ಜಾಗತಿಕ ಆರ್ಥಿಕ ಹಿಂಜರಿತಕ್ಕೆ ತುತ್ತಾಗುವ ಸಾಧ್ಯತೆ ಇದೆ," ಎಂದು ಐಎಂಎಫ್ನ ಮುಖ್ಯ ಅರ್ಥಶಾಸ್ತ್ರಜ್ಞರಾದ ಪಿಯರೆ-ಒಲಿವಿಯರ್ ಗೌರಿಂಚಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ಭಾರತಕ್ಕೆ 9.5 ಪ್ರತಿಶತ ಜಿಡಿಪಿ ಬೆಳವಣಿಗೆಯನ್ನು ಯೋಜಿಸಿದ್ದ ವಾಷಿಂಗ್ಟನ್ ಮೂಲದ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯು ಮುಂದಿನ ಹಣಕಾಸು ವರ್ಷ 2023 (ಏಪ್ರಿಲ್ 2022 ರಿಂದ ಮಾರ್ಚ್ 2023) ಕ್ಕೆ ಈ ಹಿಂದೆ ಮುನ್ಸೂಚನೆ ನೀಡಿದೆ. ಮುಂದಿನ ಹಣಕಾಸು ವರ್ಷ 2023ರಲ್ಲಿ ಶೇಕಡ 7.1ರಲ್ಲಿ ಇರಲಿದೆ ಎಂದು ಸೂಚನೆ ನೀಡಿದೆ.
ಉಕ್ರೇನ್ ರಷ್ಯಾ ಯುದ್ಧವನ್ನು ಉಲ್ಲೇಖಿಸಿದ್ದ ಎಎಂಎಫ್
ಇತ್ತೀಚಿನ ತನ್ನ ಮುನ್ಸೂಚನೆಯಲ್ಲಿ ಐಎಂಎಫ್ ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧದ ಪರಿಣಾಮವನ್ನು ಉಲ್ಲೇಖ ಮಾಡಿತ್ತು. ಶಕ್ತಿ ಮತ್ತು ಆಹಾರದ ಬೆಲೆಗಳು ಹೆಚ್ಚಾಗುತ್ತವೆ. ಹಣದುಬ್ಬರ ಉಂಟಾಗುತ್ತದೆ. ಇದರಿಂದಾಗಿ ವಿತ್ತೀಯ ನೀತಿ ಬಿಗಿಯಾಗುತ್ತದೆ ಎಂದು ಐಎಂಎಫ್ ಹೇಳಿತ್ತು. ಜಾಗತಿಕ ಬೆಳವಣಿಗೆಯು 1970 ರಿಂದ ಕೇವಲ ಐದು ಬಾರಿ ಶೇಕಡ 2ಕ್ಕಿಂತ ಕಡಿಮೆಯಾಗಿದೆ. ಕೋವಿಡ್ ಸಂದರ್ಭದಲ್ಲಿಯೂ ಜಾಗತಿಕ ಬೆಳವಣಿಗೆ ಕುಸಿದಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications