ದೇಶದ ಆರ್ಥಿಕತೆಯ ಪ್ರಗತಿಯು ಹಿಂಜರಿತದಲ್ಲಿ ಸಿಲುಕಿಕೊಂಡಿದೆ. ಗ್ರಾಮೀಣ ಪ್ರದೇಶಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ರಘುರಾಂ ರಾಜನ್ ಹೇಳಿದ್ದಾರೆ
ಪ್ರಧಾನಿ ಕಚೇರಿಯಲ್ಲಿ(ಪಿಎಂಒ) ಅತಿಯಾದ ಅಧಿಕಾರ ಕೇಂದ್ರಿಕರಣ ಮತ್ತು ಅಧಿಕಾರವೇ ಇಲ್ಲದ ಸಚಿವರು ಅರ್ಥ ವ್ಯವಸ್ಥೆಯನ್ನು ನಿರ್ವಹಿಸುತ್ತಿದ್ದಾರೆ ಎಂದು ಅವರು ಇಂಡಿಯಾ ಟುಡೆಗೆ ನಿಯತಕಾಲಿಕದಲ್ಲಿ ಬರೆದ ಲೇಖನದಲ್ಲಿ ತಿಳಿಸಿದ್ದಾರೆ.

'ದೇಶದ ಆರ್ಥಿಕತೆಯು ಮಂದಗತಿಯ ಬೆಳವಣಿಗೆ ಕಾಣುತ್ತಿರುವುದಕ್ಕೆ ಕೇಂದ್ರ ಸರ್ಕಾರದಲ್ಲಿನ ಕೇಂದ್ರಿಕೃತ ವ್ಯವಸ್ಥೆಯನ್ನು ಅರ್ಥೈಸಿಕೊಳ್ಳಬೇಕು. ಅಧಿಕಾರವು ಕೇವಲ ಪ್ರಧಾನಿ ಸುತ್ತ ಇರುವ ಕೆಲವೇ ಕೆಲವರಲ್ಲಿ ಕೇಂದ್ರಿಕೃತಗೊಂಡಿದೆ. ಪ್ರಧಾನಿ ಕಚೇರಿಯಲ್ಲಿಯೇ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ವ್ಯವಸ್ಥೆ ಪಕ್ಷದ ರಾಜಕೀಯ ಮತ್ತು ಸಾಮಾಜಿಕ ಕಾರ್ಯಸೂಚಿಗೆ ಸೂಕ್ತವಾಗಿ ಹೊಂದಿಕೊಳ್ಳುತ್ತದೆ. ಇದು ಆರ್ಥಿಕ ವಿದ್ಯಮಾನಗಳಿಗೆ ಸರಿ ಹೊಂದುವುದಿಲ್ಲ' ಎಂದು ರಘುರಾಂ ರಾಜನ್ ಹೇಳಿದ್ದಾರೆ.
'ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಕುಂಠಿತ ಆರ್ಥಿಕತೆಯ ಸಮಸ್ಯೆಯ ತೀವ್ರತೆಯನ್ನು ಒಪ್ಪಿಕೊಳ್ಳಬೇಕಾಗಿದೆ. ಆರ್ಥಿಕ ವಿದ್ಯಮಾನಗಳನ್ನು ಸಮರ್ಥವಾಗಿ ನಿರ್ವಹಿಸದ ಸರ್ಕಾರದ ವಿರುದ್ಧದ ಟೀಕೆಗಳನ್ನು ರಾಜಕೀಯ ಪ್ರೇರಿತ ಎಂದು ಬ್ರ್ಯಾಂಡ್ ಮಾಡುವುದನ್ನು ನಿಲ್ಲಿಸಬೇಕು. ಪ್ರಧಾನಿ ಕಚೇರಿ ಇತರೆ ಸಂಗತ್ತಿಗಳತ್ತ ಗಮನ ಹರಿಸಿದಾಗ ಸುಧಾರಣೆಗೆ ಆದ್ಯತೆ ಸಿಗದೆ ಹೋಗುತ್ತದೆ' ಎಂದಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications