ಬುಧವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ರಾಯಣ್ಣನ ಕೆಚ್ಚೆದೆಯ ಬದುಕನ್ನು ಬಿಂಬಿಸುವ ಆಕರ್ಷಕ ಶಿಲ್ಪವನ್ನು ಅನಾವರಣಗೊಳಿಸಿದರು. ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ವಿಶಾಲವಾದ ಪ್ರದೇಶದಲ್ಲಿ ಈ ಶಿಲ್ಪವನ್ನು ನಿರ್ಮಿಸಲಾಗಿದೆ.
ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವದ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾನಾಪುರ ತಾಲೂಕಿನ ನಂದಗಡದ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಕ್ರಾಂತಿವೀರ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಇದು. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಶಾಲೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸೀಟು ಮೀಸಲು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಶೇಕಡ 65ರಷ್ಟು ಸೀಟುಗಳನ್ನು ಕರ್ನಾಟಕದ ಮಕ್ಕಳಿಗೆ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ. "ವಿಜಯಪುರ ಸೈನಿಕ ಶಾಲೆಯಲ್ಲಿ ಈಗಾಗಲೇ ಶೇ 65ರಷ್ಟು ಸೀಟುಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ," ಎಂದು ಹೇಳಿದರು.
ತಾಲೂಕಿನ ಸಂಗೊಳ್ಳಿಯಲ್ಲಿ ರಾಯಣ್ಣ ವಸತಿ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಯಣ್ಣ ಶಾಲೆಗೆ ಇದೇ ಪ್ರಮಾಣದ ಸೀಟುಗಳನ್ನು ಮೀಸಲಿಡಲಾಗುವುದು ಎಂದರು. ರಾಯಣ್ಣನ ಸ್ಮರಣಾರ್ಥ ಸಂಗೊಳ್ಳಿ, ನಂದಗಡ ಅಭಿವದ್ಧಿ ಹೊಣೆ ಹೊತ್ತಿರುವ ಪ್ರಾಧಿಕಾರಕ್ಕೆ ನೂರು ಎಕರೆ ಜಮೀನು ಮಂಜೂರು ಮಾಡಲಾಗಿದೆ. 267 ಕೋಟಿ ರೂಪಾಯಿ ವೆಚ್ಚದ ಸೈನಿಕ ಶಾಲೆ, ಶಿಲ್ಪವನ ನಿರ್ಮಾಣಕ್ಕೆ 267 ಕೋಟಿ ರೂಪಾಯಿ ವೆಚ್ಚವಿದೆ.
ಪ್ರಸ್ತುತ, ಸೈನಿಕ್ ಶಾಲೆಯಲ್ಲಿ ಹುಡುಗಿಯರು ಸೇರಿದಂತೆ 230 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಶಾಲೆಯು ತನ್ನ ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ. ಸಂಗೊಳ್ಳಿ ರಾಯಣ್ಣನಂತೆಯೇ ನಮ್ಮ ಮಾತೃಭೂಮಿಯ ಮೇಲಿನ ಪ್ರೀತಿಯನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿ ಹೇಳಿದರು. ಎಲ್ಲರೂ ಜಾತಿ, ಧರ್ಮವನ್ನು ಬದಿಗೊತ್ತಿ ದೇಶಾಭಿಮಾನ ಬೆಳೆಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಮನವಿ ಮಾಡಿದರು.


Click it and Unblock the Notifications