ದೇಶದಲ್ಲಿ ದಿನೇ ದಿನೇ ಗಗನಕ್ಕೇರುತ್ತಿರುವ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ನಾನಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ದೇಶದಲ್ಲಿ ಈರುಳ್ಳಿ ಪೂರೈಕೆಯನ್ನು ಹೆಚ್ಚಿಸಲು ಟರ್ಕಿಯಿಂದ 11,000 ಟನ್ ಈರುಳ್ಳಿ ಆಮದಿಗೆ ಕೇಂದ್ರ ಸರ್ಕಾರ ಮುಂದಾಗಿದೆ.
ದೇಶದ ಕೆಲವು ನಗರಗಳಲ್ಲಿ ಈಗಾಗಲೇ ಈರುಳ್ಳಿ ಬೆಲೆ ನೂರರ ಗಡಿ ದಾಟಿದೆ. ಪೂರೈಕೆಯಲ್ಲಿ ಆಗಿರುವ ವ್ಯತ್ಯಯವನ್ನು ತಗ್ಗಿಸಲು ಟರ್ಕಿಯಿಂದ 11,000 ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರಿ ಸ್ವಾಮ್ಯದ ಎಂಎಂಟಿಸಿಗೆ ಆದೇಶಿಸಿದೆ. ಡಿಸೆಂಬರ್ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಟರ್ಕಿ ಈರುಳ್ಳಿ ಭಾರತದ ಮಾರುಕಟ್ಟೆ ಪ್ರವೇಶಿಸಲಿದೆ.

ಎಂಎಂಟಿಸಿ ಈ ಹಿಂದೆ ಈಜಿಪ್ಟ್ನಿಂದ 6,900 ಟನ್ ಈರುಳ್ಳಿ ಆಮದು ಒಪ್ಪಂದಕ್ಕೆ ಸಹಿ ಹಾಕಿದೆ. ಮುಂದಿನ 10 ದಿನಗಳಲ್ಲಿ ಈರುಳ್ಳಿ ಭಾರತದ ಮಾರುಕಟ್ಟೆ ಪ್ರವೇಶಿಸುವ ನಿರೀಕ್ಷೆಯಿದೆ. ಈರುಳ್ಳಿ ಬೆಲೆ ಮೇಲೆ ನಿಗಾ ಇಡಲು ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಚಿವರ ತಂಡವೊಂದನ್ನು ರಚಿಸಲಾಗಿದೆ. ಈ ತಂಡದಲ್ಲಿ ಹಣಕಾಸು, ಗ್ರಾಹಕ ವ್ಯವಹಾರ, ಕೃಷಿ ಮತ್ತು ಸಾರಿಗೆ ಸಚಿವರು ಸದಸ್ಯರಾಗಿದ್ದಾರೆ.
ಈರುಳ್ಳಿ ರಫ್ತು ಮೇಲೆ ಈಗಾಗಲೇ ನಿಷೇಧಿಸಿದ್ದ ಕೇಂದ್ರ ಸಂಪುಟ, ನವೆಂಬರ್ 20ರಂದು 1.2 ಲಕ್ಷ ಈರುಳ್ಳಿ ಆಮದು ಮಾಡಲು ಅನುಮೋದನೆ ನೀಡಿತ್ತು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications