ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮಾರ್ಚ್ 31 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯ ಮುನ್ಸೂಚನೆಯು ಶೇಕಡಾ 9 ಕ್ಕೆ ಕಡಿತಗೊಳಿಸಿದೆ. ಅಂದರೆ ಭಾರತದ ಜಿಡಿಪಿ ಶೇ.9ಕ್ಕೆ ಕುಸಿತವಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇದು ಕೊರೊನಾವೈರಸ್ನ ಹೊಸ ರೂಪಾಂತರದ ಹರಡುವಿಕೆಯ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಲವಾರು ಏಜೆನ್ಸಿಗಳಲ್ಲಿ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕೂಡಾ ಒಂದಾಗಿದೆ.
ಮಂಗಳವಾರದ ವರ್ಲ್ಡ್ ಎಕನಾಮಿಕ್ ಔಟ್ಲುಕ್ನ ಇತ್ತೀಚಿನ ಅಪ್ಡೇಟ್ ಪ್ರಕಾರ, ಕಳೆದ ವರ್ಷ ಅಕ್ಟೋಬರ್ನಲ್ಲಿ ಭಾರತಕ್ಕೆ 9.5 ಪ್ರತಿಶತ ಜಿಡಿಪಿ ಬೆಳವಣಿಗೆಯನ್ನು ಯೋಜಿಸಿದ್ದ ವಾಷಿಂಗ್ಟನ್ ಮೂಲದ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯು ಮುಂದಿನ ಹಣಕಾಸು ವರ್ಷ 2023 (ಏಪ್ರಿಲ್ 2022 ರಿಂದ ಮಾರ್ಚ್ 2023) ಕ್ಕೆ ಮುನ್ಸೂಚನೆ ನೀಡಿದೆ. ಮುಂದಿನ ಹಣಕಾಸು ವರ್ಷ 2023ರಲ್ಲಿ ಶೇಕಡ 7.1ರಲ್ಲಿ ಇರಲಿದೆ ಎಂದು ಸೂಚನೆ ನೀಡಿದೆ.
2020-21 ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.3 ರಷ್ಟು ಕುಸಿದಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುನ್ಸೂಚನೆಯ ಪ್ರಕಾಡ 9.2 ಶೇಕಡಾಕ್ಕಿಂತ ಕಡಿಮೆ ಜಿಡಿಪಿ ಆಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಅಂದಾಜಿಸಿರುವ ಪ್ರಕಾರ ಭಾರತದ ಜಿಡಿಪಿ ಶೇಕಡ 9.5 ಆಗಿರಲಿದೆ.

ಇನ್ನು ಕೆಲವೇ ದಿನದಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಲಿದೆ. ಈ ನಡುವೆ ಐಎಂಎಫ್ ಮುನ್ಸೂಚನೆ ಬಂದಿದೆ. ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ವಾರ್ಷಿಕ ಬಜೆಟ್ ಮಂಡಿಸಲಿದ್ದಾರೆ. ಭಾರತದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2022 ರಂದು ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಅನ್ನು ಘೋಷಿಸಲಿದ್ದಾರೆ.
ಜಾಗತಿಕ ಬೆಳವಣಿಗೆಯು ಇಳಿಕೆ ನಿರೀಕ್ಷೆ
ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುನ್ಸೂಚನೆ ಪ್ರಕಾರ 2023 ರ ಭಾರತದ ಭವಿಷ್ಯದಲ್ಲಿ ಸಾಲದ ಬೆಳವಣಿಗೆಯಲ್ಲಿ ಸುಧಾರಣೆ ಕಾಣಲಿದೆ. ಬಳಿಕ ಹೂಡಿಕೆ ಮತ್ತು ಬಳಕೆ, ಆರ್ಥಿಕ ವಲಯದಲ್ಲಿ ನಿರೀಕ್ಷಿತ ಉತ್ತಮ ಬೆಳವಣಿಗೆ ಉಂಟಾಗಲಿದೆ. ಜಾಗತಿಕ ಬೆಳವಣಿಗೆಯು 2021 ರಲ್ಲಿ 5.9 ರಿಂದ 2022 ರಲ್ಲಿ ಶೇಕಡಾ 4.4 ಕ್ಕೆ ಇಳಿಯುವ ನಿರೀಕ್ಷೆಯಿದೆ ಎಂದು ಐಎಂಎಫ್ ಹೇಳಿದೆ. ಎರಡು ದೊಡ್ಡ ಆರ್ಥಿಕತೆಗಳಾದ ಯುಎಸ್ ಹಾಗೂ ಚೀನಾದಲ್ಲಿಯೂ ಆರ್ಥಿಕ ಕುಸಿತವು ಕಂಡು ಬರುವ ಸಾಧ್ಯತೆ ಬಗ್ಗೆಯೂ ಮುನ್ಸೂಚನೆ ನೀಡಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications