2020-2021 ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವ ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರವು 2020-2021ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ (ITR) ಫೈಲಿಂಗ್ ಕೊನೆಯ ದಿನಾಂಕವನ್ನು ಮಾರ್ಚ್ 15ಕ್ಕೆ ವಿಸ್ತರಣೆ ಮಾಡಿದೆ.
2020-2021 ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವ ಕೊನೆಯ ದಿನಾಂಕ ಡಿಸೆಂಬರ್ 31, 2021 ಆಗಿತ್ತು. ಆದರೆ ಈ ಕೊನೆಯ ದಿನಾಂಕ ಕಳೆದರೂ ಹಲವಾರು ಮಂದಿ ಐಟಿ ರಿಟರ್ನ್ ಅನ್ನು ಹಲವಾರು ತಾಂತ್ರಿಕ ಕಾರಣದಿಂದಾಗಿ ಸಲ್ಲಿಕೆ ಮಾಡಲು ಸಾಧ್ಯವಾಗಿರಲಿಲ್ಲ. ಈ ನಡುವೆ ಐಟಿ ರಿಟರ್ನ್ ಸಲ್ಲಿಕೆ ಕೊನೆಯ ದಿನ ವಿಸ್ತರಣೆಯ ಆಗ್ರಹವೂ ಕೇಳಿ ಬಂದಿತ್ತು. ಈಗ ಸರ್ಕಾರ ಕೊನೆಯ ದಿನಾಂಕವನ್ನು ಡಿಸೆಂಬರ್ 31 ರಿಂದ ಮಾರ್ಚ್ 15ಕ್ಕೆ ವಿಸ್ತರಿಸಿದೆ.
ಈ ಬಗ್ಗೆ ಆದಾಯ ತೆರಿಗೆ ಇಲಾಖೆಯು ಟ್ಟಿಟ್ಟರ್ ಮೂಲಕ ಮಾಹಿತಿ ನೀಡಿದೆ. "ಐಟಿ ಕಾಯಿದೆ 1961 ರ ಅಡಿಯಲ್ಲಿ ಹಣಕಾಸು ವರ್ಷ 2021-22ರ ಐಟಿ ರಿಟರ್ನ್ ಫೈಲಿಂಗ್ ಮಾಡುವುದರಲ್ಲಿ ಕೋವಿಡ್ ಕಾರಣದಿಂದಾಗಿ ತೆರಿಗೆದಾರರಿಗೆ ತೊಂದರೆ ಉಂಟಾಗಿದೆ. ಈ ನಿಟ್ಟಿನಲ್ಲಿ ಐಟಿಆರ್ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ," ಎಂದು ಹೇಳಿದೆ. ಹಾಗೆಯೇ ಸುತ್ತೋಲೆಯನ್ನು ಕೂಡಾ ಹೊರಡಿಸಿದೆ.

ಕೊನೆಯ ದಿನಾಂಕ ವಿಸ್ತರಣೆಗೆ ಆಗ್ರಹಿಸಿ ನಡೆದಿದ್ದ ಆನ್ಲೈನ್ ಅಭಿಯಾನ
ಹಲವಾರು ತಾಂತ್ರಿಕ ದೋಷಗಳು ಇರುವ ಕಾರಣದಿಂದಾಗಿ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಬೇಕು ಎಂದು ಹಲವಾರು ತೆರಿಗೆದಾರರು ಆಗ್ರಹ ಮಾಡಿ ಆನ್ಲೈನ್ ಮೂಲಕ ಅಭಿಯಾನವನ್ನು ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ #Extend_Due_Date_Immediately ಎಂಬ ಹ್ಯಾಷ್ಟ್ಯಾಗ್ ಭಾರೀ ಟ್ರೆಂಡ್ ಆಗಿತ್ತು. ಆದಾಯ ತೆರಿಗೆ ರಿಟರ್ನ್ ಪಾವತಿಗೆ ನೀಡಲಾದ ಗಡುವನ್ನು ಕೂಡಲೇ ವಿಸ್ತರಣೆ ಮಾಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಆದಾಯ ತೆರಿಗೆ ರಿಟರ್ನ್ಸ್ ವೆಬ್ಸೈಟ್ನಲ್ಲಿ ತಾಂತ್ರಿಕ ದೋಷ ಕಂಡು ಬಂದಿರುವ ಹಿನ್ನೆಲೆಯಿಂದಾಗಿ ತೆರಿಗೆ ಪಾವತಿದಾರರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಲು ಭಾರೀ ಅಡೆತಡೆ ಉಂಟಾಗುತ್ತಿದೆ. ಈ ಹಿನ್ನೆಲೆ ದಿನಾಂಕ ವಿಸ್ತರಣೆ ಮಾಡಬೇಕು ಎಂದು ಆಗ್ರಹ ಮಾಡಿದ್ದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications