ವಾಷಿಂಗ್ಟನ್, ಏಪ್ರಿಲ್ 19: ಭಾರತ ಬಲಿಷ್ಠ ದೇಶವಾಗಿ ಅಭಿವೃದ್ಧಿ ಹೊಂದುತ್ತಿರುವ ಕಾರಣಕ್ಕೆ, ಜಾಗತಿಕ ಮಟ್ಟದಲ್ಲಿ ಕೂಡ ದೊಡ್ಡ ಹೆಸರು ಬರುತ್ತಿದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳಿಂದ ಭಾರತದ ಜೊತೆಗೆ ಉತ್ತಮ ಆರ್ಥಿಕ ಸಂಬಂಧ ಹೊಂದುವ ಗುರಿ ಇದೆ. ಇಂತಹ ಹೊತ್ತಲ್ಲಿ ಭಾರತಕ್ಕೆ ಮತ್ತೊಂದು ಸಿಹಿಯಾದ ಸುದ್ದಿ ಸಿಕ್ಕಿದ್ದು, ಇದೀಗ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನೀಡಿರುವ ಹೇಳಿಕೆ ಭಾರತದ ಆರ್ಥಿಕತೆಗೆ ಮತ್ತಷ್ಟು ಬಲ ತುಂಬುತ್ತಿದೆ.
ಭಾರತ ಎಲ್ಲಾ ಕ್ಷೇತ್ರದಲ್ಲೂ ಬೆಳವಣಿಗೆ ಕಾಣುತ್ತಿದೆ. ಭಾರತದ ಆರ್ಥಿಕತೆಯ ಬೆಳೆವಣಿಗೆಗೆ ಬೇರೆ ಯಾವುದೇ ದೇಶವೂ ಸಾಟಿ ಇಲ್ಲ ಎನ್ನುವ ರೀತಿಯಲ್ಲಿ ಭಾರತ ಈಗ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಇದೇ ಸಮಯದಲ್ಲಿ ಅಂತಾರಾಷ್ಟ್ರೀಯ ಹಣಕಾಸು ನಿಧಿ ಕೂಡ ಈಗ ಭಾರತದ ಬೆನ್ನುತಟ್ಟಿದೆ. ವಿಶ್ವದಲ್ಲೇ ಭಾರತ ಬಲಿಷ್ಠ ಸಾಧಕ ರಾಷ್ಟ್ರಗಳ ಪೈಕಿ ಒಂದಾಗಿದ್ದು, 2024 ರಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 6.8 ರಷ್ಟು ಪ್ರಗತಿ ಕಾಣಲಿದೆ ಎಂದಿದೆ ಐಎಂಎಫ್. ಈ ಹೇಳಿಕೆ ಕೂಡ ಭಾರತದ ಆರ್ಥಿಕತೆ ಬೆಳವಣಿಗೆಗೆ ಮತ್ತಷ್ಟು ಬಲ ನೀಡಿದಂತಾಗಿದೆ.

ಚೀನಾ ಬೆಳವಣಿಗೆ ಕುಸಿತ?
ಮತ್ತೊಂದು ಕಡೆ ಭಾರತದ ನೆರೆಯ ದೇಶವಾದ ಚೀನಾದ ಜಿಡಿಪಿ ಶೇ 4.6 ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ವಿವರಿಸಿದೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್). 2025 ರಲ್ಲಿ ಭಾರತದ ಜಿಡಿಪಿ ಶೇ 6.5 ರಷ್ಟು ಪ್ರಗತಿಯನ್ನು ಕಾಣಲಿದೆ. ದೇಶೀಯ ಬೇಡಿಕೆಯ ದೃಢತೆ ಹಾಗೂ ದುಡಿಯುವ ವಯಸ್ಸಿನ ಜನ ಸಂಖ್ಯೆ ಹೆಚ್ಚಳ ಆರ್ಥಿಕತೆಯ ಬೆಳವಣಿಗೆಗೆ ನೆರವಾಗಲಿದೆ ಎಂಬ ಬಗ್ಗೆ ಮಾಹಿತಿ ನೀಡಲಾಗಿದೆ. ಇದರ ಜೊತೆಗೆ ಭಾರತ ಬಲಿಷ್ಠ ಸಾಧಕ ರಾಷ್ಟ್ರ ಎಂಬ ಹಮ್ಮೆಯ ವಿಚಾರವನ್ನೂ ಐಎಂಎಫ್ ಹಂಚಿಕೊಂಡಿದೆ. 2024 ಹಾಗೂ 2025ನೇ ಸಾಲಿನ ಆರ್ಥಿಕತೆ ಬೆಳವಣಿಗೆ ಪರಿಷ್ಕರಿಸಿದ ಕಾರಣವನ್ನೂ ಈ ಮೂಲಕ ತಿಳಿಸಲಾಗಿದೆ.
ಏಷ್ಯಾದ ಆರ್ಥಿಕತೆಗೆ ಕಂಟಕ?
ಭಾರತದ ಆರ್ಥಿಕತೆ ಬೆಳವಣಿಗೆ ಕಂಡರೂ ಏಷ್ಯಾದ ಬೆಳವಣಿಗೆಯು ಕುಸಿತ ಕಾಣಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 2023 ರಲ್ಲಿ ಶೇ 5.6 ರಷ್ಟಿದ್ದ ಜಿಡಿಪಿ 2024 ರಲ್ಲಿ ಶೇ 5.2 ಕ್ಕೆ ಕುಸಿತ ಕಾಣಲಿದೆ. 2025 ರಲ್ಲಿ ಕೂಡ ಇದೇ ಸ್ಥಿತಿ ಮುಂದುವರಿಸಲಿದ್ದು, ಶೇ 4.9ಕ್ಕೆ ಇಳಿಕೆ ಕಾಣುವ ಬಗ್ಗೆ ಅಂದಾಜು ಮಾಡಿರುವ ಬಗ್ಗೆ ತಿಳಿಸಲಾಗಿದೆ. ಅಲ್ಲದೆ 2023ರಲ್ಲಿ ಶೇ 5.2 ರಷ್ಟು ಇದ್ದ ಚೀನಾದ ಜಿಡಿಪಿ ಈಗ, 2024 ರಲ್ಲಿ ಶೇ 4.6ಕ್ಕೆ ಇಳಿಕೆ ಕಂಡಿದೆ. 2025 ರಲ್ಲಿ ಶೇಕಡಾ 4.1ಕ್ಕೆ ಇಳಿಕೆ ಕಾಣುವ ಅಂದಾಜು ಇದೆ ಎಂದು ಹೇಳಲಾಗಿದೆ. ಆದರೆ ಈ ಸಮಯದಲ್ಲಿ ಭಾರತದ ಆರ್ಥಿಕತೆ ಮಾತ್ರ ಮುಂದೆ ಸಾಗಲಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications