ಜೈಪುರ, ನವೆಂಬರ್ 05: ರಾಜಸ್ಥಾನದ 33ಕ್ಕೂ ಅಧಿಕ ಪ್ರದೇಶಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.
ಶೋಧ ಸಂದರ್ಭದಲ್ಲಿ ಲೆಕ್ಕಕ್ಕೆ ಸಿಗದ ಹಣದ ರಶೀತಿ ಹಾಗೂ ಜಾಮೀನು ಖರೀದಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಇದಲ್ಲದೆ ಮರಳನ್ನು ನಗದು ಮೂಲಕ ಮಾರಾಟ ಮಾಡಿರುವುದಕ್ಕೂ ಸಾಕ್ಷ್ಯಗಳು ದೊರೆತಿವೆ.
ಯಾವುದೇ ದಾಖಲೆ ಇಲ್ಲದ 2.31 ಕೋಟಿ ರೂ ಹಾಗೂ ದಾಖಲೆಗಳಿಲ್ಲದ 2.48 ಕೋಟಿ ರೂ. ಬೆಲೆ ಬಾಳುವ ಆಭರಗಳು ದೊರೆತಿವೆ. ಒಟ್ಟಿನಲ್ಲಿ ಈ ಶೋಧದಲ್ಲಿ 50 ಕೋಟಿ ಗೂ ಅಧಿಕ ಲೆಕ್ಕಕ್ಕೆ ಸಿಗದ ಆದಾಯವನ್ನು ಪತ್ತೆ ಮಾಡಲಾಗಿದೆ.

ಕೆಲವು ದಿನಗಳ ಹಿಂದಷ್ಟೇ ಆದಾಯ ತೆರಿಗೆ ಇಲಾಖೆಯು ಮಹಾರಾಷ್ಟ್ರ ಮಾಜಿ ಸಚಿವ ಅಜಿತ್ ಪವಾರ್ ಅವರ ಮನೆ ಮೇಲೂ ಐಟಿ ದಾಳಿ ನಡೆದಿತ್ತು.
ವಶಕ್ಕೆ ಪಡೆಯಳಾಗಿರುವ ಆಸ್ತಿಗಳಲ್ಲಿ ದಕ್ಷಿಣ ದೆಹಲಿಯಲ್ಲಿರುವ ಸುಮಾರು 20 ಕೋಟಿ ಮೌಲ್ಯದ ಫ್ಲಾಟ್ ಸೇರಿದೆ. ನಿರ್ಮಲ್ ಹೌಸ್ನಲ್ಲಿರುವ ಪಾರ್ಥ್ ಪವಾರ್ ಅವರ ಕಚೇರಿಯ ವೆಚ್ಚ ಸುಮಾರು 25 ಕೋಟಿ. ಜಾರಂದೇಶ್ವರ ಸಕ್ಕರೆ ಕಾರ್ಖಾನೆ ಸುಮಾರು 600 ಕೋಟಿ ರೂ.
ಇದಲ್ಲದೇ ಗೋವಾದಲ್ಲಿ ನಿಲಯ ಎಂಬ ರೆಸಾರ್ಟ್ 250 ಕೋಟಿ ರೂ. ಶಾಮೀಲಾಗಿವೆ. ಜಪ್ತಿ ಮಾಡಿರುವ ಆಸ್ತಿ ಬೇನಾಮಿ ಹಣದಿಂದ ಖರೀದಿಸಿಲ್ಲ ಎಂದು ಸಾಬೀತುಪಡಿಸಲು ಅಜಿತ್ ಪವಾರ್ ಗೆ 90 ದಿನಗಳ ಕಾಲಾವಕಾಶ ನೀಡಲಾಗಿದೆ.
ಆದಾಯ ತೆರಿಗೆ ಇಲಾಖೆಯು ಕಳೆದ ತಿಂಗಳು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರರಿಗೆ ಸಂಬಂಧಿಸಿದ ಕನಿಷ್ಠ 70 ನಿವೇಶನಗಳ ಮೇಲೆ ದಾಳಿ ನಡೆಸಿತ್ತು.
ದಾಳಿ ವೇಳೆ ಸುಮಾರು 184 ಕೋಟಿ ರೂ.ಗಳ ಲೆಕ್ಕಕ್ಕೆ ಸಿಗದ ಆದಾಯದ ಪುರಾವೆಗಳು ಪತ್ತೆಯಾಗಿವೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿತ್ತು. ದಾಳಿಯಲ್ಲಿ ಲೆಕ್ಕಕ್ಕೆ ಸಿಗದ 2.13 ಕೋಟಿ ರೂಪಾಯಿ ನಗದು ಮತ್ತು 4.32 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದರು.
12 ಗಂಟೆಗಳ ವಿಚಾರಣೆಯ ನಂತರ ಅನಿಲ್ ದೇಶಮುಖ್ ಅವರನ್ನು ಇಡಿ ಬಂಧಿಸಿದೆ: ಇದಕ್ಕೂ ಮುನ್ನ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು 12 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ತಡರಾತ್ರಿ ಅವರನ್ನು ಬಂಧಿಸಿದೆ. ಈ ಮನಿ ಲಾಂಡರಿಂಗ್ ಪ್ರಕರಣವು ಮಹಾರಾಷ್ಟ್ರ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ನಲ್ಲಿರುವ ಸುಲಿಗೆ ಗ್ಯಾಂಗ್ಗೆ ಸಂಬಂಧಿಸಿದೆ.
ದೇಶಮುಖ್ (71) ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದೇಶಮುಖ್ ಅವರು ತಮ್ಮ ವಿಚಾರಣೆಯ ಸಮಯದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications